ಬೆಂಗಳೂರು: ನಾಗಸಂದ್ರ ಮತ್ತು ಮಂತ್ರಿಸ್ವ್ಕೇರ್-ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ನಾಳೆ ಸ್ಥಗಿತಗೊಳ್ಳಲಿದೆ.
ಹಸಿರು ಮಾರ್ಗದಲ್ಲಿರುವ ಮಹಾಕವಿ ಕುವೆಂಪು ರಸ್ತೆ ಮತ್ತು ರಾಜಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸಿವಿಲ್ ನಿರ್ವಹಣಾ ಕಾರ್ಯವನ್ನು ಬಿಎಂಆರ್ಸಿಎಲ್ ಕೈಗೆತ್ತಿಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಗಸಂದ್ರ ಮತ್ತು ಮಂತ್ರಿ ಸ್ವ್ಕೇರ್-ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ನಾಳೆ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ( 2 ಗಂಟೆಗಳ ಕಾಲ) ಸ್ಥಗಿತಗೊಳಿಸಲಾಗಿದೆ.
ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ರೈಲು ಸೇವೆ ಪುನಃ 9 ಗಂಟೆ ನಂತರ ಆರಂಭಗೊಳ್ಳಲಿದೆ. ಅದಾಗ್ಯೂ, ಹಸಿರು ಮಾರ್ಗದ ಯಲಚೇನಹಳ್ಳಿ ಮತ್ತು ಮಂತ್ರಿ ಸ್ವ್ಕೇರ್-ಸಂಪಿಗೆ ರಸ್ತೆ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಎಂದಿನಂತೆ ಸಂಚರಿಸಲಿವೆ.
ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಿಗಮ ಸೂಚನೆ ನೀಡಿದೆ.