ETV Bharat / state

ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ?: ಪಿಎಂಗೆ ಸಿದ್ದರಾಮಯ್ಯ ಪ್ರಶ್ನೆ

author img

By

Published : Apr 29, 2023, 10:35 PM IST

siddaramaiah-slams-pm-narendra-modi
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷನಾಯಕ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ ಎಂದು ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ನರೇಂದ್ರ ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ…

    — Siddaramaiah (@siddaramaiah) April 29, 2023 " class="align-text-top noRightClick twitterSection" data=" ">

ನಿಮ್ಮ ಅಂತರಂಗದಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ? ರಾಜ್ಯದ ಬಿಜೆಪಿ ಸಚಿವರ 40% ಕಮಿಷನ್ ಕಿರುಕುಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ?. ಕಳೆದ ಮೂರೂವರೆ ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ ಎಂದಿದ್ದಾರೆ.

  • ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ @narendramodi ಜೀ? 5/13

    — Siddaramaiah (@siddaramaiah) April 29, 2023 " class="align-text-top noRightClick twitterSection" data=" ">
  • ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು…

    — Siddaramaiah (@siddaramaiah) April 29, 2023 " class="align-text-top noRightClick twitterSection" data=" ">

ಬಿಜೆಪಿಯಿಂದ ಲಿಂಗಾಯತ ನಾಯಕರಿಗೆ ಅನ್ಯಾಯ : ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ಧಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷಣದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ?. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಬಿ.ಎಸ್. ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದಿರಿ. ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ. ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ. ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

  • ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ?
    ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ…

    — Siddaramaiah (@siddaramaiah) April 29, 2023 " class="align-text-top noRightClick twitterSection" data=" ">

ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ?. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ?. ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ?. ಯಾಕೆ ಅವರನ್ನು ಮೂಲೆಗೆ ತಳ್ಳಿದ್ದೀರಿ?. ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ ಎಂದು ಹೇಳಿದ್ದಾರೆ.

  • ರಾಜ್ಯದ @BJP4Karnataka ಸಚಿವರ 40% ಕಮಿಷನ್ ಕಿರುಕಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ?
    ಕಳೆದ ಮೂರುವರೆ ವರ್ಷಗಳಲ್ಲಿ ಒಂದೂವರೆ…

    — Siddaramaiah (@siddaramaiah) April 29, 2023 " class="align-text-top noRightClick twitterSection" data=" ">

ಬಂಜಾರರಿಗೆ ಪರಿಶಿಷ್ಟ ಸ್ಥಾನಮಾನ ನೀಡಿದ್ದು ಕಾಂಗ್ರೆಸ್​ : ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ? ನರೇಂದ್ರ ಮೋದಿಯವರೇ.. ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ? ಎಂಬ ಪ್ರಶ್ನೆ ಮಾಡಿದ್ದಾರೆ.

ಸೋನಿಯಾ ಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ತಾನೆ ಸೋನಿಯಾ ಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷ ಅಸೂಯೆಯ ವಿಷ ಇಲ್ಲವೇ?. ರಾಜ್ಯದ ಬಿಜೆಪಿ ಸರ್ಕಾರ 9 ಲಕ್ಷ ಮನೆಗಳನ್ನು ಕಟ್ಟಿದೆ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಿರಲ್ಲಾ, ನಾವು ಕಟ್ಟಿರುವ ಮನೆಗಳ ಲೆಕ್ಕವನ್ನು ನಿಮಗೆ ಕೊಟ್ಟು ನಿಮ್ಮಿಂದ ಸುಳ್ಳು ಹೇಳಿಸಿದ ವಸತಿ ಸಚಿವರನ್ನು ಒಮ್ಮೆ ಜನರ ಮಧ್ಯೆ ಬಹಿರಂಗ ಚರ್ಚೆಗೆ ಕರೆತನ್ನಿ ಎಂದು ಹೇಳಿದ್ದಾರೆ.

ಇದು ನನ್ನ ಸವಾಲು. 2013-18ರ ಅವಧಿಯಲ್ಲಿ ರೈತರಿಗೆ ಕೊಟ್ಟ ಮಾತಿನಂತೆ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೀರಾವರಿಗೆ ಖರ್ಚು ಮಾಡಿ ರೈತರ ಹೊಲಕ್ಕೆ ನೀರು ಹರಿಸಿದ ಹೆಮ್ಮೆ ನಮ್ಮದು. ಮೇಕೆದಾಟು, ಕಳಸ -ಬಂಡೂರಿ ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳೆರಡೂ ನಿರ್ಲಕ್ಷಿಸುತ್ತಾ ಬಂದಿದೆ ಎನ್ನುವುದನ್ನು ರಾಜ್ಯದ ರೈತರಿಗೆ ಗೊತ್ತಿದೆ ಎಂಬ ಮಾತುಗಳನ್ನು ಸಿದ್ದರಾಮಯ್ಯ ಆಡಿದ್ದಾರೆ.

ಕಮಿಷನ್​ ನುಂಗುವುದು ಬಿಜೆಪಿ ಚಾಳಿ : ಕಮಿಷನ್ ನುಂಗುವ ಬಿಜೆಪಿ ಸರ್ಕಾರದ ಚಾಳಿ ಮಠ-ಮಂದಿರಗಳನ್ನೂ ಬಿಟ್ಟಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತರ ಕರ್ನಾಟಕದ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೆ ಅದು ತಲುಪುವಾಗ ಕಡ್ಡಿ ಮಾತ್ರ ಉಳಿಯುತ್ತದೆ ಎಂದು ಶಿರಹಟ್ಟಿ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಆಕ್ರೋಶ ನಿಮಗೆ ಕೇಳಿಸಿಲ್ಲವೇ ಸ್ವಾಮಿಗಳೇ?.. ನಿಮ್ಮದೇ ಪಕ್ಷ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮತ್ತು ಅವರ ಮಗ ಈಗ ಜೈಲಲ್ಲಿರುವುದು ಯಾವ ದೇಶ ಸೇವೆ ಮಾಡಿದ್ದಕ್ಕಾಗಿ ಮೋದಿಯವರೇ?.. ಪ್ರತಿಷ್ಠಿತ ಕೆಎಸ್ ಡಿಸಿಎಎಲ್ ಕಚೇರಿಯಲ್ಲಿಯೇ ಈ ಶಾಸಕರ ಮಗ ಲಂಚ ತಿನ್ನುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದನ್ನಲ್ಲಾ? ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಎಂಟೂವರೆ ಕೋಟಿ ಹಣವನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದರಲ್ಲಾ.. ಅದೇನು ಅವರು ಬೆಳೆದ ಅಡಿಕೆ ಮಾರಾಟದ ದುಡ್ಡೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಬಿ ಎಲ್ ಸಂತೋಷ್​ರಿಂದ ಲಿಂಗಾಯತರಿಗೆ ಅಪಮಾನ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.