ETV Bharat / state

ಎಸ್​ಸಿ ಒಳಮೀಸಲಾತಿ, ಒಕ್ಕಲಿಗರಿಗೆ ಶೇ 6, ಲಿಂಗಾಯತರಿಗೆ ಶೇ 7 ಮೀಸಲಾತಿ ಪ್ರಮಾಣ ಘೋಷಣೆ: ಮುಸ್ಲಿಮರ ಓಬಿಸಿ ಕೋಟಾ ರದ್ದು

author img

By

Published : Mar 24, 2023, 7:39 PM IST

Updated : Mar 24, 2023, 10:08 PM IST

ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಮೀಸಲಾತಿ ಘೋಷಣೆ ಮಾಡಲಾಗಿದೆ.

ಒಕ್ಕಲಿಗರಿಗೆ ಶೇ 6, ಲಿಂಗಾಯತರಿಗೆ ಶೇ 7 ಮೀಸಲಾತಿ ಪ್ರಮಾಣ ಘೋಷಣೆ: ಮುಸ್ಲಿಮರ ಓಬಿಸಿ ಕೋಟಾ ರದ್ದು
ಒಕ್ಕಲಿಗರಿಗೆ ಶೇ 6, ಲಿಂಗಾಯತರಿಗೆ ಶೇ 7 ಮೀಸಲಾತಿ ಪ್ರಮಾಣ ಘೋಷಣೆ: ಮುಸ್ಲಿಮರ ಓಬಿಸಿ ಕೋಟಾ ರದ್ದು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಮೀಸಲಾತಿ ನಿರ್ಧಾರ ಕೈಗೊಳ್ಳಲಾಗಿದೆ. ಒಳಮೀಸಲಾತಿ ಹಾಗೂ ವೀರಶೈವ ಲಿಂಗಾಯತರ 2D ಮತ್ತು ಒಕ್ಕಲಿಗರ 2C ಪ್ರವರ್ಗಕ್ಕೆ ಮೀಸಲಾತಿ ನೀಡಿ ಒಪ್ಪಿಗೆ ನೀಡಲಾಗಿದೆ. ಇತ್ತ 2Bಯಡಿಯ ಮುಸ್ಲಿಂ ಮೀಸಲಾತಿಗೆ 2D ಮತ್ತು 2C ಮೀಸಲಾತಿಗಾಗಿ ಸರ್ಕಾರ ಕತ್ತರಿ ಹಾಕಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಒಪ್ಪಿಗೆ ನೀಡಲಾಗಿದೆ. ಇತ್ತ 2Bಯಲ್ಲಿನ ಮುಸ್ಲಿಂ‌ ಮೀಸಲಾತಿಗೆ ಕತ್ತರಿ ಹಾಕಿದ್ದು, ಅದನ್ನು 2D ಮತ್ತು 2Cಗೆ ಮರು ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಆ ಮೂಲಕ ಒಕ್ಕಲಿಗರಿಗೆ 2Cಯಡಿ 6% ಮತ್ತು ವೀರಶೈವ ಲಿಂಗಾಯತರಿಗೆ 2Dಯಡಿ 7% ಮೀಸಲಾತಿ ನೀಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಒಳಮೀಸಲಾತಿಗೆ ಸಂಪುಟ ಅಸ್ತು: ಒಳಮೀಸಲಾತಿ ಸಂಬಂಧ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದೆವು. ಅದರ ಪ್ರಕಾರ ಎಸ್​ಸಿ ಮೀಸಲಾತಿಯಡಿ ಎಲ್ಲರಿಗೂ ನ್ಯಾಯ ಸಿಗಬೇಕು. ಅವರ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ARTICLE 342 ಅನ್ವಯ ಎಸ್​ಸಿ ಗಳನ್ನು ನಾಲ್ಕು ಗುಂಪಲ್ಲಿ ವರ್ಗೀಕರಿಸಲಾಗಿದೆ. ಎಸ್​ಸಿ ಎಡ, ಎಸ್​ಸಿ ಬಲ, ಸ್ಪರ್ಶಿಯರು, ಇತರರೆಂದು ನಾಲ್ಕು ವರ್ಗಗಳಾಗಿ ವಿಂಗಡನೆ ಮಾಡಲಾಗಿದೆ. ಸಂಪುಟ ಉಪಸಮಿತಿ ವರದಿಯ ಆಧಾರದಲ್ಲಿ ಎಡಕ್ಕೆ 6%, ಬಲಕ್ಕೆ 5.5%, ಸ್ಪರ್ಶಿಯರು 4.5%, ಇತರರಿಗೆ 1% ಒಳ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.

