ETV Bharat / state

ದೂರವಾಣಿ ಕರೆ ಮಾಡಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪಿಎಂ ಮೋದಿ.. ನಾಳೆ ಆಸ್ಪತ್ರೆಯಿಂದ ಬಿಡುಗಡೆ

author img

By ETV Bharat Karnataka Team

Published : Oct 22, 2023, 12:42 PM IST

ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ಕರೆ ಮಾಡುವ ಮೂಲಕ ವಿಚಾರಿಸಿ ಸಲಹೆ ನೀಡಿದ್ದಾರೆ.

ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪಿಎಂ ಮೋದಿ
ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪಿಎಂ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ದೂರವಾಣಿ ಮೂಲಕ ಕರೆ ಮಾಡಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದರು. ಕರೆ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಕೋರಿದರು. ಆರೋಗ್ಯದ ಕಡೆ ಗಮನ ಕೊಡುವಂತೆ ಸಲಹೆ ನೀಡಿದರು.

ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!!

    ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ…

    — Basavaraj S Bommai (@BSBommai) October 22, 2023 " class="align-text-top noRightClick twitterSection" data=" ">

ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ ನಡೆಸಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಕೆಲ ಪ್ರಾಥಮಿಕ ಪರೀಕ್ಷೆ ನಡೆಸಲಾಯಿತು, ಈ ವೇಳೆ ಅವರಿಗೆ ಹೃದಯ ಸಂಬಂಧಿ ಕೆಲ ಸಮಸ್ಯೆ ಇರುವ ಅನುಮಾನ ಮೂಡಿತು. ಹೀಗಾಗಿ, ಅವರ ಸಮಗ್ರ ಮತ್ತು ಪರಿಣಿತ ವೈದ್ಯಕೀಯ ಆರೈಕೆಗಾಗಿ, ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್‌ ಸೈನ್ಸ್‌ ಅಧ್ಯಕ್ಷರಾದ ಡಾ. ವಿವೇಕ್‌ ಜವಳಿ ಅವರ ಮೇಲ್ವಿಚಾರಣೆಯಲ್ಲಿ ಅಕ್ಟೋಬರ್‌ 15 ರಂದು ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ಆಂಜಿಯೋಗ್ರಾಮ್ ನಂತರ, ಎಲ್ಲಾ ಮೂರು ಪರಿಧಮನಿಯ ಅಪಧಮನಿಗಳಲ್ಲಿ ತೀವ್ರ ಮತ್ತು ಪ್ರಸರಣ ತಡೆ ಇರುವುದು ಕಂಡು ಬಂತು. ಈ ಲಕ್ಷಣಗಳು ಇದ್ದರೆ ಭವಿಷ್ಯದಲ್ಲಿ ಹೃದಯಾಘಾತ ಸಂಭವನೀಯ ಅಪಾಯವನ್ನು ಉಂಟುಮಾಡುತ್ತವೆ. ಹೀಗಾಗಿ ಅವರಿಗೆ ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಕ್ರಿಯೆಯನ್ನು ನಡೆಸಿ, ಫೈವ್‌ ಗ್ರಾಫ್ಸ್‌ಅನ್ನು ಸಮಸ್ಯೆ ಉಂಟಾಗಿದ್ದ ಪರಿಧಮನಿಯ ಅಪಧಮನಿ ಹೃದಯದ ಬಡಿತದ ಮೇಲೆ ಇರಿಸಲಾಯಿತು. ನಾಳೆ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.