ETV Bharat / state

ತಾಕತ್ ಇದ್ದರೆ ಮೋಟಮ್ಮ ಮುಂದಿನ ಚುನಾವಣೆಯಲ್ಲಿ ಗೆದ್ದು ಬರಲಿ: ಎಂ.ಪಿ.ಕುಮಾರಸ್ವಾಮಿ

author img

By

Published : Jun 16, 2022, 8:33 PM IST

ಮಾಜಿ ಸಚಿವೆ ಮೋಟಮ್ಮ ನನ್ನ ವಿರೋಧಿಗಳಿಗೆ ಕುಮ್ಮಕ್ಕು ನೀಡಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ನನ್ನ ವಿರುದ್ಧವೇ ಸೋಲುತ್ತಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

minister-mp-kumarswami-spoke-against-ex-minister-motamma
ತಾಕತ್ ಇದ್ದರೆ ಮೋಟಮ್ಮ ಮುಂದಿನ ಚುನಾವಣೆಯಲ್ಲಿ ಗೆದ್ದು ಬರಲಿ : ಶಾಸಕ ಎಂ.ಪಿ.ಕುಮಾರಸ್ವಾಮಿ ಸವಾಲು

ಬೆಂಗಳೂರು: ಕಾಂಗ್ರೆಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಿಜೆಪಿ ಏನು ಕಡಿಮೆ ಮಾಡಿದೆ. ನಾನ್ಯಾಕೆ ಕಾಂಗ್ರೆಸ್‌ಗೆ ಹೋಗಲಿ, ಮಾಜಿ ಸಚಿವೆ ಮೋಟಮ್ಮ ಅವರಿಗೆ ಅರುಳೋ, ಮರುಳೋ ಆಗಿದೆ ಎಂದರು.

ಮೋಟಮ್ಮನವರು ನನ್ನ ವಿರುದ್ಧವೇ ಚುನಾವಣೆಯಲ್ಲಿ ಸೋಲುತ್ತಾರೆ. ಕಾಂಗ್ರೆಸ್‌ನಲ್ಲಿ ಅವರಿಗೆ ಯಾವ ಪರಿಗಣನೆಯೂ ಇಲ್ಲ. ಅವರು ನನ್ನ ವಿರೋಧಿಸುವವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ನಮ್ಮ ಕ್ಷೇತ್ರದಲ್ಲಿ ನನ್ನ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯ ಇದೆ. ಕ್ಷೇತ್ರದಲ್ಲಿ ನಾನು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಇದು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಮೋಟಮ್ಮನವರು ತಾಕತ್ ಇದ್ದರೆ ಗೆದ್ದು ಬರಲಿ.‌ ಅವರ ಪಕ್ಷದಲ್ಲಿ ಅವರೇ ದುರ್ಬಲರಾಗಿ ನಮ್ಮ ಬಗ್ಗೆ ಯಾಕೆ ಮಾತಾನಾಡುತ್ತಾರೆ. ನಾನು ನನ್ನ ಕ್ಷೇತ್ರದಲ್ಲಿ ಇದ್ದರೂ ಅವರ ಬಗ್ಗೆ ಟೀಕೆ ಮಾಡಲ್ಲ. ಅವರು ದೊಡ್ಡವರು ಹೀಗೆ ಮಾತಾಡಬಾರದು ಎಂದು ಹೇಳಿದರು.

ಇದನ್ನೂ ಓದಿ: ರಾಜಭವನಕ್ಕೆ ಕಾಂಗ್ರೆಸ್ ನಿಯೋಗ ಭೇಟಿ: ಮನವಿ ಪತ್ರ ಸಲ್ಲಿಕೆ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.