ETV Bharat / state

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಈ ವರ್ಷ ಏಳನೇ ಭೇಟಿ

author img

By

Published : Mar 24, 2023, 4:13 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 25 ರಂದು ಒಂದು ದಿನದ ಭೇಟಿಗಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಇದು ಈ ವರ್ಷ ಮೋದಿಯವರ ಏಳನೇ ಕರ್ನಾಟಕ ಭೇಟಿಯಾಗಲಿದೆ.

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಈ ವರ್ಷ ಏಳನೇ ಭೇಟಿ
PM Modi to visit poll bound Karnataka on March 25

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿಗಾಗಿ ಆಗಮಿಸಲಿದ್ದಾರೆ. ಅವರು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಇದಲ್ಲದೆ ಪ್ರಧಾನಮಂತ್ರಿಯವರು ಬೆಂಗಳೂರಿನ ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರ ಮೆಟ್ರೊ ಮಾರ್ಗವನ್ನು ಮೆಟ್ರೋವನ್ನು ಉದ್ಘಾಟಿಸಲಿದ್ದಾರೆ. ಹೊಸ ಮೆಟ್ರೋ ಮಾರ್ಗವು ಪ್ರಯಾಣಿಕರಿಗೆ ಸಂಚರಿಸಲು ಹೆಚ್ಚಿನ ಅನುಕೂಲತೆ ಒದಗಿಸಲಿದೆ ಮತ್ತು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ದಾವಣಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಈ ವರ್ಷ ಕರ್ನಾಟಕಕ್ಕೆ ಪ್ರಧಾನಿಯವರ ಏಳನೇ ಭೇಟಿ ಇದಾಗಿದೆ. ಪ್ರಧಾನಿ ಕೂಡ ಮೆಟ್ರೋದಲ್ಲಿ ಸವಾರಿ ಮಾಡಲಿದ್ದಾರೆ. ಕರ್ನಾಟಕದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಳೆದ ಎರಡು ತಿಂಗಳಲ್ಲಿ ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ ಮತ್ತು ಅನೇಕ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದ್ದಾರೆ.

ಮಾರ್ಚ್ 25 ರಂದು ಬೆಳಗ್ಗೆ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ನಂತರ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ವೈಟ್ ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಮತ್ತು ಮೆಟ್ರೋದಲ್ಲಿ ಸವಾರಿ ಮಾಡಲಿದ್ದಾರೆ. ದಾವಣಗೆರೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ನಂತರ ಪ್ರಧಾನಿಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ್ದ ಮೋದಿ : ಪ್ರಧಾನಿ ನರೇಂದ್ರ ಮೋದಿ ಕಳೆದ ಭಾನುವಾರ ಕರ್ನಾಟಕದಲ್ಲಿ 118 ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯನ್ನು ಉದ್ಘಾಟಿಸಿದರು. ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ರಸ್ತೆ ಪ್ರಯಾಣವನ್ನು ಸುಲಭಗೊಳಿಸುತ್ತದೆ ಮತ್ತು ಬೆಂಗಳೂರು ಮತ್ತು ಮೈಸೂರು ನಡುವಿನ ಪಟ್ಟಣಗಳಿಗೆ ಸುಗಮ ಸಂಪರ್ಕ ಒದಗಿಸುತ್ತದೆ. ಯೋಜನೆಯು NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 6-ಪಥವನ್ನು ಒಳಗೊಂಡಿದೆ. ಈ ಯೋಜನೆಯನ್ನು ಸುಮಾರು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳ ಪೈಕಿ 75 ನಿಮಿಷಗಳವರೆಗೆ ಕಡಿಮೆ ಮಾಡುತ್ತದೆ.

ಆಗ ಮಂಡ್ಯ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ರಾಜ್ಯಕ್ಕೆ ಅಭಿವೃದ್ಧಿ ರೂಪದಲ್ಲಿ ನಿಮ್ಮ ಪ್ರೀತಿಯನ್ನು ಮರುಪಾವತಿ ಮಾಡುವುದು ಡಬಲ್ ಇಂಜಿನ್ ಸರ್ಕಾರದ ಗುರಿಯಾಗಿದೆ. ಕಳೆದ ಕೆಲವು ದಿನಗಳಿಂದ ಜನರು ಎಕ್ಸ್‌ಪ್ರೆಸ್‌ವೇ ಬಗ್ಗೆ ಮಾತನಾಡುತ್ತಿದ್ದಾರೆ ಮತ್ತು ಚಿತ್ರಗಳು ಸಹ ವೈರಲ್ ಆಗಿವೆ. ದೇಶದ ಯುವಕರು ಯೋಜನೆಯ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಹೇಳಿದ್ದರು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಧಾನಿಗಾಗಿ ಸಮಾಧಿ ತೋಡುವಲ್ಲಿ ನಿರತವಾಗಿದೆ, ಆದರೆ ಮೋದಿ ಬಡವರ ಜೀವನವನ್ನು ಉತ್ತಮಪಡಿಸುವಲ್ಲಿ ನಿರತರಾಗಿದ್ದಾರೆ. ಜನರ ವಿಶ್ವಾಸವೇ ನನ್ನ ಗುರಾಣಿ. ನಾನು ಕರ್ನಾಟಕವನ್ನು ಸಶಕ್ತಗೊಳಿಸುವಲ್ಲಿ ನಿರತನಾಗಿದ್ದೇನೆ ಎಂದಿದ್ದರು.

ಇದನ್ನೂ ಓದಿ : ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ: ಸುಪ್ರೀಂ ಕೋರ್ಟ್‌ ಮೊರೆ ಹೋದ 14 ಪಕ್ಷಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.