ETV Bharat / state

ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನಕ್ಕೆ ಹರಿದು ಬಂದ ಜನಸಾಗರ.. ಕಂಠೀರವ ಕ್ರೀಡಾಂಗಣದಲ್ಲಿ ಮೊಳಗಿದ ಜಯಘೋಷ

author img

By

Published : May 20, 2023, 9:44 AM IST

Updated : May 20, 2023, 1:40 PM IST

ಸಿಎಂ ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನತೆ ಆಗಮಿಸಿದ್ದರು.

people
ಜನಸಾಗರ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅಭಿಮಾನಿಗಳು

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಸಚಿವರಾಗಿ 8 ಜನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಜನರು ಸಿದ್ದರಾಮಯ್ಯ ಹಾಗು ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ತಮ್ಮ ನೆಚ್ಚಿನ ನಾಯಕರ ಪ್ರಮಾಣ ವಚನ ಕಾರ್ಯಕ್ರಮವನ್ನು ಜನತೆ ಸ್ಕ್ರೀನ್​ಗಳ ಮೂಲಕ ಕಣ್ತುಂಬಿಕೊಂಡರು.

ಇನ್ನು ಸಿದ್ದರಾಮಯ್ಯ, ಡಿಕೆಶಿ ವೇದಿಕೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಅವರವರ ಅಭಿಮಾನಿಗಳು ಜಯ ಘೋಷಣೆಗಳನ್ನು ಹಾಕಿದರು. ಇಡೀ ಕಂಠೀರವ ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಜನರ ಜಯಘೋಷ ಎಲ್ಲೆಡೆ ಪ್ರತಿಧ್ವನಿಸಿತು. ಕಾರ್ಯಕ್ರಮ ಆರಂಭವಾಗುವ ಮೊದಲೇ ಸಾರ್ವಜನಿಕ ಪ್ರವೇಶ ದ್ವಾರದ ಬಳಿ ನೂಕು ನುಗ್ಗಲಾಗಿ ಪೊಲೀಸರು ಲಘು ಲಾಠಿ ಚಾರ್ಜ್​ ಬಳಸಿದ ಪ್ರಸಂಗವೂ ನಡೆಯಿತು. ನೂಕು ನುಗ್ಗಲು ಉಂಟಾದ ಪರಿಣಾಮ ಓರ್ವನ ಹಣೆಗೆ ಹಾಗೂ ಮತ್ತೋರ್ವನ ಹೊಟ್ಟೆಗೆ ಗಾಯವಾಗಿದೆ. ಇದೇ ವೇಳೆ ಟ್ರಾಫಿಕ್ ಇನ್ಸ್ಪೆಕ್ಟರ್ ಓರ್ವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

cng
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಗೆ ಸಾಥ್​ ನೀಡಿದ ಡಿಕೆಶಿ

ದೆಹಲಿಯಿಂದ ಆಗಮಿಸಿದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ: ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹಾಗು ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿಯಿಂದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಆಗಮಿಸಿದರು. ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಸ್ತಾರ ವಿಮಾನದಲ್ಲಿ ಟರ್ಮಿನಲ್ 2 ಗೆ ಆಗಮಿಸಿದ ರಾಹುಲ್ ಗಾಂಧಿ ಹಾಗು ಪ್ರಿಯಾಂಕಾ ಗಾಂಧಿಯವರನ್ನು ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಂಡರು.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಡಿ ಕೆ ಶಿವಕುಮಾರ್: ಇದಕ್ಕೂ ಮುನ್ನ ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಏರ್ ಇಂಡಿಯಾ ವಿಮಾನದ ಮೂಲಕ ಕೆಐಎಬಿಯನ್ನು ಡಿಕೆಶಿ ತಲುಪಿದ್ದರು. ಇನ್ನು ಡಿ ಕೆ ಶಿ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಬರಮಾಡಿಕೊಂಡರು.

ಸಿದ್ದರಾಮಯ್ಯ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರ್ಯಕ್ರಮಕ್ಕೆ ಭಾರಿ ಪ್ರಮಾಣದಲ್ಲಿ ಜನರು ಆಗಮಿಸಿದ್ದಾರೆ. ಲಕ್ಷಾಂತರ ಜನ ಸೇರುವ ಸಾರ್ವಜನಿಕ ಪ್ರವೇಶ ದ್ವಾರದಲ್ಲಿ ಕಡಿಮೆ ಸಿಬ್ಬಂದಿಯನ್ನು ನಿಯೋಜಿಸಿದ್ದರಿಂದ ಪ್ರವೇಶ ದ್ವಾರದಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಪರಿಣಾಮ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆಯಿತು.

ನೂಕು ನುಗ್ಗಲು ಉಂಟಾದ ಪರಿಣಾಮ ಓರ್ವನ ಹಣೆಗೆ ಹಾಗೂ ಮತ್ತೋರ್ವನ ಹೊಟ್ಟೆಗೆ ಗಾಯವಾಗಿದೆ. ಇದೇ ವೇಳೆ ಟ್ರಾಫಿಕ್ ಇನ್ಸ್ಪೆಕ್ಟರ್ ಓರ್ವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕ ಪ್ರವೇಶ ದ್ವಾರದ ಬಳಿ ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಭೇಟಿ ನೀಡಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ‌. ಘಟನೆಯ ಬಳಿಕ ಪ್ರವೇಶ ದ್ವಾರದ ಬಳಿ ಪೊಲೀಸ್ ಸಿಬ್ಬಂದಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ: ಗ್ಯಾರಂಟಿ ಮೇಲೆನೇ ಎಲ್ಲರ ಚಿತ್ತ..

Last Updated : May 20, 2023, 1:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.