ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ ಪರೇಶ್​ ಮೇಸ್ತಾ ತಂದೆ

author img

By

Published : Oct 20, 2022, 5:25 PM IST

Paresh Mesta father submitted request to CM

ಕಮಾಲಕರ್ ಮೆಸ್ತಾ ಅವರ ಮನವಿಯನ್ನು ಆಲಿಸಿದ ಸಿಎಂ ಬೊಮ್ಮಾಯಿ, ತಂದೆಯಾಗಿ ನಿಮ್ಮ ಕಷ್ಟವನ್ನು ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿ ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಬೆಂಗಳೂರು: ಪರೇಶ್ ಮೆಸ್ತಾ ಸಾವು ಪ್ರಕರಣದ ಮರು ತನಿಖೆ ನಡೆಸುವಂತೆ ಪರೇಶ್ ಮೆಸ್ತಾ ಅವರ ತಂದೆ ಕಮಲಾಕರ್ ಮೆಸ್ತಾ ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ನನ್ನ ಮಗ ಪರೇಶ್ ಮೆಸ್ತಾನ ಸಾವು ಅಸಹಜವಾಗಿದ್ದು, ಸಿಬಿಐಗೆ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ. ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿದ್ದು, ಬಹುತೇಕ ಸಾಕ್ಷ್ಯಾಧಾರಗಳನ್ನು ನಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇದ್ದು ಪುನರ್‌ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಕಮಾಲಕರ್ ಮೆಸ್ತಾ ಅವರ ಮನವಿ ಆಲಿಸಿದ ಸಿಎಂ, ತಂದೆಯಾಗಿ ನಿಮ್ಮ ಕಷ್ಟವನ್ನು ಸರ್ಕಾರ ಅರ್ಥ ಮಾಡಿಕೊಳ್ಳುತ್ತದೆ. ಮನವಿ ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಮೀನುಗಾರಿಕಾ ಸಚಿವ ಎಸ್.ಅಂಗಾರ, ಶಾಸಕ ದಿನಕರ್ ಶೆಟ್ಟಿ, ಸುನಿಲ್ ನಾಯಕ್ ಹಾಗೂ ಕುಮಾರ ನಾರಾಯಣ ಮಾರ್ಕಾಂಡೇ ಹಾಜರಿದ್ದರು.

ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಆರಗ ಹೇಳಿದ್ದೇನು?: ಪರೇಶ್ ಮೇಸ್ತಾ ಸಾವಿನ ಪ್ರಕರಣದ ಮರು ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಜೆಜೆ ಆಸ್ಪತ್ರೆ ಶೂಟೌಟ್​ ಪ್ರಕರಣ: 20 ವರ್ಷಗಳ ನಂತರ ಕೇಸ್​ ರೀ ಓಪನ್​, ದಾವೂದ್​ ಸಹಚರನಿಗೆ ಸಂಕಷ್ಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.