ETV Bharat / state

ಬೆಂಗಳೂರಿನ ನಿಸರ್ಗ ಸೌಂದರ್ಯವನ್ನು ಕನ್ನಡದಲ್ಲೇ ಹೊಗಳಿದ ಪ್ರಧಾನಿ ಮೋದಿ

author img

By

Published : Apr 1, 2023, 5:52 PM IST

Updated : Apr 1, 2023, 6:46 PM IST

prime-minister-modi-tweeted-in-kannada-about-the-environment-of-bengaluru
ಸಿಲಿಕಾನ್ ಸಿಟಿಯ ಪರಿಸರದ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬೆಂಗಳೂರಿನ ಪ್ರಾಕೃತಿಕ ವೈವಿಧ್ಯಕ್ಕೆ ಸಂಬಂಧಿಸಿದ ಟ್ವೀಟ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್​​ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಿಸರ್ಗ ಸೌಂದರ್ಯವನ್ನು ಕನ್ನಡದಲ್ಲೇ ಹೊಗಳಿದ ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರು ನಗರವು ಪ್ರಕೃತಿಯೊಂದಿಗೆ ಗಾಢವಾದ ಬಾಂಧವ್ಯವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪರಿಸರ ಪ್ರೀತಿಯ ಕುರಿತಾದ ಟ್ವೀಟ್​ಗಳಿಗೆ ಕನ್ನಡದಲ್ಲೇ ಪ್ರತಿಕ್ರಿಯಿಸಿ ಶಹಬ್ಬಾಸ್‌ಗಿರಿ ನೀಡಿರುವ ಪ್ರಧಾನಿ ಮೋದಿ ಅವರು, "ಇದು ಬೆಂಗಳೂರು ಮತ್ತು ಅದರ ಮರಗಳ ಬಗೆಗಿನ ಆಸಕ್ತಿದಾಯಕ ವಿಷಯವಾಗಿದೆ. ಬೆಂಗಳೂರು ನಗರವು ಮರಗಳು ಮತ್ತು ಕೆರೆಗಳು ಸೇರಿದಂತೆ ಪ್ರಕೃತಿಯೊಂದಿಗೆ ಬಹಳ ಗಾಢವಾದ ಬಾಂಧವ್ಯವನ್ನು ಹೊಂದಿದೆ. ತಮ್ಮ ಪಟ್ಟಣಗಳು ಮತ್ತು ನಗರಗಳ ಬಗೆಗಿನ ಇಂತಹ ಅಂಶಗಳನ್ನು ಪ್ರಚಾರಪಡಿಸುವಂತೆ ನಾನು ಇತರರನ್ನು ಒತ್ತಾಯಿಸುತ್ತೇನೆ" ಎಂದು ಟ್ವೀಟ್​​ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವರ್ಷಪೂರ್ತಿ ಅರಳುವ ವೈವಿಧ್ಯಮಯ ಮರಗಳ ಸಂಗ್ರಹವಿದೆ ಎಂದು ನಿಮಗೆ ತಿಳಿದಿದೆಯೇ? ಯುಗಗಳ ಹಿಂದೆ ನಗರವನ್ನು ಯೋಜಿಸಿದಾಗ, ಒಂದು ಮರ ಅರಳುವುದನ್ನು ನಿಲ್ಲಿಸುವ ಸಂದರ್ಭದಲ್ಲಿ, ಇನ್ನೊಂದು ಮರ ಅದರ ಸ್ಥಾನವನ್ನು ತುಂಬುವ ರೀತಿಯಲ್ಲಿ ಮರಗಳು ಇರುವಂತೆ ಗಿಡಗಳನ್ನು ನೆಟ್ಟು ಬೆಳೆಸಲಾಗಿತ್ತು. ಪರಿಣಾಮವಾಗಿ ಎಲ್ಲ ಋತುವಿನಲ್ಲೂ ಹೂವಿನ ಸ್ವರಮೇಳವಾಗಿ ಹೊರಹೊಮ್ಮಿದೆ ಎಂದು ಪರಿಸರವಾದಿ ಮತ್ತು ಕಲಾವಿದೆ ಆದ ಸುಭಾಷಿಣಿ ಚಂದ್ರಮಣಿ ಎಂಬುವವರು ಟ್ವೀಟ್​​ ಮಾಡಿದ್ದರು.

  • ಇದು ಬೆಂಗಳೂರು ಮತ್ತು ಅದರ ಮರಗಳ ಬಗೆಗಿನ ಆಸಕ್ತಿದಾಯಕ ವಿಷಯವಾಗಿದೆ. ಬೆಂಗಳೂರು ನಗರವು ಮರಗಳು ಮತ್ತು ಕೆರೆಗಳು ಸೇರಿದಂತೆ ಪ್ರಕೃತಿಯೊಂದಿಗೆ ಬಹಳ ಗಾಢವಾದ
    ಬಾಂಧವ್ಯವನ್ನು ಹೊಂದಿದೆ.

    ತಮ್ಮ ಪಟ್ಟಣಗಳು ಮತ್ತು ನಗರಗಳ ಬಗೆಗಿನ ಇಂತಹ ಅಂಶಗಳನ್ನು ಪ್ರಚುರಪಡಿಸುವಂತೆ ನಾನು ಇತರರನ್ನು ಒತ್ತಾಯಿಸುತ್ತೇನೆ. https://t.co/OiM7DBR8E9

    — Narendra Modi (@narendramodi) April 1, 2023 " class="align-text-top noRightClick twitterSection" data=" ">

ಬೆಂಗಳೂರಿನಲ್ಲಿ ಮಳೆಗಾಲದ ತಿಂಗಳಲ್ಲಿಯೂ ಸಹ ಹೂವುಗಳಿಂದ ಅಲಂಕರಿಸಲ್ಪಡುವ ಮರಗಳಿವೆ. ಕಾಲೋಚಿತವಾಗಿ ಹೂವು ಬಿಡುವ ಮರಗಳ ಹೊರತಾಗಿ, ವರ್ಷಪೂರ್ತಿ ಹೂವು ಅರಳುವ ದೀರ್ಘಾವಧಿಯ ಮರಗಳಿವೆ. ಅಲ್ಲಿನ ಗಾಳಿಯು ಯಾವಾಗಲೂ ಹರಿಮೆಳಯುಕ್ತವಾಗಿರುತ್ತದೆ, ಆದ್ದರಿಂದ ಅದರ ಹೆಸರು 'ದಿ ಗಾರ್ಡನ್ ಸಿಟಿ' ಎಂದಾಗಿದೆ ಎಂದು ಸುಭಾಷಿಣಿ ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದರು.

ಬೆಂಗಳೂರಿನ ಪ್ರಾಕೃತಿಕ ವೈವಿಧ್ಯಕ್ಕೆ ಸಂಬಂಧಿಸಿ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಸುಭಾಷಿಣಿ ಚಂದ್ರಮಣಿ, ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಇದಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಉತ್ತರಿಸಿ ಬೆಂಗಳೂರಿನ ಕುರಿತ ತಮ್ಮ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ; ಕ್ರಿಕೆಟ್ ಅಭಿಮಾನಿಗಳಿಗೆ ಹೀಗಿರಲಿದೆ ವಾಹನ ಪಾರ್ಕಿಂಗ್ ವ್ಯವಸ್ಥೆ

Last Updated :Apr 1, 2023, 6:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.