ನ್ಯಾ.ಸದಾಶಿವ ಆಯೋಗದ ವರದಿಯ ಪ್ರಕಾರ ಪರಿಶಿಷ್ಟ ಜಾತಿಯ 101 ಉಪಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡುವಂತೆ ಶಿಫಾರಸು ಮಾಡಲಾಗಿದೆ. ಇದರ ಪ್ರಕಾರ ಶೇ.33.4ರಷ್ಟಿರುವ ಒಂದನೇ ಗುಂಪಿಗೆ (ಎಡಗೈ ಪ.ಜಾ) ಶೇ.6, ಶೇ.32ರಷ್ಟಿರುವ (ಬಲಗೈ ಪ.ಜಾ) ಎರಡನೇ ಗುಂಪಿಗೆ ಶೇ.5, ಶೇ.23.64ರಷ್ಟಿರುವ (ಸ್ಪರ್ಶ ಪರಿಶಿಷ್ಟ ಜಾತಿ) ಮೂರನೇ ಗುಂಪಿಗೆ ಶೇ.3 ಮತ್ತು ಶೇ.4.65 ರಷ್ಟಿರುವ ಇತರ ಪರಿಶಿಷ್ಟ ಜಾತಿಯವರಿಗೆ ಶೇ.1ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವಂತೆ ಶಿಫಾರಸು ಮಾಡಿತ್ತು.

ಇದೇ ವೇಳೆ ಸ್ಪರ್ಶ್ಯ ಜಾತಿಗಳಾದ ಲಂಬಾಣಿ, ಬೋವಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿಯ ಗುಂಪಿನಿಂದ ಹೊರಗಿಡಬೇಕೆಂಬ ಬೇಡಿಕೆಯನ್ನು ಆಯೋಗ ತಿರಸ್ಕರಿಸಿತ್ತು. ಸಮೀಕ್ಷೆಯ ಪ್ರಕಾರ ಎಡಗೈ ಗುಂಪಿನ (ಮಾದಿಗ ಜಾತಿ) ಜನಸಂಖ್ಯೆ 32,35,517 (ಶೇ. 33.47), ಬಲಗೈ ಗುಂಪಿನ (ಹೊಲೆಯ ಜಾತಿ) ಜನಸಂಖ್ಯೆ 30,93,693 (ಶೇ. 32.01), ಇತರೆ ಪರಿಶಿಷ್ಟ ಜಾತಿಗಳು 4,49,879 (ಶೇ. 46.5) ಮತ್ತು ಸ್ಪೃಶ್ಯ ಜಾತಿಗಳ ಜನಸಂಖ್ಯೆ 22,84,642 (ಶೇ. 23.64) ಇದೆ. ಬೊಮ್ಮಾಯಿ‌ ಸರ್ಕಾರ ಪರಿಶಿಷ್ಟ ಜಾತಿಗಿರುವ 17% ಮೀಸಲಾತಿಯನ್ನು ಸಂಪುಟ ಉಪಸಮಿತಿ ವರದಿಯ ಆಧಾರದಲ್ಲಿ ಎಡಕ್ಕೆ 6%, ಬಲಕ್ಕೆ 5.5%, ಸ್ಪರ್ಶಿಯರು 4.5%, ಇತರರಿಗೆ 1%ರಂತೆ ಒಳ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.

ಮುಸ್ಲಿಂ ಮೀಸಲಾತಿಗೆ ಕತ್ತರಿ, ಒಕ್ಕಲಿಗರಿಗೆ, ವೀರಶೈವರಿಗೆ ಹಂಚಿಕೆ: ಇತ್ತ 2Bಯಡಿ ಇದ್ದ ಮುಸ್ಲಿ ಸಮುದಾಯದ 4% ಮೀಸಲಾತಿಗೆ ಬಿಜೆಪಿ ಸರ್ಕಾರ ಸಂಪೂರ್ಣ ಕತ್ತರಿ ಹಾಕಿದೆ. ಈ 4% ಮೀಸಲಾತಿಯನ್ನು ಹೊಸದಾಗಿ ಸೃಷ್ಟಿ ಮಾಡಲಾಗಿರುವ ಒಕ್ಕಲಿಗರಿಗಾಗಿನ 2C ಪ್ರವರ್ಗ ಹಾಗೂ ವೀರಶೈವ ಲಿಂಗಾಯತರಿಗಾಗಿನ 2D ಪ್ರವರ್ಗಕ್ಕೆ ತಲಾ 2%ರಂತೆ ಹಂಚಿಕೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಆ ಮೂಲಕ ಒಕ್ಕಲಿಗರಿಗೆ 2Cಯಡಿ 6% ಮತ್ತು ವೀರಶೈವ ಲಿಂಗಾಯತರಿಗೆ 2Dಯಡಿ 7% ಮೀಸಲಾತಿ ನೀಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 2C ಯಡಿ ಒಕ್ಕಲಿಗರಿಗೆ 4% ಇದ್ದ ಮೀಸಲಾತಿಗೆ 2% ಸೇರ್ಪಡೆಯಾಗಿ 6%ಗೆ ಏರಿಕೆ ಯಾಗಿದೆ‌. ಇನ್ನು 2Dಯಡಿ ಶೇ.5 ಇದ್ದ ಮೀಸಲಾತಿಗೆ 2% ಸೇರ್ಪಡೆಯಾಗಿ 7%ಗೆ ಮೀಸಲಾತಿ ಏರಿಕೆ ಮಾಡಲಾಗಿದೆ.

