ETV Bharat / state

ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನಕ್ಕೆ ಸಹಕರಿಸಿ: ಗೌರವ್ ಗುಪ್ತಾ ಮನವಿ

author img

By

Published : Feb 2, 2022, 11:09 AM IST

unauthorized ad-free campaign, public cooperates with unauthorized ad-free campaign, BBMP news, Bangalore news, ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನ, ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನಕ್ಕೆ ಸಹಕರಿಸಿ, ಬಿಬಿಎಂಪಿ ಸುದ್ದಿ, ಬೆಂಗಳೂರು ಸುದ್ದಿ,
ಗೌರವ್ ಗುಪ್ತಾ ಮನವಿ

ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಬಿಬಿಎಂಪಿ ಮನವಿ ಮಾಡಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರ ಮುದ್ರಣ ಪ್ರಕಟಣೆ/ಜಾಹೀರಾತು ಹಾಗೂ ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಿರುವ ವಾಣಿಜ್ಯ, ಬೃಹತ್ ಎಲ್.ಇ.ಡಿ, ಸೈಕಲ್, ವಾಹನ ಜಾಹೀರಾತುಗಳನ್ನು ಮುಕ್ತಗೊಳಿಸುವ ಅಭಿಯಾನಕ್ಕೆ ಕೈ ಜೋಡಿಸಲು ರೆಸಿಡೆಂಟ್ ವೆಲ್ ಫೇರ್ ಅಸೋಸಿಯೇಷನ್ (ಸರ್ಕಾರೇತರ ಸಂಸ್ಥೆಗಳು) ಹಾಗೂ ನಾಗರಿಕರಲ್ಲಿ ಪಾಲಿಕೆ ಮನವಿ ಮಾಡಿದೆ.

unauthorized ad-free campaign, public cooperates with unauthorized ad-free campaign, BBMP news, Bangalore news, ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನ, ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನಕ್ಕೆ ಸಹಕರಿಸಿ, ಬಿಬಿಎಂಪಿ ಸುದ್ದಿ, ಬೆಂಗಳೂರು ಸುದ್ದಿ,
ಬಿಬಿಎಂಪಿ

ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018 ರಲ್ಲಿ ಅಂಗಡಿ ಮುಂಗಟ್ಟು, ವಾಹನ ಇನ್ನಿತರ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ (ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿ ನೀಡಲು ಮಾತ್ರ ಅವಕಾಶವಿರುತ್ತದೆ ಎಂದು ಹೇಳಿದೆ.

ಓದಿ: ತುಟ್ಟಿಯಾದ ಗ್ಯಾಸ್​ ಸಿಲಿಂಡರ್​.. PNG ಮೊರೆ ಹೋದ ಬೆಂಗಳೂರಿನ ಜನರು

ಇತರ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಎಲ್ಇಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು, ಕುರಿತ ಜಾಹೀರಾತು ಪ್ರಕಟಣೆಗಳ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಭಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

unauthorized ad-free campaign, public cooperates with unauthorized ad-free campaign, BBMP news, Bangalore news, ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನ, ಅನಧಿಕೃತ ಜಾಹೀರಾತು ಮುಕ್ತಗೊಳಿಸುವ ಅಭಿಯಾನಕ್ಕೆ ಸಹಕರಿಸಿ, ಬಿಬಿಎಂಪಿ ಸುದ್ದಿ, ಬೆಂಗಳೂರು ಸುದ್ದಿ,
ಗೌರವ್ ಗುಪ್ತಾ ಮನವಿ

ವಲಯ ಕಚೇರಿಗಳಿಗೆ ಮಾಹಿತಿ ನೀಡಿ: ಈ ಕುರಿತು ಮಾತನಾಡಿರುವ ಮುಖ್ಯ ಆಯುಕ್ತ ಗೌರವ್ ಗುಪ್ತಾ ನಗರದ ವಸತಿ ಪ್ರದೇಶಗಳಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು, ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು, ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತುಗಳು, ಬೃಹತ್ ಎಲ್.ಐ.ಡಿ, ಸೈಕಲ್ ಜಾಹೀರಾತುಗಳು, ವಾಹನ ಮತ್ತು ಇತರ ಜಾಹೀರಾತುಗಳು ಕಂಡು ಬಂದಲ್ಲಿ ವಲಯ ಕಚೇರಿಗಳಿಗೆ ಮಾಹಿತಿ ನೀಡಲು ನಗರದ ನಾಗರಿಕರಲ್ಲಿ ಮನವಿ ಮಾಡಿದರು.

ಎಫ್.ಐ.ಆರ್ ದಾಖಲು: ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ ಕಾಯ್ದೆ ಅಡಿಯಲ್ಲಿ ಎಫ್.ಐ.ಆರ್. ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಬಿಬಿಎಂಪಿಯ ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸುವ ಮುಕ್ತ ಅಭಿಯಾನಕ್ಕೆ ಕೈ ಜೋಡಿಸಿ ಬೆಂಬಲಿಸಿ ಎಂದು ಜನಸಾಮನ್ಯರಿಗೆ ಕೇಳಿಕೊಂಡರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.