ETV Bharat / state

ಎಸ್ಎಸ್ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

author img

By

Published : May 17, 2021, 11:53 AM IST

ಎಸ್ಎಸ್ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಕೆಲವು ಕಡೆ ಪರೀಕ್ಷೆ ರದ್ದು ಮಾಡುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ ಎಂದಿದ್ದಾರೆ.

Minister Suresh Kumar clarifies about cancellation of   Second PU Exam
ಪರೀಕ್ಷೆ ರದ್ದತಿ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಎಸ್ಎಸ್ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಎಸ್ಎಸ್ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.‌ ಈ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಪರೀಕ್ಷೆಗಳನ್ನು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದರು.

ಇದನ್ನೂ ಓದಿ: ರಾಯಚೂರು ಓಪೆಕ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ

ಕೆಲವೆಡೆ ಪರೀಕ್ಷೆ ರದ್ದು ಮಾಡುವ ಬಗ್ಗೆ ಊಹಾಪೋಹವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.