ETV Bharat / state

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿದ ಕೆಪಿಸಿಸಿ ನಿಯೋಗ

author img

By

Published : Jul 30, 2021, 5:04 PM IST

poor-road-work-kpcc-delegation-complaining-to-lokayukta-against-cs
ಸಿಎಸ್ ವಿರುದ್ಧ ಲೋಕಾಯುಕ್ತಗೆ ದೂರು ನೀಡಿದ ಕೆಪಿಸಿಸಿ ನಿಯೋಗ

ಮಾಜಿ ಮೇಯರ್ ರಾಮಚಂದ್ರಪ್ಪ ನೇತೃತ್ವದ ನಿಯೋಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಬೆಂಗಳೂರಿನ 12 ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್‌ಗಳ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಿದರು.

ಬೆಂಗಳೂರು: ಬೆಂಗಳೂರು ನಗರದ 12 ರಸ್ತೆಗಳ ಕಳಪೆ ಕಾಮಗಾರಿ ಬಗ್ಗೆ ಕೆಪಿಸಿಸಿ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 12 ಹೈ ಡೆನ್ಸಿಟಿ ಕಾರಿಡರ್​ ಟ್ರಾಫಿಕ್‌ಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದೆ. ಬಿಬಿಎಂಪಿ, ಬಿಡಿಎ, ಬಿ.ಎಂ.ಆರ್‌.ಸಿ.ಎಲ್, ಬೆಂಗಳೂರು ಸ್ಮಾರ್ಟ್‌ಸಿಟಿ ಹಾಗೂ ಇತರ ಸಂಸ್ಥೆಗಳ ಮೂಲಕ ಈಗಾಗಲೇ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅದರಲ್ಲಿ ಅದೇ ರಸ್ತೆಗಳಿಗೆ ಮತ್ತೆ ಕೆ.ಆರ್.ಡಿ.ಸಿ.ಎಲ್ ಮೂಲಕ ಮರು ಅಭಿವೃದ್ಧಿ ಹಾಗೂ ನಿರ್ವಹಣೆಗೆ ಟೆಂಡರ್‌ ಮಂಡಿಸಿ ಅಭಿವೃದ್ಧಿಪಡಿಸಲು ಮುಂದಾಗಿರುವುದು ಮೇಲ್ನೋಟಕ್ಕೆ ಅಕ್ರಮ ನಡೆಯುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕಾಮಗಾರಿಗಳಿಗೆ ನೀಡಿರುವ ಆದೇಶ ಕಾನೂನುಬಾಹಿರ. ಉದ್ದೇಶಪೂರ್ವಕವಾಗಿ ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿ ಅಕ್ರಮದ ಮೂಲಕ ಲೂಟಿ ಮಾಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಈ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿಯೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಬಿಬಿಎಂಪಿ ಪ್ರಸ್ತಾವನೆಯನ್ನು ಮೊದಲು ಅನುಮೋದಿಸಿ ಸರ್ಕಾರ ನಂತರ ಕೆ.ಆರ್.ಡಿ.ಸಿ.ಎಲ್‌ಗೆ ಈ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಕಲ್ಪಿಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ‌.

ತಾಂತ್ರಿಕ ಅರ್ಹತೆ ಪಡೆಯದ ಹಾಗೂ ಕಾಮಗಾರಿಯ ಒಂದು ಪ್ಯಾಕೇಜ್ ಅ​ನ್ನು ಕಪ್ಪು ಪಟ್ಟಿಗೆ ಸೇರಿರುವ ಗುತ್ತಿಗೆದಾರನಿಗೆ ಟೆಂಡರ್‌ ನೀಡಲು ಶಿಫಾರಸ್ಸು ಮಾಡಿರುವುದು ಅಕ್ರಮ ಹಾಗೂ ಭ್ರಷ್ಟಾಚಾರದ ಅನುಮಾನ ಮೂಡಿದೆ ಎಂದು ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಂಪುಟ ರಚನೆ ವಿಚಾರದಲ್ಲಿ ಸಿಎಂ ಯೂ ಟರ್ನ್: ಇದರ ಹಿಂದಿದೆಯೇ ಬಿಎಸ್​ವೈ ತಂತ್ರಗಾರಿಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.