ಕೆಸಿಆರ್ ಅವರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

author img

By

Published : Oct 4, 2022, 8:13 PM IST

new national Party announcement by KCR tomorrow

ಕೆ.ಚಂದ್ರಶೇಖರ್ ರಾವ್ ನಾಳೆ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಇಪ್ಪತ್ತು ಶಾಸಕರೊಂದಿಗೆ ಇಂದು ಹೈದರಾಬಾದ್​​​​​ಗೆ​ ತೆರಳಿದ್ದಾರೆ.

ಬೆಂಗಳೂರು: ಕೆಸಿಆರ್ ಭಾರತ ರಾಷ್ಟ್ರ ಸಮಿತಿ (BRS) ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಹೈದ್ರಾಬಾದ್​ಗೆ ತೆರಳಿದ್ದಾರೆ. ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.

ಪಕ್ಷ ಸ್ಥಾಪನೆ ಬಗ್ಗೆ ಕೆಲ ತಿಂಗಳ ಹಿಂದೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಕೆಸಿಆರ್ ಚರ್ಚೆ ನಡೆಸಿದ್ದರು. ಕೆಲ ತಿಂಗಳ ಹಿಂದೆಯಷ್ಟೇ ಹೈದರಾಬಾದ್​ಗೆ ತೆರಳಿ ಕೆಸಿಆರ್ ಜತೆ ಹೆಚ್​ಡಿಕೆ ಚರ್ಚೆ ನಡೆಸಿದ್ದರು. ಇಂದು ಹೈದ್ರಾಬಾದ್​ನಲ್ಲೇ ಶಾಸಕರ ಜೊತೆ ಹೆಚ್.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದು, ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಕೆಸಿಆರ್​ ಪಿಎಂ ಆಗಲಿ: ಮದ್ಯದ ಬಾಟಲಿ, ಕೋಳಿ ವಿತರಿಸಿದ ಟಿಆರ್​ಎಸ್ ಮುಖಂಡ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.