2016ರ ಮೈಸೂರು ಕೋರ್ಟ್‌ನಲ್ಲಿನ ಬಾಂಬ್ ಬ್ಲಾಸ್ಟ್.. ಮೂವರು ತಪ್ಪಿತಸ್ಥರೆಂದು ತೀರ್ಪು..

author img

By

Published : Oct 8, 2021, 8:12 PM IST

mysore-bomb-blast-case-judgment

2016 ಆಗಸ್ಟ್ 6ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಅಡುಗೆ ಕುಕ್ಕರಿನಲ್ಲಿ ಬಾಂಬ್ ಇಟ್ಟು ಆರೋಪಿಗಳು ಸ್ಫೋಟಿಸಿದ್ದರು. ಬ್ಯಾಟರಿ, ಗ್ಲಾಸ್ ಪೀಸ್, ಪಟಾಕಿ ಪೌಡರ್, ಕೆಮಿಕಲ್ ಬಳಸಿ ಬಾಂಬ್ ತಯಾರಿಸಿದ್ದರು..

ಬೆಂಗಳೂರು : 2016ರ ಮೈಸೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳು ತಪ್ಪಿತಸ್ಥರೆಂದು ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾ. ಕಸನಪ್ಪ ನಾಯ್ಕ್ ಅವರಿಂದ್ದ ಪೀಠ ಈ ತೀರ್ಪು ನೀಡಿದೆ. ತಮಿಳುನಾಡು ಮೂಲದ A1 ಅಬ್ಬಾಸ್ ಅಲಿ, A ಸಂಸುನ್ ಕರೀ ರಾಜಾ, A5 ದಾವೂದ್ ಸುಲೇಮಾನ್ ತಪ್ಪಿತಸ್ಥರು. ಆರೋಪಿಗಳು 'ಬೇಸ್ ಮೂವ್ಮೆಂಟ್' ಎಂಬ ಸಂಘಟನೆ ಕಟ್ಟಿಕೊಂಡು ಅಲ್- ಕೈದಾ ಸಂಘಟನೆಗೆ ಬೆಂಬಲ ನೀಡುತ್ತಿದ್ದರು ಎಂದು ವಿಚಾರಣೆ ವೇಳೆ ಸಾಬೀತಾಗಿದೆ.

ಪ್ರಕರಣದ ಹಿನ್ನೆಲೆ

2016 ಆಗಸ್ಟ್ 6ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಅಡುಗೆ ಕುಕ್ಕರಿನಲ್ಲಿ ಬಾಂಬ್ ಇಟ್ಟು ಆರೋಪಿಗಳು ಸ್ಫೋಟಿಸಿದ್ದರು. ಬ್ಯಾಟರಿ, ಗ್ಲಾಸ್ ಪೀಸ್, ಪಟಾಕಿ ಪೌಡರ್, ಕೆಮಿಕಲ್ ಬಳಸಿ ಬಾಂಬ್ ತಯಾರಿಸಿದ್ದರು.

A3 ಆಯೂಬ್​ಗೆ ಗೊತ್ತಿಲ್ಲದೆ ಅವನ ಮನೆಯಲ್ಲಿ ಬಾಂಬ್​ ತಯಾರು ಮಾಡಿದ್ದ ಹಿನ್ನೆಲೆ ಹೈಕೋರ್ಟ್ ವಾದ ಆಲಿಸಿ ಕ್ಷಮಾದಾನ ನೀಡಿತ್ತು. ತನಿಖಾ ವೇಳೆ A4 ಪಾತ್ರ ಇಲ್ಲ ಎಂದು ಚಾರ್ಜ್‌ಶೀಟ್​ನಲ್ಲಿ ಕೈಬಿಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.