ETV Bharat / state

ಬೆಂಗಳೂರು: ಮದ್ಯದ ಅಮಲಿನಲ್ಲಿ ಪರಿಚಿತನನ್ನು ಹತ್ಯೆಗೈದಿದ್ದ ಆರೋಪಿಯ ಬಂಧನ

author img

By

Published : Feb 14, 2023, 1:24 PM IST

Updated : Feb 14, 2023, 2:00 PM IST

Bengaluru latest crime news
ಬಂಧಿತ ಆರೋಪಿ

ಮದ್ಯದ ಅಮಲಿನಲ್ಲಿ ಪರಿಚಿತನನ್ನೇ ಹತ್ಯೆಗೈದಿದ್ದ ಆರೋಪಿಯನ್ನು ವರ್ತೂರು ಠಾಣಾ ಪೊಲೀಸರು ಬಂಧಿಸಿದ್ಧಾರೆ.

ಮದ್ಯದ ಅಮಲಿನಲ್ಲಿ ಪರಿಚಿತನ ಹತ್ಯೆ: ಸಿಸಿಟಿವಿ ದೃಶ್ಯ

ಬೆಂಗಳೂರು: ಕುಡಿದ ಅಮಲಿನಲ್ಲಿ ಪರಿಚಿತನನ್ನೇ ಹತ್ಯೆಗೈದಿದ್ದ ಆರೋಪಿಯನ್ನು ವರ್ತೂರು ಠಾಣಾ ಪೊಲೀಸರು ಬಂಧಿಸಿದ್ಧಾರೆ. ಶ್ರೀಧರ್ ಬಂಧಿತ ಆರೋಪಿ. ಫೆ.11ರ ರಾತ್ರಿ ವರ್ತೂರು ಠಾಣಾ ವ್ಯಾಪ್ತಿಯ ಹಲಸಹಳ್ಳಿ ಮುಖ್ಯ ರಸ್ತೆಯಲ್ಲಿರುವ ಎಸ್ಎಸ್ಎಸ್ ಬಾರ್​​ನಲ್ಲಿ ಮುನಿಯಪ್ಪ (45) ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯ್ಯಲಾಗಿತ್ತು. ಘಟನೆಯ ಸಿಸಿಟಿವಿ ದೃಶ್ಯಗಳು ಇದೀಗ ಲಭ್ಯವಾಗಿವೆ.

ಆರೋಪಿ ಶ್ರೀಧರ್ ಮತ್ತು ಮೃತ ಮುನಿಯಪ್ಪ ಇಬ್ಬರೂ ಒಂದೇ ಏರಿಯಾದಲ್ಲಿ ವಾಸವಿದ್ದವರು. ಘಟನೆಯ ದಿನ ರಾತ್ರಿ ಬಾರ್​​ನಲ್ಲಿ ಮದ್ಯಪಾನ ಮಾಡಿದ ನಂತರ ಇಬ್ಬರೂ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಸಿಟ್ಟಿಗೆದ್ದ ಶ್ರೀಧರ್, ಮುನಿಯಪ್ಪನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಪರಿಣಾಮ ಮುನಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ವರ್ತೂರು ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣದ ವಿವರ: ಫೆ.11ರಂದು ರಾತ್ರಿ ಕುಡಿಯಲೆಂದು ಶ್ರೀಧರ್ ಮತ್ತು ಮುನಿಯಪ್ಪ ಇಬ್ಬರು ಬಾರ್​ಗೆ ತೆರಳಿದ್ದರು. ಈ ವೇಳೆ ಮದ್ಯಪಾನ ಮಾಡಿ ಗಲಾಟೆ ಮಾಡಿಕೊಂಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಶ್ರೀಧರ್ ಮಚ್ಚಿನಿಂದ ಮುನಿಯಪ್ಪನ ಮೇಲೆ ಹಲ್ಲೆ ಮಾಡಿದ್ದು ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದ. ಈ ಸಂಬಂಧ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಗಲಾಟೆ; ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಹತ್ಯೆ

ನವ ವಿವಾಹಿತೆ ಅನುಮಾನಾಸ್ಪದ ಸಾವು: ಮದುವೆಯಾಗಿ ಒಂದು ವರ್ಷ ಸಹ ಆಗಿರಲಿಲ್ಲ, ಪದೇ ಪದೇ ತವರು ಮನೆಯಿಂದ ಹಣ ತರುವಂತೆ ಧನದಾಹಿ ಗಂಡ ಪೀಡಿಸುತ್ತಿದ್ದನು. ಸಾಲದು ಅಂತ ಹೊಟ್ಟೆಯಲ್ಲಿದ್ದ ಒಂದೂವರೆ ತಿಂಗಳ ಶಿಶುವನ್ನು ಸಹ ಅತ್ತೆ, ಗರ್ಭಪಾತ ಮಾಡಿಸಿದ್ದರು. ಇದೀಗ ನವ ವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

ಗಂಡನ ಮನೆಯವರು ಪರಾರಿ: ದೊಡ್ಡಬಳ್ಳಾಪುರ ತಾಲೂಕಿನ ಅಂಚಾರ್ಲಹಳ್ಳಿಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಸುಮಾರು 22 ವರ್ಷದ ನವ ವಿವಾಹಿತೆ ತನುಶ್ರೀ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ಸುದ್ದಿಯನ್ನು ತವರು ಮನೆಗೆ ತಿಳಿಸದೇ ಗಂಡನ ಮನೆಯವರು ಪರಾರಿಯಾಗಿದ್ದಾರೆ. ಇನ್ನು, ಈ ಸಾವಿನ ಸುದ್ದಿ ಮೂರನೇ ವ್ಯಕ್ತಿಗಳಿಂದ ತಿಳಿದು ಬಂದ ಹೆತ್ತವರಿಗೆ ಮಗಳ ಮುಖವನ್ನು ನೋಡಲು ಸಾಧ್ಯವಾಗದೆ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ನವ ವಿವಾಹಿತೆ ಅನುಮಾನಾಸ್ಪದ ಸಾವು.. ಗಂಡನ ವಿರುದ್ಧ ಕೊಲೆ ಆರೋಪ

ನವ ವಿವಾಹಿತೆ ಆತ್ಮಹತ್ಯೆ: ಕಳೆದ 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಆರ್​​ಪುರ ಪೊಲೀಸ್​​ ಠಾಣಾ ವ್ಯಾಪ್ತಿಯ ಭಟ್ಟರಹಳ್ಳಿಯಲ್ಲಿ ನಡೆದಿದೆ. ರಾಣಿ (27) ಆತ್ಮಹತ್ಯೆಗೆ ಶರಣಾದ ಮಹಿಳೆ. ಕೆಆರ್​​ಪುರದ ಭಟ್ಟರಹಳ್ಳಿಯ ತನ್ನ ಅಕ್ಕನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗಂಡನ ಮನೆಯವರಿಂದ ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ

Last Updated :Feb 14, 2023, 2:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.