ETV Bharat / state

ಜೆಡಿಎಸ್​ ಪ್ರಣಾಳಿಕೆ ಬಿಡುಗಡೆ : ರೈತ ಚೈತನ್ಯ, ಸಾಲ ಮನ್ನಾ ಸೇರಿದಂತೆ ಏನೆಲ್ಲ ಯೋಜನೆ ?

author img

By

Published : Apr 27, 2023, 6:21 PM IST

Updated : Apr 27, 2023, 6:36 PM IST

karnataka-elections-jds-manifesto-released
ಜೆಡಿಎಸ್​ ಪ್ರಣಾಳಿಕೆ ಬಿಡುಗಡೆ

ವಿವಿಧ ಯೋಜನೆಗಳನ್ನು ಒಳಗೊಂಡ ಜೆಡಿಎಸ್​ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪಂಚರತ್ನ ಯೋಜನೆ, ಆರೋಗ್ಯವೇ ಸಂಪತ್ತು, ರೈತ ಚೈತನ್ಯ, ವಸತಿ ಆಸರೆ, ಆಡಳಿತ ಸುಧಾರಣೆ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಜೆಡಿಎಸ್‌ ಇಂದು ಬಿಡುಗಡೆ ಮಾಡಿದೆ.

ಗುರುವಾರ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಚುನಾವಣಾ ಪ್ರಣಾಳಿಕೆಯಾದ 'ಜನತಾ ಪ್ರಣಾಳಿಕೆ'ಯನ್ನು ಬಿಡುಗಡೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಬಿ ಎಂ ಫಾರೂಕ್, ಪಕ್ಷದ ಕಾರ್ಯಾಧ್ಯಕ್ಷ ಅಲ್ಕೋಡ್ ಹನುಮಂತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಜೆಡಿಎಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.

1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ :

ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ.

ವಿಧವಾ ವೇತನ 900 ರೂ.ನಿಂದ 2,500 ರೂ.ಗಳಿಗೆ ಹೆಚ್ಚಳ.

ವರ್ಷಕ್ಕೆ 5 ಅಡುಗೆ ಅನಿಲ‌ ಸಿಲೆಂಡರ್ ಉಚಿತ

ಗರ್ಭಿಣಿಯರಿಗೆ 6 ತಿಂಗಳುಗಳ‌ ಕಾಲ 6000 ರೂಪಾಯಿ ಭತ್ಯೆ

ಅಂಗನವಾಡಿ ಕಾರ್ಯೆಕರ್ತೆಯರಿಗೆ 5000 ರೂಪಾಯಿ ವೇತನ

ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಪಿಂಚಣೆ

Karnataka elections: JDS manifesto released
ಜೆಡಿಎಸ್​ ಪ್ರಣಾಳಿಕೆ ಬಿಡುಗಡೆ

2. ರೈತ ಬಂಧು ಯೋಜನೆ :

ಪ್ರತಿ ಎಕರೆಗೆ 10 ಸಾವಿರ ರೂಪಾಯಿ ಸಹಾಯ ಧನ

ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ 2 ಸಾವಿರ ಸಹಾಯಧನ

ರೈತ ಯುವಕರನ್ನ ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ಪ್ರೋತ್ಸಾಹ ಧನ

3. ಹಿರಿಯ ನಾಗರಿಕರಿಗೆ ಸನ್ಮಾನ :

ಹಿರಿಯ ನಾಗರಿಕ ಮಾಸಾಶನ ₹1200 ರಿಂದ ₹5 ಸಾವಿರಕ್ಕೆ ಏರಿಕೆ

4. ವಿಕಲಚೇತನರಿಗೆ ಆಸರೆ :

ವಿಕಲಚೇತನರ ಪಿಂಚಣಿ 600 ರೂಪಾಯಿಂದ 2500 ರೂಪಾಯಿಗೆ ಹೆಚ್ಚಳ

Karnataka elections: JDS manifesto released
ಜೆಡಿಎಸ್​ ಪ್ರಣಾಳಿಕೆ ಬಿಡುಗಡೆ

5. ಆರಕ್ಷಕರಿಗೆ ಅಭಯ :

ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ಗಳಿಗೆ ನೀಡುವ ವೇತನ, ಸೌಲಭ್ಯದಲ್ಲಿ ತಾರತಮ್ಯ

ಈ ತಾರತಾಮ್ಯ ಹೋಗಲಾಡಿಸಿ ನ್ಯಾಯಯುತ ವೇತನ ಸೌಲಭ್ಯ ನೀಡಿಕೆ

6. ಕನ್ನಡವೇ ಮೊದಲು :

ಕೇಂದ್ರ ಸರಕಾರದ ನಾಗರಿಕ ಸೇವೆಗಳಾದ ರೈಲ್ವೆ, ಬ್ಯಾಂಕಿಂಗ್, ರಾಜ್ಯದಲ್ಲಿರುವ ಕೇಂದ್ರ ಸಾರ್ವಜನಿಕ ಉದ್ಯಮಗಳು, ಕೇಂದ್ರ ಭದ್ರತಾಪಡೆ ಇನ್ನಿತರೆ ನೇಮಕದಲ್ಲಿ ಕನ್ನಡದಲ್ಲೇ ಪರೀಕ್ಷೆ ನಡೆಸಿ ಕನ್ನಡಿಗರಿಗೆ ಆದ್ಯತೆ ನೀಡಲು ಕೇಂದ್ರ ಸರಕಾರದ ಮೇಲೆ ಒತ್ತಡ

ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಅಗತ್ಯ ಕಾಯಿದೆ ಜಾರಿ

7. ಶಿಕ್ಷಣವೇ ಆಧುನಿಕ ಶಕ್ತಿ :

ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 6.8 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ, ಆರ್ಥಿಕವಾಗಿ ಹಿಂದುಳಿದಿರುವ 18 ವರ್ಷ ತುಂಬಿರುವ 60,000 ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್

8. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ :

ನ್ಯಾ.ರಾಜೇಂದ್ರ ಸಾಚರ್ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಅಧ್ಯಯನಕ್ಕೆ ಸಮಿತಿ ಮತ್ತು ಸಮಿತಿ ವರದಿ ಆಧರಿಸಿ ಜಾರಿಗೆ ಕ್ರಮ

ರಾಜ್ಯದಲ್ಲಿನ ವಕ್ಫ ಆಸ್ತಿ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಉನ್ನತ ಮಟ್ಟದ ಸಮಿತಿ ರಚನೆ ಅಗತ್ಯ ಅನುದಾನ ನೀಡಿಕೆ

ಅಶಕ್ತ ಪುರುಷ ಮತ್ತು ಅಬಲೆಯರ ಆಶ್ರಯಕ್ಕೆ ಸಹಾರಾ ಯೋಜನೆ ಜಾರಿ

Karnataka elections: JDS manifesto released
ಜೆಡಿಎಸ್​ ಪ್ರಣಾಳಿಕೆ ಬಿಡುಗಡೆ

9. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ :

ಕೆ.ಎಸ್.ಎಫ್.ಸಿ ಪ್ರಸ್ತುತ ಶೇ. 4ರಷ್ಟು ಬಡ್ಡಿ ವಿಧಿಸುತ್ತಿದ್ದು, ಇದಕ್ಕೆ ಇನ್ನಷ್ಟು ಸಬ್ಸಿಡಿ ನೀಡಿ SC-ST ಉದ್ದಿಮೆದಾರರಿಗೆ ಬಡ್ಡಿದರ ಶೇ.4ರಿಂದ ಶೇ.2ಕ್ಕೆ ಇಳಿಸುವುದು

ಎಸ್​ಸಿ-ಎಸ್​ಟಿ ಉದ್ದಿಮೆದಾರು/ಗುತ್ತಿಗೆದಾರರಿಗೆ ಶೇ.2 ಬಡ್ಡಿ ದರದಲ್ಲಿ 5 ಕೋಟಿ ವರೆಗೆ ಬಂಡವಾಳ ಒದಗಿಸಲಾಗುವುದು

ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ವಿವಿಧ ವಸತಿ ಯೋಜನೆಗಳಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಮನೆ ಹಂಚಿಕೆ

10. ಆರೋಗ್ಯ ಸಂಪತ್ತು :

ದುಬಾರಿ ವೆಚ್ಚದ ವೈದ್ಯಕೀಯ ಶಸ್ತ್ರಚಿಕಿತ್ಸೆಗಳಾದ ಮೂಳೆಮಜ್ಜೆ ಚಿಕಿತ್ಸೆ, ಹೃದಯ, ಶ್ವಾಸಕೋಶ, ಯಕೃತ್ ಬದಲಾಯಿಸುವ ಶಸ್ತ್ರಚಿಕಿತ್ಸೆಗಳಿಗೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.ವರೆಗಿನ ಪರಿಹಾರ

ಈ ಪರಿಹಾರ 24 ಗಂಟೆಗಳಲ್ಲೇ ನೀಡಲು ಕ್ರಮ

ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆಯಡಿಯಲ್ಲಿ ಸೇರ್ಪಡೆಯಾಗದ ಕಾಯಿಲೆಗಳಿಗೂ ಪರಿಹಾರ

ಜಯದೇವ ಮಾದರಿಯಲ್ಲಿ ಜಿಲ್ಲೆಗೊಂದು ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ

ರಾಜ್ಯದಲ್ಲಿ ನಿಮ್ಹಾನ್ಸ್ ಮಾದರಿಯಲ್ಲಿ 500 ಹಾಸಿಗೆಯುಳ್ಳ ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ ಸ್ಥಾಪನೆ

Karnataka elections: JDS manifesto released
ಜೆಡಿಎಸ್​ ಪ್ರಣಾಳಿಕೆ ಬಿಡುಗಡೆ

11. ಯುವಜನ ಸಬಲೀಕರಣ :

ಒಂದು ವರ್ಷದ ಕೌಶಲ್ಯ ತರಬೇತಿಯಲ್ಲಿ ತೊಡಗಿಕೊಳ್ಳುವ ಯುವಕ ಹಾಗೂ ಯುವತಿಯರಿಗೆ ಮಾಸಿಕ 8000 ರೂ. ಭತ್ಯೆ

ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ ವಲಯಗಳಲ್ಲಿ ತೊಡಗಿಸಿಕೊಳ್ಳುವ ಯುವಕ/ಯುವತಿಯರಿಗೆ ನೆರವು

ಕೈಗಾರಿಕೆ ಉತ್ಪನ್ನ ಘಟಕ ಸ್ಥಾಪನೆಗೆ 10 ಲಕ್ಷ ರೂ. ಸಹಾಯಧನ

ತರಬೇತಿ, ಸೇವೆಗಳ ವಲಯಗಳಲ್ಲಿ ತೊಡಗಿಸಿಕೊಳ್ಳುವವರಿಗೆ 3 ಲಕ್ಷ ರೂ. ಸಹಾಯಧನ

ಸಣ್ಣ ಉದ್ಯಮವಾಗಿ ವ್ಯಾಪಾರ-ವಹಿವಾಟು ನಡೆಸುವವರಿಗೆ 2 ಲಕ್ಷ ರೂ. ಸಹಾಯಧನ

ಸಣ್ಣ ಉದ್ಯಮ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕುಗಳ ಮುಖೇನ ಸಾಲ

12. ವೃತ್ತಿನಿರತ ವಕೀಲರ ಅಭ್ಯುದಯ :

ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯಿದೆ ಜಾರಿ

ನೂತನವಾಗಿ ನೋಂದಾಯಿತ ವಕೀಲರಿಗೆ ಈಗ ನೀಡುವ ಮಾಸಿಕ ಭತ್ಯೆ 2,000ದಿಂದ 3,000 ರೂ.ಗಳಿಗೆ ಹೆಚ್ಚಳ.

Last Updated :Apr 27, 2023, 6:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.