ETV Bharat / state

ನೈರುತ್ಯ ಮುಂಗಾರು ಕ್ಷೀಣ.. ರಾಜ್ಯದಲ್ಲಿ ಎದುರಾಯ್ತು ಮಳೆ ಕೊರತೆ

author img

By

Published : Jun 24, 2022, 9:59 PM IST

ಈ ಬಾರಿ ರಾಜ್ಯದ ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.59ರಷ್ಟು, ಕರಾವಳಿಯಲ್ಲಿ ಶೇ.54ರಷ್ಟು ಮಳೆ ಕೊರತೆಯಾಗಿದೆ. ಆದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.108ರಷ್ಟು ಅಧಿಕ ಮಳೆಯಾಗಿದೆ..

shortage-of-rain-in-southwest-monsoon-in-karnataka
ನೈರುತ್ಯ ಮುಂಗಾರು ಕ್ಷೀಣ... ರಾಜ್ಯದಲ್ಲಿ ಎದುರಾಯ್ತು ಮಳೆ ಕೊರತೆ

ಬೆಂಗಳೂರು : ಜೂನ್ ಮೊದಲ ವಾರದಿಂದ ನೈರುತ್ಯ ಮುಂಗಾರು ಆರಂಭವಾಗಿದ್ದರೂ ಕೂಡ ರಾಜ್ಯದಲ್ಲಿ ಮಳೆ ಕೊರತೆ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಒಳನಾಡಿನಲ್ಲಿ ಮಾತ್ರ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಮುಂದಿನ ಮೂರ್ನಾಲ್ಕು ದಿನ ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ವರ್ಷಧಾರೆಯ ಲಕ್ಷಣಗಳು ಗೋಚರಿಸಲಿವೆ.

ಮಳೆ ಕೊರತೆ : ರಾಜ್ಯದಲ್ಲಿ ಜೂನ್ ತಿಂಗಳಿನಲ್ಲಿ ಶೇ.24.4ರಷ್ಟು ಮಳೆ ಕೊರತೆ ಉಂಟಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತ ಶೇ.6ರಷ್ಟು ಕಡಿಮೆ ಮಳೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.59ರಷ್ಟು, ಕರಾವಳಿಯಲ್ಲಿ ಶೇ.54ರಷ್ಟು ಮಳೆ ಕೊರತೆಯಾಗಿದೆ. ಆದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.108ರಷ್ಟು ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ವಿಚ್ಛೇದನ ಬಯಸಿ ಕೋರ್ಟ್​ ಮೆಟ್ಟಿಲೇರಿದ್ದ ದಂಪತಿ ಮತ್ತೆ ಒಂದಾದರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.