ETV Bharat / state

ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುವ ಸಾಧ್ಯತೆ: ಕೋರ್ಟ್​​ ಬಳಿ ಪೊಲೀಸ್​ ಸರ್ಪಗಾವಲು ​

author img

By

Published : Mar 29, 2021, 12:29 PM IST

Updated : Mar 29, 2021, 1:03 PM IST

ಕೋರ್ಟ್​​ ಬಳಿ ಬಿಗಿ ಪೊಲೀಸ್​ ಬಂದೋಬಸ್ತ್​
Tight police security in majistret court

12:17 March 29

ಕೋರ್ಟ್​​ನ ಸುತ್ತಮುತ್ತ ಖಾಕಿ ಕಣ್ಗಾವಲು

ಕೋರ್ಟ್​​ನ ಸುತ್ತಮುತ್ತ ಖಾಕಿ ಕಣ್ಗಾವಲು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಡಿ ಲೇಡಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೋರ್ಟ್ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಯುವತಿ ಇಂದು ನೇರವಾಗಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಹೇಳಿಕೆ ನೀಡುವುದಾಗಿ ಇತ್ತೀಚೆಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಯುವತಿಗೆ ರಕ್ಷಣೆ ನೀಡುವ ಸಂಬಂಧ ಕೋರ್ಟ್​​ನ ಸುತ್ತಮುತ್ತ ಬಿಗಿ ಪೊಲೀಸ್​ ಬಂದೋಬಸ್ತ್​​ ವ್ಯವಸ್ಥೆ ಮಾಡಲಾಗಿದೆ.

ಓದಿ: ಸಿಡಿ ಪ್ರಕರಣ:ಮಾಜಿ ಶಾಸಕ ನಾಗರಾಜ್, ವಕೀಲರ ಜೊತೆ ವಿಚಾರಣೆಗೆ ಆಗಮಿಸಿದ ಜಾರಕಿಹೊಳಿ​​

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಭದ್ರತೆಗಾಗಿ ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 5 ಜನ ಇನ್​ಸ್ಪೆಕ್ಟರ್​, 10 ಜನ ಸಬ್ ಇನ್​ಸ್ಪೆಕ್ಟರ್ ಹಾಗೂ 100 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 3 ಕೆಎಸ್ಆರ್​​ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.

Last Updated : Mar 29, 2021, 1:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.