ETV Bharat / state

Hit and Run: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ವ್ಯಕ್ತಿ ಬಲಿ

author img

By

Published : Jun 25, 2023, 10:27 PM IST

Updated : Jun 25, 2023, 11:04 PM IST

ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

man-killed-in-hit-and-run-in-bengaluru
ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ವ್ಯಕ್ತಿ ಬಲಿ

ಬೆಂಗಳೂರು : ಕಾರು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ‌ ಭಾನುವಾರ ನಡೆದಿದೆ. ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ. ಮೃತರನ್ನು ಕೃಷ್ಣಪ್ಪ (55) ಎಂದು ಗುರುತಿಸಲಾಗಿದೆ.

ಪ್ರಕಾಶ್ ನಗರದ ನಿವಾಸಿಯಾಗಿರುವ ಕೃಷ್ಣಪ್ಪ ಇಂದು ಬೆಳಗ್ಗೆ ರಾಜ್ ಕುಮಾರ್ ರಸ್ತೆ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನವರಂಗ್ ಸಿಗ್ನಲ್‌ ಬಳಿ ಕಾರು ಚಾಲಕ ಯೂಟರ್ನ್ ತೆಗೆಯುವಾಗ ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಪ್ಪ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಸಂಚಾರ ಪೊಲೀಸರು ಪರಾರಿಯಾಗಿದ್ದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಕಾರಿನ ಡಿಕ್ಕಿ ರಭಸಕ್ಕೆ ಕಿತ್ತುಬಂದ ವಿದ್ಯುತ್ ಕಂಬ.. ಯಾವ್​ ಕಂಪನಿ ಕಾರಣ್ಣಾ ಇದು.. ಅಂತಿರೋ ನೆಟ್ಟಿಗರು: ವಿಡಿಯೋ ವೈರಲ್

Last Updated :Jun 25, 2023, 11:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.