ETV Bharat / state

ರಾಜಕೀಯ ನೆಲೆಯಲ್ಲಿ ಹೇಳಿದ ಮಾತುಗಳು, ಸಿದ್ದರಾಮಯ್ಯರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ: ಸಚಿವ ಅಶ್ವತ್ಥನಾರಾಯಣ್​

author img

By

Published : Feb 16, 2023, 1:03 PM IST

Updated : Feb 16, 2023, 4:07 PM IST

Minister Ashwattha Narayana
ಸಚಿವ ಅಶ್ವತ್ಥ ನಾರಾಯಣ

ಡಾ ಅಶ್ವತ್ಥನಾರಾಯಣ್ ಅವರು ಸಿದ್ದರಾಮಯ್ಯ ವಿರುದ್ಧ ಆಡಿದ ಮಾತುಗಳಿಗೆ ಮಾಧ್ಯಮಗಳು ಹಾಗೂ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಡಾ ಅಶ್ವತ್ಥ ನಾರಾಯಣ

ಬೆಂಗಳೂರು: ನಾನು ಆ ಮಾತುಗಳನ್ನು ವ್ಯಕ್ತಿಗತವಾಗಿ ಹೇಳಿರುವಂತದ್ದಲ್ಲ. ರಾಜಕೀಯವಾಗಿ ಹಾಗೂ ಸೈದ್ಧಾಂತಿಕವಾಗಿ ಹೇಳಿರುವ ಮಾತುಗಳು ಅವು. ನನಗೆ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ವೈಯ್ಯಕ್ತಿಕ ದ್ವೇಷವಿಲ್ಲ. ನಾನು ಹೇಳಿರುವ ಮಾತುಗಳನ್ನು ತಿರುಚಿ ಬಿತ್ತರಿಸುವುದು ಸಿದ್ದರಾಮಯ್ಯ ಅವರಿಗೆ ನಿಮಿಷದ ಕೆಲಸ. ನಾನು ಹೇಳಿದ ಮಾತುಗಳಿಂದ ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಸಚಿವ ಡಾ ಅಶ್ವತ್ಥನಾರಾಯಣ್​ ಅವರು ಮರು ಹೇಳಿಕೆ ನೀಡಿದ್ದಾರೆ.

ಮಂಡ್ಯದ ಸಾತನೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ ಸಚಿವ ಅಶ್ವತ್ಥ ನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದರು. ಅಶ್ವತ್ಥನಾರಾಯಣ್​ ಅವರ ಹೇಳಿಕೆಗಳಿಂಂದ ಆಕ್ರೋಶಗೊಂಡ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್​ಗಳ ಮೂಲಕ ಸಚಿವರಿಗೆ ಟಾಂಗ್​ ನೀಡಿದ್ದರು. ಜನರನ್ನು ಯಾಕೆ ಪ್ರಚೋದಿಸುತ್ತೀರಾ? ಸ್ವತಃ ನೀವೇ ಕೋವಿ ಹಿಡಿದುಕೊಂಡು ಬನ್ನಿ ಎಂದು ಚಾಲೆಂಜ್​ ಹಾಕಿದ್ದರು.

  • ಈ ಬಾರಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎಂಬರ್ಥದಲ್ಲಿ ಹೇಳಿದ ಮಾತಿಗೆ "ಕೋವಿ ಹಿಡಿದು ಬನ್ನಿ" ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ನಮಗೆ ಮತಯಂತ್ರವೇ ಕೋವಿ, ಮತದಾರರು ಕಾಂಗ್ರೆಸ್ ವಿರುದ್ದ ಒತ್ತುವ ಒಂದೊಂದು ಮತಗಳೂ ಒಂದೊಂದು ಬುಲೆಟ್‌ಗಳೇ.

    ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಂತಿಮ ಮೊಳೆ ಹೊಡೆಯಲು ಜನತೆಯೇ ತೀರ್ಮಾನಿಸಿದ್ದಾರೆ.

