ETV Bharat / state

ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ: ಇಂಡಿಯಿಂದ ಹಿರೇಕೆರೂರು ವರೆಗೆ ಒಟ್ಟು 21 ಕ್ಷೇತ್ರಗಳಲ್ಲಿ ಯಾತ್ರೆ

author img

By

Published : Jan 16, 2023, 9:30 PM IST

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ - ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ - ಜೆಡಿಎಸ್​ ಪಕ್ಷಕ್ಕೆ ಅತ್ಯುತ್ತಮ ಜನ ಬೆಂಬಲ ಸಿಕ್ಕಿದೆ

pancharatna-rath-yatra-for-18-days-from-tomorrow
ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ: ಇಂಡಿಯಿಂದ ಹಿರೇಕೆರೂರು ವರೆಗೆ ಒಟ್ಟು 21 ಕ್ಷೇತ್ರಗಳಲ್ಲಿ ಯಾತ್ರೆ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜನವರಿ 17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದ್ದು. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ.

ಕ್ರಮವಾಗಿ ಇಂಡಿ, ಸಿಂಧಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ, ಬಬಲೇಶ್ವರ (ಈ ಎರಡೂ ಕ್ಷೇತ್ರಗಳಲ್ಲಿ ಒಂದು ದಿನ) ರಥಯಾತ್ರೆ ನಡೆಯಲಿದೆ. ಜನವರಿ 23 ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರ, ಅದೇ ಜನವರಿ 24 ರಿಂದ 29 ರವರೆಗೆ ರಾಯಚೂರು ಜಿಲ್ಲೆಯ ಲಿಂಗಸಗೂರು, ದೇವದುರ್ಗ, ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ಸಿಂಧನೂರು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯುತ್ತದೆ.

30 ರಂದು ಕೊಪ್ಪಳ ಜಿಲ್ಲೆಯ ಕನಕಗಿರಿ, ಕುಷ್ಟಗಿಯಲ್ಲಿ ರಥಯಾತ್ರೆ ನಡೆಯಲಿದೆ. 31 ರಂದು ಬಳ್ಳಾರಿ, ವಿಜಯನಗರ ಜಿಲ್ಲೆಗಳ ಸಂಡೂರು, ಹಗರಿಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗುತ್ತದೆ. ಫೆಬ್ರವರಿ 1ರಂದು ದಾವಣಗೆರೆ ಕ್ಷೇತ್ರದ ಹರಿಹರ ಕ್ಷೇತ್ರದಲ್ಲಿ ಹಾಗೂ ಫೆಬ್ರವರಿ 2-3 ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯುತ್ತದೆ.

ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ರೋಡ್​ ಶೋ.. ಎರಡು ದಿನದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಭರ್ಜರಿ ಎಂಟ್ರಿ

ಕಲ್ಯಾಣ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು, ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆದಿದೆ. ಜನತೆಯಿಂದ ಉತ್ತಮ ಸ್ಪಂದನೆ ಸಿಕ್ಕಿತು. ಆ ಉತ್ಸಾಹದಿಂದ ಪುನಃ ಹದಿನೆಂಟು ದಿನಗಳ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈವರೆಗೆ ಒಟ್ಟು 45 ಕ್ಷೇತ್ರಗಳಲ್ಲಿ ರಥಯಾತ್ರೆ ಮುಗಿದಿದ್ದು, ಎಲ್ಲ ಕಡೆ ಜೆಡಿಎಸ್​ ಪಕ್ಷಕ್ಕೆ ಅತ್ಯುತ್ತಮ ಜನ ಬೆಂಬಲ ಸಿಕ್ಕಿದೆ. ಪಂಚರತ್ನ ಯೋಜನೆಗಳು ತಮಗೆ ಅನುಕೂಲ ಆಗುತ್ತವೆ ಎನ್ನುವ ನಂಬಿಕೆ ಎಲ್ಲರಿಗೂ ಬಂದಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಐದು ಅಂಶಗಳನ್ನು ಇಟ್ಟುಕೊಂಡು ಆರಂಭಿಸಿದ ಪಂಚರತ್ನ ರಥಯಾತ್ರೆ: 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸ್ವಂತ ಬಲದ ಅಧಿಕಾರ ಹಿಡಿಯಬೇಕು ಎಂದು ಪಣ ತೊಟ್ಟ ಜೆಡಿಎಸ್​ ಪಕ್ಷವು ಕೃಷಿ, ನೀರಾವರಿ, ಉದ್ಯೋಗ , ವಸತಿ ಹಾಗೂ ಯುವ ಮತ್ತು ಮಹಿಳಾ ಸಬಲೀಕರಣ ಈ ಐದು ಅಂಶಗಳನ್ನು ಇಟ್ಟುಕೊಂಡು ಜನರ ಮುಂದೆ ಪ್ರಚಾರ ಮಾಡಲು ಪಂಚರತ್ನ ಯಾತ್ರೆಯನ್ನು ಆರಂಭಿಸಿತು. ನವೆಂಬರ್​ 18ರಂದು ಕೋಲಾರದಿಂದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭವಾದ ಪಂಚರತ್ನ ಯಾತ್ರೆ ಇದುವರೆಗೂ ರಾಜ್ಯದ 45 ವಿಧಾನ ಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡಿದೆ.

ಇದನ್ನೂ ಓದಿ: ಕೋಲಾರ ಜೆಡಿಎಸ್​ನ ಭದ್ರಕೋಟೆ: ಸಿಎಂ ಇಬ್ರಾಹಿಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.