ETV Bharat / state

ಸಿಎಂ ಬೊಮ್ಮಾಯಿ ಸಾಧನೆ ನೋಡಿ ಕಾಂಗ್ರೆಸ್​ಗೆ ಅಜೀರ್ಣ: ಸಚಿವ ಸಿ.ಸಿ.ಪಾಟೀಲ್

author img

By

Published : Aug 9, 2022, 9:35 PM IST

Minister CC Patil give tong to congress
ಸಚಿವ ಸಿ ಸಿ ಪಾಟೀಲ್

ಜನಪರ ಆಡಳಿತ ನೀಡುತ್ತಾ ಒಂದು ವರ್ಷ ಆಡಳಿತವನ್ನು ಬೊಮ್ಮಾಯಿ ಅವರು ಸಮರ್ಥವಾಗಿ ನೀಡಿದ್ದಾರೆ. ಕಾಂಗ್ರೆಸ್​ನವರಿಗೆ ಹಗಲುಗನಸು ಬೇಡ ಎಂದು ಸಚಿವ ಸಿ.ಸಿ.ಪಾಟೀಲ್​ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷವು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು, ಪ್ರಸ್ತುತ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು ಕಪೋಲಕಲ್ಪಿತವಾಗಿ ವದಂತಿ ಹಬ್ಬಿಸುವಲ್ಲಿ ನಿರತವಾಗಿದೆ. ಇದು ಆ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂದು ಸಚಿವ ಸಿ.ಸಿ.ಪಾಟೀಲ್ ಪ್ರತಿಕ್ರಿಯಿಸಿದರು.

ಪದೇ ಪದೇ ತಮ್ಮಿಷ್ಟಕ್ಕೆ ಸಿಎಂ ಸ್ಥಾನ ಬದಲಾಯಿಸುವ ಚಾಳಿ ಇರುವುದು ಕಾಂಗ್ರೆಸ್​ನ ಹೈಕಮಾಂಡ್​ನಲ್ಲಿ ಎಂಬುದನ್ನು ಕಾಂಗ್ರೆಸ್​ನವರು ಮೊದಲು ನೆನಪು ಮಾಡಿಕೊಳ್ಳಲಿ. ಜನಪರ ಆಡಳಿತ ನೀಡುತ್ತಾ ಒಂದು ವರ್ಷದ ಆಡಳಿತವನ್ನು ಬೊಮ್ಮಾಯಿ ಅವರು ಸಮರ್ಥವಾಗಿ ನೀಡಿದ್ದಾರೆ. ಅಲ್ಲದೇ ಮುಂದೆಯೂ ಸುಭದ್ರ ಸರ್ಕಾರವನ್ನು ನೀಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಈ ಬಗ್ಗೆ ಕಾಂಗ್ರೆಸ್​ನವರಿಗೆ ಹಗಲುಗನಸು ಬೇಡ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಕಾಲದಲ್ಲಿ ಚೀಫ್ ಮಿನಿಸ್ಟರ್‌, 'ಚೀಟಿ ಮಿನಿಸ್ಟರ್‌' ಆಗಿತ್ತು: ಸಚಿವ ಡಾ.ಕೆ.ಸುಧಾಕರ್

ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ 2023 ರ ವಿಧಾನಸಭಾ ಚುನಾವಣೆಯನ್ನೂ ನಾವು ಎದುರಿಸಲಿದ್ದೇವೆ. ಯಾವುದೇ ಕಾರಣಕ್ಕೂ ನಾಯಕತ್ವದ ಬದಲಾವಣೆಯಿಲ್ಲ. ಈ ಬಗ್ಗೆ ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ಸಿಗರ ಇಂತಹ ಗಾಳಿಮಾತನ್ನು ಮತ್ತು ವದಂತಿಗಳನ್ನು ಜನ ನಂಬುವುದಿಲ್ಲ. ಮೊದಲು ಆ ಪಕ್ಷದಲ್ಲಿರುವ ನಾಯಕತ್ವದ ಗುಂಪುಗಾರಿಕೆ ಮತ್ತು ಭಿನ್ನಮತವನ್ನು ಸರಿಪಡಿಸಿಕೊಳ್ಳಲಿ ಸಾಕು ಎಂದು ತಿರುಗೇಟು ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.