    1/2 pic.twitter.com/A11Lk6UAKL

    — Dr. Ashwathnarayan C. N. (@drashwathcn) February 16, 2023 " class="align-text-top noRightClick twitterSection" data=" ">

ಈ ಟ್ವೀಟ್​ಗಳಿಗೆ ಮಾಧ್ಯಮಗಳ ಹಾಗೂ ಟ್ವೀಟ್​ಗಳ ಮೂಲಕ ಪ್ರತಿಕ್ರಿಯೆ ನೀಡಿರುವ ಅಶ್ವತ್ಥ ನಾರಾಯಣ ಅವರು, ಈ ಬಾರಿ ಕಾಂಗ್ರೆಸ್​ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬರ್ಥದಲ್ಲಿ ಹೇಳಿದ ಮಾತಿಗೆ 'ಕೋವಿ ಹಿಡಿದು ಬನ್ನಿ' ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ನಮಗೆ ಮತಯಂತ್ರವೇ ಕೋವಿ, ಮತದಾರರು ಕಾಂಗ್ರೆಸ್ ವಿರುದ್ದ ಒತ್ತುವ ಒಂದೊಂದು ಮತಗಳೂ ಒಂದೊಂದು ಬುಲೆಟ್‌ಗಳೇ. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಂತಿಮ ಮೊಳೆ ಹೊಡೆಯಲು ಜನತೆಯೇ ತೀರ್ಮಾನಿಸಿದ್ದಾರೆ.

ಟಿಪ್ಪುವನ್ನು ಯಾವ ರೀತಿ ವಿಜೃಂಭಣೆ ಮಾಡುತ್ತಿದ್ದಾರೆ, ಅವರ ಜಯಂತಿಯನ್ನು ಯಾವ ರೀತಿ ಕಾಂಗ್ರೆಸ್​ ಪಕ್ಷದವರು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಅದನ್ನು ಖಂಡಿಸುವಂತಹದ್ದು ಆಗಬೇಕು. ಅದರ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವಂತಹದ್ದಾಗಬೇಕು. ಬರುವಂತಹ ಚುನಾವಣೆಯಲ್ಲಿ ಜನರ ಬೆಂಬಲವನ್ನು ನಮ್ಮ ಪರವಾಗಿ ಪಡೆದುಕೊಳ್ಳಬೇಕು. ಕಾಂಗ್ರೆಸ್​ ಪಕ್ಷವನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ನಾವಿವತ್ತು ಪ್ರಜಾಪ್ರಭುತ್ವದಲ್ಲಿದ್ದೇವೆ. ಯಾವುದೋ ಯುದ್ಧದ ಕಾಲದಲ್ಲಿ ಇಲ್ಲ ನಾವು.

  • ಇತಿಹಾಸ ತಿರುಚಿ, ಮತಾಂಧ ಟಿಪ್ಪುವಂಥವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಬಿಂಬಿಸಿದ ಕಾಂಗ್ರೆಸ್ ಹಾಗೂ @siddaramaiah ಅವರಿಗೆ ನನ್ನ ಮಾತನ್ನು ತಿರುಚಿ ಬಿತ್ತರಿಸುವುದು ಐದು ನಿಮಿಷದ ಕೆಲಸ.

    ಮುಂಬರುವ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರ ಸಿಗದೇ, ಮಾನಸಿಕವಾಗಿ ಕುಗ್ಗಿರುವ ಸಿದ್ದರಾಮಯ್ಯ ಅವರಿಗೆ ಕ್ಷುಲ್ಲಕ ವಿಷಯಗಳೇ ಆಸರೆಯಾಗಿದೆ.