ಮುಸ್ಲಿಂ ಮೀಸಲಾತಿ EWSಗೆ ಶಿಫ್ಟ್: 2B ಯಡಿ ಇದ್ದ 4% ಮುಸ್ಲಿಂ ಮೀಸಲಾತಿಗೆ ಸಂಪೂರ್ಣ ಕತ್ತರಿ ಹಾಕಲಾಗಿದೆ. ಈಗ ಅದರಲ್ಲಿ ಇರುವ ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯದರವರನ್ನು EWS 10% ಮೀಸಲಾತಿಗೆ ಶಿಫ್ಟ್​ ಮಾಡಲು ನಿರ್ಧರಿಸಲಾಗಿದೆ.

2b ಧಾರ್ಮಿಕ ಅಲ್ಪಸಂಖ್ಯಾತರರಿಗೆ ಮೀಸಲಾತಿ ನೀಡುವ ಅವಕಾಶ ಇಲ್ಲ. ಆಂಧ್ರಪ್ರದೇಶ ಹೈಕೋರ್ಟ್ ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿಯನ್ನು ವಜಾ ಗೊಳಿಸಿತ್ತು. ಮುಸ್ಲಿಂ ಸಮುದಾಯದ ಕೆಲ ಉಪಜಾತಿಗಳು 2A ಯಡಿ, ಪ್ರವರ್ಗ 1ರಲ್ಲೂ ಮೀಸಲಾತಿ ಪಡೆಯುತ್ತಿದ್ದರು.

2Bಯಲ್ಲಿ ಸಂಪೂರ್ಣ 4% ಮುಸ್ಲಿಂರಿಗೆ ನೀಡಲಾಗುತ್ತಿರುವ ಮೀಸಲಾತಿಗೆ ಕತ್ತರಿ ಹಾಕಲಾಗಿದೆ. ಅದರಲ್ಲಿನ ಬಡ ಮುಸ್ಲಿಂಮರಿಗೆ EWSನಡಿ ಮೀಸಲಾತಿ ನೀಡಲಾಗುವುದು. ಹಾಗಾಗಿ ಮುಸ್ಲಿಮರಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

  • ಎಸ್​ಸಿ ಸಮುದಾಯಕ್ಕೆ ಒಳಮೀಸಲಾತಿ ಘೋಷಣೆ
  • ಎಸ್​ಸಿ ಎಡಗೈಗೆ ಶೇ 6 ರಷ್ಟು ಮೀಸಲಾತಿ
  • ಎಸ್​ಸಿ ಬಲಗೈಗೆ ಶೇ 5.5 ರಷ್ಟು ಮೀಸಲಾತಿ
  • 2ಸಿ ಕೆಟೆಗರಿ ಅಡಿಯಲ್ಲಿ ಒಕ್ಕಲಿಗರು ಸೇರಿದಂತೆ ಇತರರಿಗೆ ಶೇ 6 ರಷ್ಟು ಮೀಸಲಾತಿ
  • ಅದೇ ರೀತಿ ವೀರಶೈವ ಲಿಂಗಾಯತರು ಸೇರಿದಂತೆ ಇತರ ಸಮುದಾಯಕ್ಕೆ 2ಡಿ ಕೆಟೆಗರಿ ಅಡಿಯಲ್ಲಿ ಶೇ 7 ರಷ್ಟು ಮೀಸಲಾತಿ ಘೋಷಣೆ

ಇದನ್ನೂ ಓದಿ : ಸರ್ಕಾರವನ್ನು ಬಿಡದೆ ಕಾಡಿದ ಪಂಚಮಸಾಲಿ 2ಎ: ಇಂದಿನ ಸಂಪುಟ ಸಭೆಯಲ್ಲಿ ಸಿಗುತ್ತಾ ಮೀಸಲಾತಿ ಘೋಷಣೆ ಭಾಗ್ಯ?

