ಬೆಂಗಳೂರು: ತಡರಾತ್ರಿ ಕಲಾಸಿಪಾಳ್ಯದಲ್ಲಿರುವ ಕುಂಬಾರರ ಸಂಘದ ಕಟ್ಟಡದಲ್ಲಿ ಎರಡು ಬಣಗಳ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಎರಡನೇ ಮಹಡಿಯಿಂದ ಬಿದ್ದು ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ಯುವಕನನ್ನು ಬದ್ರಿನಾಥ್ ಎಂದು ಗುರುತಿಸಲಾಗಿದೆ. ಕುಂಬಾರರ ಸಂಘದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಿನ್ನೆ ರಾತ್ರಿ ಅಧ್ಯಕ್ಷ ಹಾಗೂ ಕೆಲವು ಸದಸ್ಯರ ನಡುವೆ ಗಲಾಟೆ ಆರಂಭವಾಗಿತ್ತು. ಬಳಿಕ ಎರಡೂ ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭದಲ್ಲಿ ಯುವಕ ಆಯತಪ್ಪಿ ಕಟ್ಟಡದಿಂದ ಬಿದ್ದಿದ್ದಾನೆ. ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