ETV Bharat / state

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಯನ ಪ್ರವಾಸ: ಗುವಾಹಟಿಗೆ ಹೊರಟ ರಾಜ್ಯದ ನಾಯಕರು

author img

By ETV Bharat Karnataka Team

Published : Nov 2, 2023, 11:40 AM IST

Updated : Nov 2, 2023, 12:15 PM IST

Public accounts committee tour: ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪ್ರವಾಸ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್.ಅಶೋಕ್, ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಶರವಣ, ಶಾಸಕ ಬಸವರಾಜ್ ರಾಯರೆಡ್ಡಿ, ಶಾಸಕ ಲಕ್ಷ್ಮಣ್ ಸವದಿ ಸೇರಿದಂತೆ ಹಲವರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಅಸ್ಸಾಂಗೆ ತೆರಳಿದರು.

public-accounts-committee-tour-state-leaders-left-for-guwahati
ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಯನ ಪ್ರವಾಸ : ಗುವಾಹಟಿಗೆ ಹೊರಟ ರಾಜ್ಯದ ನಾಯಕರು

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಯನ ಪ್ರವಾಸ: ಗುವಾಹಟಿಗೆ ಹೊರಟ ರಾಜ್ಯದ ನಾಯಕರು

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಸಾರ್ವಜನಿಕ ಲೆಕ್ಕಪತ್ರ ಸಮಿತಿ ವತಿಯಿಂದ ಮೂರು ರಾಜ್ಯಗಳ ಭೇಟಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್.ಅಶೋಕ್​ ಅವರು ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಿದ್ದಾರೆ. ಇಂದು ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಲಿಲ್ಲ.

ಈ ವೇಳೆ ಮಾತನಾಡಿದ ವಿಧಾನ ಪರಿಷತ್​ ಸದಸ್ಯ ಟಿ.ಎ.ಶರವಣ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ವತಿಯಿಂದ ಮೂರು ರಾಜ್ಯಗಳ ಭೇಟಿಗೆ ತೀರ್ಮಾನ ಮಾಡಲಾಗಿದೆ. ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ ಹಾಗೂ ಮೇಘಾಲಯಕ್ಕೆ ಹೋಗಲಿದ್ದೇವೆ. ಅಲ್ಲಿನ ವ್ಯವಸ್ಥೆಗಳನ್ನು ಅಧ್ಯಯನ ಮಾಡುತ್ತೇವೆ. ಸಮಿತಿಯಲ್ಲಿರುವ ಎಲ್ಲಾ ಪಕ್ಷದ ನಾಯಕರು ಗುವಾಹಟಿಗೆ ಹೊರಟಿದ್ದೇವೆ. ನವೆಂಬರ್​ 8ನೇ ತಾರೀಕು ವಾಪಸ್​ ಆಗುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್​ ಸರ್ಕಾರ ಉರುಳಿಸುವ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿ, ಜೆಡಿಎಸ್ 19 ಶಾಸಕರಿರುವ ಸಣ್ಣ ಪಕ್ಷ. ಸರ್ಕಾರ ಉರುಳಿಸುವ ಶಕ್ತಿ ನಮಗೆ ಎಲ್ಲಿದೆ?. ದುಬೈನಲ್ಲಿ ಕುಳಿತು ಸರ್ಕಾರ ಬೀಳಿಸುವ ಶಕ್ತಿ ನಮ್ಮ‌ ಪಕ್ಷಕ್ಕಿಲ್ಲ. ಸರ್ಕಾರವನ್ನು ನಾವ್ಯಾರೂ ಉರುಳಿಸುವ ಕೆಲಸ ಮಾಡಬೇಕಿಲ್ಲ. ಈಗಾಗಲೇ ಕಾಂಗ್ರೆಸ್ ನಾಯಕರು ಯಾವ ರೀತಿ ಮಾತನಾಡುತ್ತಿದ್ದಾರೆ ಎಂಬುದನ್ನು ನೋಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರವನ್ನು ಕಾಂಗ್ರೆಸ್​ನವರೇ ಉರುಳಿಸುತ್ತಾರೆ. ನಾವ್ಯಾರು ಬೇಕಿಲ್ಲ ಎಂದರು.

ಪ್ರತಿಕ್ರಿಯಿಸಿದ ಶಾಸಕ ಬಸವರಾಜ್​ ರಾಯರೆಡ್ಡಿ ಮಾತನಾಡಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ವತಿಯಿಂದ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂಬುದನ್ನು ಅಧ್ಯಯನ ಮಾಡಲು ತೆರಳುತ್ತಿದ್ದೇವೆ ಎಂದು ತಿಳಿಸಿದರು.

ನಾನು ಕಳೆದ 30 ವರ್ಷಗಳಿಂದ ಲೆಕ್ಕಪತ್ರ ಸಮಿತಿಯಲ್ಲಿ ಇದ್ದೇನೆ. ವಿವಿಧ ರಾಜ್ಯಗಳಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ 2 -3 ದಿನಗಳಲ್ಲಿ ವಾಪಸ್​ ಬರುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಹಾಲಿನ ಖರೀದಿ ದರ ಕಡಿತಕ್ಕೆ ಮುಂದಾದ ಧಾರವಾಡ ಕೆಎಂಎಫ್: ರೈತರ ಆಕ್ರೋಶ

Last Updated : Nov 2, 2023, 12:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.