ETV Bharat / state

ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ವಜ್ಜಲ್​ ಬಳಿ 16 ಜೀವಂತ ಗುಂಡುಗಳು ಪತ್ತೆ: ಮಾಜಿ ಶಾಸಕ ಪೊಲೀಸ್​ ವಶಕ್ಕೆ

author img

By

Published : Dec 20, 2020, 10:06 AM IST

Updated : Dec 20, 2020, 12:11 PM IST

ನಿಗಮದ ಅಧ್ಯಕ್ಷ ಮಾನಪ್ಪ ವಜ್ಜಲ್​
ನಿಗಮದ ಅಧ್ಯಕ್ಷ ಮಾನಪ್ಪ ವಜ್ಜಲ್​

09:59 December 20

ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರಾಗಿರುವ ಮಾಜಿ ಶಾಸಕ ಮಾನಪ್ಪ ವಜ್ಜಲ್​ ಬ್ಯಾಗ್​ನಲ್ಲಿ 16 ಜೀವಂತ ಗುಂಡು ಪತ್ತೆಯಾದ ಹಿನ್ನೆಲೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಮಾನಪ್ಪ ವಜ್ಜಲ್​ ಬ್ಯಾಗ್​ನಲ್ಲಿ 16 ಜೀವಂತ ಗುಂಡು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ಮಾಜಿ ಶಾಸಕ ವಜ್ಜಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. 

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ಪ್ರಯಾಣಿಸುವ ಸಂದರ್ಭದಲ್ಲಿ ತಪಾಸಣೆ ನಡೆಸಿದಾಗ ಅವರ ಬ್ಯಾಗ್​​ನಲ್ಲಿ ಜೀವಂತ ಗುಂಡುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಮಾಜಿ ಶಾಸಕ ಮಾನಪ್ಪ ವಜ್ಜಲ್​ ಅವರನ್ನು​ ಏರ್​ಪೋರ್ಟ್​ನಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ಬಳಿಕ, ವಿಚಾರಿಸಿದಾಗ ಗನ್​ ಲೈಸನ್ಸ್​ ಇದ್ದು, ಕಣ್ತಪ್ಪಿನಿಂದ ಬ್ಯಾಗ್​ನಲ್ಲಿ ಬಂದಿದೆ ಎಂದು ಹೇಳಿದ್ದಾರೆ. ಈ ಬಳಿಕ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. 

Last Updated :Dec 20, 2020, 12:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.