ETV Bharat / state

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ..! ನಡ್ಡಾಗೆ ಪತ್ರ

author img

By

Published : Apr 11, 2023, 3:08 PM IST

Updated : Apr 11, 2023, 7:38 PM IST

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಟಿಕೆಟ್​ ಹಂಚಿಕೆಗೆ ಮುನ್ನವೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Etv Bharat
Etv Bharat

ಬೆಂಗಳೂರು: ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಕೆ ಎಸ್​ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿ ಹೈಕಮಾಂಡ್​ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡುತ್ತಿರುವ ಬೆನ್ನಲ್ಲೇ ಹಾಗೂ ಟಿಕೆಟ್​ ಘೋಷಣೆ ಮಾಡುವ ಮುನ್ನವೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

  • BJP MLA from Shivamogga KS Eashwarappa writes to BJP National President JP Nadda stating that he has decided not to contest the upcoming Karnataka Assembly elections pic.twitter.com/DVKeANnAD0

    — ANI (@ANI) April 11, 2023 " class="align-text-top noRightClick twitterSection" data=" ">

ತಮ್ಮ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಘೋಷಣೆ ಮಾಡದಂತೆ ಅವರು ಹೈಕಮಾಂಡ್​ ನಾಯಕರಿಗೆ ಮನವಿ ಮಾಡಿದ್ಧಾರೆ. ಈ ಬಗ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಈಶ್ವರಪ್ಪ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಇದೇ ವೇಳೆ ಅವರು ಪಕ್ಷದ ನಾಯಕರಿಗೆ ಧನ್ಯವಾದವನ್ನೂ ಸಲ್ಲಿಕೆ ಮಾಡಿದ್ದಾರೆ. ಕಳೆದ 40 ವರ್ಷಗಳಿಂದ ಬೂತ್​ ಮಟ್ಟದಿಂದ ಉಪಮುಖ್ಯಮಂತ್ರಿ ಆಗುವವರೆಗೂ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಮೊದಲು ಅವರು ತಮ್ಮ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು ಎಂಬ ಸುದ್ದಿಯೂ ಇದೆ. ಈಶ್ವರಪ್ಪ ಈ ಪತ್ರ ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಕ್ಷೇತ್ರದಲ್ಲಿ ಟಿಕೆಟ್​ ವಿಚಾರವಾಗಿ ಈಶ್ವರಪ್ಪ ಹಾಗೂ ವಿಧಾನ ಪರಿಷತ್​ ಸದಸ್ಯ ಆಯನೂರು ಮಂಜುನಾಥ ನಡುವೆ ವಾಕ್ಸಮರ ಕೂಡಾ ನಡೆದಿತ್ತು. ಈ ಮಧ್ಯೆ ಅವರು ದಿಢೀರ್​ ಎಂದು ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಅವರಿಗೀಗ 74 ವರ್ಷ ವಯಸ್ಸಾಗಿದೆ. 75 ವರ್ಷ ಆದವರಿಗೆ ಟಿಕೆಟ್​ ನೀಡುವುದಿಲ್ಲ ಎಂಬ ನಿಯಮ ಪಕ್ಷದಲ್ಲಿ ಅಲಿಖಿತವಾಗಿದೆ. ಇದು ಸಹ ಅವರ ನಿವೃತ್ತಿಗೆ ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇನ್ನು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಇವರ ಬೆನ್ನಲ್ಲೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಹ ಚುನಾವಣಾ ರಾಜಕೀಯಕ್ಕೆ ಗುಡ್​ ಬೈ ಹೇಳಿದ್ದರು. ಅಷ್ಟೇ ಅಲ್ಲ ದಾವಣಗೆರೆ ಉತ್ತರ ಶಾಸಕ ಎಸ್ ಎ ರವೀಂದ್ರನಾಥ ಸಹ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ಈ ಮೂವರ ಬಳಿಕ ಈಗ ಕೆ ಎಸ್​ ಈಶ್ವರಪ್ಪ ಸಹ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಾಗಿ ಘೋಷಣೆ ಮಾಡಿದ್ದಾರೆ.

ಬಿಜೆಪಿಯಲ್ಲಿ ಈಗ ಒಟ್ಟು ನಾಲ್ವರು ನಾಯಕರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದಂತಾಗಿದೆ. ಈ ಮೂಲಕ ಇವರೆಲ್ಲ ಹೊಸ ಮುಖಗಳಿಗೆ ಅವಕಾಶ ಕಲ್ಪಿಸದಂತಾಗಿದೆ. ಈ ನಡುವೆ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಹೊಸ ಹೊಸ ರಣತಂತ್ರಗಳನ್ನು ರೂಪಿಸುತ್ತಿದೆ. ಈ ನಡುವೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೆ ಹೊಸಬರಿಗೆ ಅವಕಾಶ ನೀಡುವಂತೆ ಸೂಚನೆ ನೀಡಿದೆ. ಆದರೆ ಇದಕ್ಕೆ ಅವರು ತಣ್ಣನೆಯ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಈಶ್ವರಪ್ಪ ಅವರ ನಿರ್ಧಾರವನ್ನು ಹಲವು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.

ಇದನ್ನು ಓದಿ: ನಾಳೆಯಿಂದ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ ಹೆಚ್.ಡಿ.ದೇವೇಗೌಡರು

Last Updated :Apr 11, 2023, 7:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.