ಬಿಜೆಪಿ ಟ್ವೀಟ್​: ಒಳ ಮೀಸಲಾತಿಯ ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದ್ದು ದಲಿತ ಸಮುದಾಯದ ಏಳಿಗೆಯ ಬದ್ಧತೆಯನ್ನು ಮೆರೆದಿದೆ. ಎಡೆಗೈ, ಬಲಗೈ, ಭೋವಿ, ಬಂಜಾರಾ ಹಾಗೂ ಅಲೆಮಾರಿ ಸಣ್ಣ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ಈ ಐತಿಹಾಸಿಕ ನಿರ್ಣಯದಿಂದ ಮತ್ತಷ್ಟು ಸಾಮಾಜಿಕ ನ್ಯಾಯ ದೊರಕಲಿದೆ.

  • ಒಳ ಮೀಸಲಾತಿಯ ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದ್ದು ದಲಿತ ಸಮುದಾಯದ ಏಳಿಗೆಯ ಬದ್ಧತೆಯನ್ನು ಮೆರೆದಿದೆ. ಎಡೆಗೈ, ಬಲಗೈ, ಭೋವಿ, ಬಂಜಾರಾ ಹಾಗೂ ಅಲೆಮಾರಿ ಸಣ್ಣ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ಈ ಐತಿಹಾಸಿಕ ನಿರ್ಣಯದಿಂದ ಮತ್ತಷ್ಟು ಸಾಮಾಜಿಕ ನ್ಯಾಯ ದೊರಕಲಿದೆ. #BJPYeBharavase pic.twitter.com/3trFHrBL9r

    — BJP Karnataka (@BJP4Karnataka) March 24, 2023 " class="align-text-top noRightClick twitterSection" data=" ">

ಹಲವು ವರ್ಷಗಳಿಂದ ಪ್ರಮುಖ ಸಮುದಾಯಗಳ ಬೇಡಿಕೆಯಾಗಿದ್ದ ಪ್ರವರ್ಗ 2ಕ್ಕೆ ಸೇರ್ಪಡೆ ಮಾಡುವ ನಿರ್ಧಾರದ ಬೆನ್ನಲ್ಲೇ, ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ರಾಜ್ಯ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಒಕ್ಕಲಿಗ & ವೀರಶೈವ-ಲಿಂಗಾಯತ ಸಮುದಾಯಗಳ ಮೀಸಲಾತಿಯನ್ನು ಶೇ. 6 ಹಾಗೂ 7 ಕ್ಕೆ ಹೆಚ್ಚಿಸಿ ಸಾಮಾಜಿಕ ನ್ಯಾಯದ ಬದ್ಧತೆಯನ್ನು ಮೆರೆದಿದೆ ಎಂದು ಟ್ವೀಟ್​ ಮಾಡಿದೆ.

  • ಹಲವು ವರ್ಷಗಳಿಂದ ಪ್ರಮುಖ ಸಮುದಾಯಗಳ ಬೇಡಿಕೆಯಾಗಿದ್ದ ಪ್ರವರ್ಗ 2ಕ್ಕೆ ಸೇರ್ಪಡೆ ಮಾಡುವ ನಿರ್ಧಾರದ ಬೆನ್ನಲ್ಲೇ, ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ರಾಜ್ಯ ಸಾಕ್ಷಿಯಾಗಿದೆ.

    ಶ್ರೀ @bsbommai ಸರ್ಕಾರವು ಒಕ್ಕಲಿಗ & ವೀರಶೈವ-ಲಿಂಗಾಯತ ಸಮುದಾಯಗಳ ಮೀಸಲಾತಿಯನ್ನು ಶೇ. 6 ಹಾಗೂ 7 ಕ್ಕೆ ಹೆಚ್ಚಿಸಿ ಸಾಮಾಜಿಕ ನ್ಯಾಯದ ಬದ್ಧತೆಯನ್ನು ಮೆರೆದಿದೆ. pic.twitter.com/BPQXm0Bqnt

    — BJP Karnataka (@BJP4Karnataka) March 24, 2023 " class="align-text-top noRightClick twitterSection" data=" ">
Last Updated :Mar 24, 2023, 10:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.