ನಿಬಂಧನೆ ತೆರವು: ಕೋವಿಡ್​​ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದವರಿಗೆ ₹ 1 ಲಕ್ಷ  ಪರಿಹಾರ

author img

By

Published : Dec 2, 2021, 10:57 PM IST

covid relief

ರಾಜ್ಯ ಸರ್ಕಾರವು ಕೋವಿಡ್​ನಿಂದ ಮೃತಪಟ್ಟವರಿಗೆ ಘೋಷಿಸಿದ್ದ ಒಂದು ಲಕ್ಷ ರೂ. ಪರಿಹಾರ ಪಡೆಯಲು ವಿಧಿಸಿದ್ದ ನಿಬಂಧನೆಯನ್ನು ತೆಗೆದು ಹಾಕಿದೆ.

ಬೆಂಗಳೂರು: ಕೋವಿಡ್​ನಿಂದ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಒಂದು ಲಕ್ಷ ರೂ. ಪರಿಹಾರವು ಕುಟುಂಬದ ದುಡಿಯುವ ಸದಸ್ಯರಾಗಿದ್ದರೇ ಮಾತ್ರ ಸಿಗಲಿದೆ ಎಂದು ಹೇಳಿದ್ದ ಸರ್ಕಾರ ಈ ನಿಬಂಧನೆಯನ್ನು ತೆಗೆದು ಹಾಕಿದೆ.

ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರೊನಾದಿಂದ ಮೃತರಾಗಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೊಸದಾಗಿ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಮಾಡಿದೆ.

ಇದನ್ನೂ ಓದಿ: ಒಮಿಕ್ರೋನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೆ ಕೋವಿಡ್​​..ರೂಪಾಂತರಿ ತಗುಲಿರುವ ಆತಂಕ

ಕೋವಿಡ್​​ನಿಂದ ಮೃತಪಟ್ಟ ವ್ಯಕ್ತಿಗೆ ಯಾವುದೇ ವಯಸ್ಸಿನ ನಿಬಂಧನೆಯೂ ಇಲ್ಲ. ಮೃತರು ಬಿಪಿಎಲ್ ಕುಟುಂಬದ ಸದಸ್ಯರಾಗಿದ್ದರೆ, ಅವರ ಅರ್ಹ ಕಾನೂನು ಬದ್ಧ ವಾರಸುದಾರರಿಗೆ ಪರಿಹಾರ ನೀಡಲಾಗುವುದು ಎಂದು ತಿದ್ದುಪಡಿ ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಪ್ರೇಯಸಿಗಾಗಿ 35 ವರ್ಷ ಕಾದ ಪ್ರಿಯತಮ: 65ನೇ ವಯಸ್ಸಿನಲ್ಲಿ ಕೊನೆಗೂ ಸಪ್ತಪದಿ ತುಳಿದ ಸಖತ್​ ಜೋಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.