ETV Bharat / state

ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ, ಉತ್ತಮ ಆಡಳಿತಕ್ಕೆ ಹೆಚ್ಚಿನ ಒತ್ತು: ಬೊಮ್ಮಾಯಿ ಇಂಗಿತ

author img

By

Published : Jul 28, 2021, 5:12 AM IST

Updated : Jul 28, 2021, 7:01 AM IST

Bommai priority
ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ತಮ್ಮ ನಿವಾಸದ ಬಳಿ ಮಾದ್ಯಮದವರ ಬಳಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಯಾಗಿ ತಮ್ಮ ಸರಕಾರದ ಆಡಳಿತದಲ್ಲಿ ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎನ್ನುವುದನ್ನು ಹಂಚಿಕೊಂಡರು.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜತೆಗೆ ಉತ್ತಮ ಆಡಳಿತ , ಸಮಾಜದ ಎಲ್ಲ ವರ್ಗದವರಿಗೆ ನ್ಯಾಯ ದೊರಕಿಸಿಕೊಡುವುದು. ಹಿಂದಿನ ಯಡಿಯೂರಪ್ಪ ಸರಕಾರ ಬಜೆಟ್​ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ತಮ್ಮ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನಿಡಲಾಗುತ್ತದೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ .

ಬಸವರಾಜ ಬೊಮ್ಮಾಯಿ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ತಮ್ಮ ನಿವಾಸದ ಬಳಿ ಮಾದ್ಯಮದವರ ಬಳಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಯಾಗಿ ತಮ್ಮ ಸರಕಾರದ ಆಡಳಿತದಲ್ಲಿ ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎನ್ನುವುದನ್ನು ಹಂಚಿಕೊಂಡರು.

ಮುಖ್ಯಮಂತ್ರಿ ಪದವಿ ತಮಗೆ ಬಯಸದೇ ಬಂದ ಭಾಗ್ಯವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜನಪರ, ಉತ್ತಮ ಆಡಳಿತ ನೀಡಲು ಶ್ರಮಿಸಲಾಗುತ್ತದೆ. ಹಿರಿಯ ನಾಯಕರಾದ ಯಡಿಯೂರಪ್ಪನವರ ಜೊತೆ ಸಮಾಲೋಚಿಸಿ ಉತ್ತಮ ಕ್ಯಾಬಿನೆಟ್ ರಚಿಸಲಾಗುತ್ತದೆ. ಸದ್ಯದಲ್ಲಿಯೇ ರಚನಾತ್ಮಕ ಮಂತ್ರಿ ಮಂಡಲಕ್ಕೆ ಕ್ರಿಯಾಶೀಲ ಶಾಸಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ನಿಯೋಜಿತ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
Last Updated :Jul 28, 2021, 7:01 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.