    2/2 pic.twitter.com/6wZ2tiB7S4

    — Dr. Ashwathnarayan C. N. (@drashwathcn) February 16, 2023 " class="align-text-top noRightClick twitterSection" data=" ">

ಆ ಕಾಲದಲ್ಲಿ ಯುದ್ಧದಲ್ಲಿ ಗೆದ್ದು ಆಡಳಿತ ಮಾಡಬೇಕಿತ್ತು. ಇವತ್ತು ಚುನಾವಣೆಯಲ್ಲಿ ಗೆದ್ದರೆ ಮಾತ್ರ ನಾವು ಆಡಳಿತ ಮಾಡೋದಕ್ಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಾನು ಮಾತನಾಡಿರುವಂತಹದ್ದು, ಒಂದು ಆಡುಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು, ವ್ಯಕ್ತಿಗತವಾಗಿ ಮಾತನಾಡಿಲ್ಲ. ಇಡೀ ಕಾಂಗ್ರೆಸ್​ ಪಕ್ಷವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಿರುವಂತಹದ್ದು. ಇವರು ಅದನ್ನು ತಿರುಚುವಂತಹ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ತುಷ್ಟೀಕರಣ, ಓಲೈಕೆ ಮಾಡುವಂತಹ ಪಕ್ಷಗಳನ್ನು ಸೋಲಿಸಬೇಕು. ನಮ್ಮತನ ಪೂರವಾಗಿರುವಂತಹ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕು ಎನ್ನುವಂತಹದ್ದನ್ನು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ಅವರು ಮಾತ್ರ ಒಬ್ಬ ಮುಖ್ಯಮಂತ್ರಿಯನ್ನು ನಾಯಿಮರಿ, ಮನೆಹಾಳ, ರಾಜ್ಯ ಬಿಜೆಪಿ ಅಧ್ಯಕ್ಷನನ್ನು ಜೋಕರ್​, ನರೇಂದ್ರ ಮೋದಿ ಅವರನ್ನು ನರಹಂತಕ ಎಂದು ಕರೆಯುತ್ತಾರೆ. ಇವರ ಹಾಗೆ ನಾವು ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವಂತಹ ಕೆಲಸವನ್ನು ನಾವೇನು ಮಾಡಿಲ್ಲ. ಚುನಾವಣೆ ಮೂಲಕ ಅವರ ಸೋಲಿಸಬೇಕೆಂದಷ್ಟೆ ಹೇಳಿದ್ದೇನೆ. ಹೊಡೆದಾಡಿ, ಬಡೆದಾಡಿ ಗೆಲ್ಲೋದಲ್ಲ. ಮತದ ಮೂಲಕ ಗೆಲ್ಲೋಕಷ್ಟೇ ಸಾಧ್ಯ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇತಿಹಾಸ ತಿರುಚಿ, ಮತಾಂಧ ಟಿಪ್ಪುವಂಥವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಬಿಂಬಿಸಿದ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರಿಗೆ ನನ್ನ ಮಾತನ್ನು ತಿರುಚಿ ಬಿತ್ತರಿಸುವುದು ಐದು ನಿಮಿಷದ ಕೆಲಸ. ಮುಂಬರುವ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರ ಸಿಗದೇ, ಮಾನಸಿಕವಾಗಿ ಕುಗ್ಗಿರುವ ಸಿದ್ದರಾಮಯ್ಯ ಅವರಿಗೆ ಕ್ಷುಲ್ಲಕ ವಿಷಯಗಳೇ ಆಸರೆಯಾಗಿವೆ. ನಮ್ಮ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದಂತವರು ಕಾಂಗ್ರೆಸ್​ ಹಾಗೂ ಜೆಎಡಿಎಸ್​ ಪಕ್ಷದವರು ಎಂದು ಸಚಿವ ಅಶ್ವತ್ಥನಾರಾಯಣ್​ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಪ್ಪುವಿನಂತೆ ಹೊಡೆದು ಹಾಕಬೇಕು: ಸಚಿವ ಅಶ್ವತ್ಥನಾರಾಯಣ್​ ಹೇಳಿಕೆಗೆ ಸಿದ್ದರಾಮಯ್ಯ ಕೆಂಡಾಮಂಡಲ

Last Updated :Feb 16, 2023, 4:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.