ಬೆಂಗಳೂರು: ಅಂಧತ್ವಕ್ಕೆ ಸೆಡ್ಡು ಹೊಡೆದು ಯುಪಿಎಸ್ಸಿ ಪರೀಕ್ಷೆಯಲ್ಲಿ 465ನೇ ಶ್ರೇಣಿಯಲ್ಲಿ ಪಾಸಾದ ಮೇಘನಾ ಅವರನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿ ಶುಭಾಶಯ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಓದುತ್ತಿದ್ದಾಗ ತನ್ನ ದೃಷ್ಟಿ ಸಾಮರ್ಥ್ಯವನ್ನು ಕಳೆದುಕೊಂಡ ಮೇಘನಾ, ಯುಪಿಎಸ್ಸಿ ಪರೀಕ್ಷೆಗಳಲ್ಲಿ ತನ್ನ ಸಾಮರ್ಥ್ಯ ತೋರಿರುವುದು ನಿಜಕ್ಕೂ ಶ್ಲಾಘನೀಯ. ಮೇಘಾನ ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವರು ಈ ವೇಳೆ ಅವರ ಸಾಧನೆಯನ್ನು ಬಣ್ಣಿಸಿದರು.
ಸದ್ಯ ಕೆ.ಟಿ. ಮೇಘನಾ ಕೆ.ಎ.ಎಸ್. ಅಧಿಕಾರಿಯಾಗಿದ್ದು, ಪ್ರಸ್ತುತ ಕರ್ನಾಟಕ ಖಜಾನೆ ನಿರ್ದೇಶನಾಲಯದಲ್ಲಿ ಬೆಂಗಳೂರು ಜಿಲ್ಲಾ ಖಜಾನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಯುಪಿಎಸ್ಸಿ ಪರೀಕ್ಷೆಯಲ್ಲೂ ತೇರ್ಗಡೆಯಾಗಿರುವ ಮೇಘನಾ ಐಎಎಸ್ ಅಧಿಕಾರಿಯಾಗುವ ನಿರೀಕ್ಷೆಯಲ್ಲಿದ್ದಾರೆ.