ETV Bharat / state

'ಕಾಂಗ್ರೆಸ್ ನಾಯಕರನ್ನು ಸೆಳೆದು ಕೋಟ್ಯಂತರ ರೂಪಾಯಿ ಆಮಿಷ': ಬಿಜೆಪಿ ವಿರುದ್ಧ ಪೊಲೀಸ್‌ ಆಯುಕ್ತರಿಗೆ ದೂರು

author img

By ETV Bharat Karnataka Team

Published : Oct 27, 2023, 6:50 PM IST

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ಬಿಜೆಪಿ ವಿರುದ್ಧ ಆಮಿಷದ ಆರೋಪ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ಸೆಳೆದು ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದ್ದು, ಇದರ ಹಿಂದೆ ಭ್ರಷ್ಟಾಚಾರದ ವಾಸನೆ ಅಡಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ನಗರ ಪೊಲೀಸ್ ಆಯುಕ್ತರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ದೂರು ಸಲ್ಲಿಸಿದರು. ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸಲು ಬಿಜೆಪಿ ನಾಯಕರು ಆಪರೇಷನ್ ಕಮಲ ಹೆಸರಿನಲ್ಲಿ ಸುಮಾರು 20 ಜನ ಶಾಸಕರನ್ನು ಸಂಪರ್ಕಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚಿಸಿರುವ ಉದಾಹರಣೆ ನಮ್ಮ ಮುಂದಿದೆ. ನಗರ ಖಾಸಗಿ ಹೋಟೆಲ್ ಶಾಸಕರನ್ನು ಸಂಪರ್ಕಿಸಿ ಕಾಂಗ್ರೆಸ್​ನಿಂದ ರಾಜೀನಾಮೆ ನೀಡಿ ಕೋಟ್ಯಂತರ ರೂಪಾಯಿ ನೀಡುವ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಮಂಡ್ಯ ಶಾಸಕ ರವಿಕುಮಾರ್ ಗಾಣಿಗ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಖಾಸಗಿ ಹೊಟೇಲ್​ನಲ್ಲಿ ಕೆಲ ಶಾಸಕರು ಭೇಟಿಯಾಗಿದ್ದಾರೆ. ಸಂದರ್ಭ ಬಂದಾಗ ವಿಡಿಯೊ, ಆಡಿಯೊ ಕರೆ ಸಮೇತ ಬಹಿರಂಗಪಡಿಸಲಾಗುವುದು ಎಂದು ರವಿಕುಮಾರ್ ಹೇಳಿದ್ದಾರೆ. ಶಾಸಕರನ್ನು ಸೆಳೆದು ಹಣ ನೀಡುವ ಆಮಿಷವೊಡ್ಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಹೀಗಾಗಿ ಶಾಸಕರನ್ನು ಸೆಳೆದು ಹಣದ ವ್ಯವಹಾರ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್ 8 ಹಾಗೂ ಐಪಿಸಿ 171-ಬಿ ಮತ್ತು 120-ಬಿ ಅಡಿಯಲ್ಲಿ ಕಾನೂನಿನಡಿ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, "ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಶಾಸಕರನ್ನು ಸೆಳೆಯುವ ಕೆಲಸವಾಗುತ್ತಿದೆ. ಸಚಿವ ಹಾಗೂ ಶಾಸಕ ಸ್ಥಾನದಿಂದ ರಾಜೀನಾಮೆ ಹೊರಬಂದರೆ ಅವರಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಶಾಸಕರನ್ನು ಖರೀದಿ ಮಾಡುವ ಪ್ರಕ್ರಿಯೆ ನಿಲ್ಲಬೇಕು. ಹಣದ ಹಿಂದೆ ಯಾರಿದ್ದಾರೆ. ಯಾರೆಲ್ಲ ನಾಯಕರಿದ್ದಾರೆ ಎಂಬುದು ಗೊತ್ತಾಗಿದೆ. ಈಗಾಗಲೇ ಖಾಸಗಿ ಹೋಟೇಲ್​ವೊಂದರಲ್ಲಿ ಹಣ ಶೇಖರಣೆಯಾಗಿದೆ ಎಂಬ ಮಾಹಿತಿಯಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಕೆಲಸವನ್ನು ಮಾಡಲಾಗುತ್ತಿದೆ" ಎಂದು ದೂರಿದರು.

ಇದನ್ನೂ ಓದಿ: ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್​ನಿಂದ ಹುಲಿ ಉಗುರಿನ ನಾಟಕ: ಸಿ.ಟಿ.ರವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.