ETV Bharat / state

ರಾಜ್ಯದಲ್ಲಿ ಇಂದು 376 ಮಂದಿಗೆ ಕೋವಿಡ್​ ಸೋಂಕು ದೃಢ: ಸಾವಿನ ಸಂಖ್ಯೆ ಶೂನ್ಯ

author img

By

Published : Jun 8, 2022, 9:31 PM IST

ರಾಜ್ಯದಲ್ಲಿ ಇಂದು 376 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 231 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬುಧವಾರ ಯಾರೂ ಕೂಡ ಸೋಂಕಿಗೆ ಬಲಿಯಾಗಿಲ್ಲ.

corona
corona

ಬೆಂಗಳೂರು: ರಾಜ್ಯದಲ್ಲಿ ಬುಧವಾರ 23,246 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 6,65,11,106 ಮಂದಿಯ ಮೇಲೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇಂದು 376 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 231 ಜನ ಸೋಂಕಿನಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯ ತನಕ ಒಟ್ಟು 39,11,582 ಮಂದಿ ಗುಣಮುಖರಾಗಿದ್ದಾರೆ. ಇಂದು ಸೋಂಕಿನಿಂದ ಮೃತಪಟ್ಟರ ಸಂಖ್ಯೆ ಶೂನ್ಯವಾಗಿದೆ.

ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,623 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.1.61 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ.1.64 ರಷ್ಟಿದೆ. ಸಾವಿನ ಪ್ರಮಾಣ ಶೂನ್ಯವಾಗಿದೆ. ವಾರದ ಸಾವಿನ ಪ್ರಮಾಣ ಶೇ. 0.04 ರಷ್ಟಿದೆ.

ಆರೋಗ್ಯ ಇಲಾಖೆ ಬುಲೆಟಿನ್​
ಆರೋಗ್ಯ ಇಲಾಖೆ ಮೀಡಿಯಾ ಬುಲೆಟಿನ್​

ವಿಮಾನ ನಿಲ್ದಾಣದಲ್ಲಿ ಇಂದು 4,695 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 358 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,89,814 ಕ್ಕೆ ಏರಿಕೆ ಆಗಿದೆ. ಇಂದು 222 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 17,70,323 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮೃತಪಟ್ಟವರ ಸಂಖ್ಯೆ ಶೂನ್ಯವಿದೆ. ಈವರೆಗೆ ಕೋವಿಡ್ ಸಾವಿನ ಸಂಖ್ಯೆ 16,964 ರಷ್ಟಿದೆ. ಸಕ್ರಿಯ ಪ್ರಕರಣಗಳು 2,526 ಇವೆ.

ಇದನ್ನೂ ಓದಿ: ಬಾಗಲಕೋಟೆ: ಬ್ಯಾಂಕ್​ ಕ್ಯಾಶಿಯರ್​ನಿಂದಲೇ ಕೋಟ್ಯಂತರ ರೂಪಾಯಿ ವಂಚನೆ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.