ETV Bharat / state

ಆರ್ಟಿಕಲ್ 370: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ರಾಜ್ಯ ಬಿಜೆಪಿ ನಾಯಕರು

author img

By ETV Bharat Karnataka Team

Published : Dec 11, 2023, 4:29 PM IST

ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ರಾಜ್ಯ ಬಿಜೆಪಿ ನಾಯಕರು
ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ರಾಜ್ಯ ಬಿಜೆಪಿ ನಾಯಕರು

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಣೆ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.

  • ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ 370ನೇ ವಿಧಿ ರದ್ದು ಮಾಡಿ ಆ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದ್ದ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಸರಿ ಎಂದು ಎತ್ತಿಹಿಡಿಯುವ ಮೂಲಕ ಮಾನ್ಯ ಸರ್ವೋಚ್ಛ ನ್ಯಾಯಾಲಯ ಇಂದು ಐತಿಹಾಸಿಕ ತೀರ್ಪು ನೀಡಿದೆ.

    ಭಾರತದ ಏಕತೆ, ಅಖಂಡತೆಯನ್ನು…

    — B.S.Yediyurappa (@BSYBJP) December 11, 2023 " class="align-text-top noRightClick twitterSection" data=" ">

ಇಂದೊಂದು ಐತಿಹಾಸಿಕ ತೀರ್ಪು : ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ 370ನೇ ವಿಧಿ ರದ್ದು ಮಾಡಿ ಆ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರವನ್ನು ಸರಿ ಎಂದು ಎತ್ತಿಹಿಡಿಯುವ ಮೂಲಕ ಮಾನ್ಯ ಸರ್ವೋಚ್ಛ ನ್ಯಾಯಾಲಯ ಇಂದು ಐತಿಹಾಸಿಕ ತೀರ್ಪು ನೀಡಿದೆ.

ಭಾರತದ ಏಕತೆ, ಅಖಂಡತೆ ರಕ್ಷಿಸಿ, ಜಮ್ಮು ಕಾಶ್ಮೀರದ ಜನತೆಗೆ ನ್ಯಾಯ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಟ್ಟ ದಿಟ್ಟ ಹೆಜ್ಜೆಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನುಮೋದನೆಯ ಬಲವೂ ಸಿಕ್ಕಿದೆ. ದೇಶ ಮೊದಲು ಎನ್ನುವ ಪಕ್ಷದ ಧ್ಯೇಯವನ್ನು ಎತ್ತಿ ಹಿಡಿದ ನಮ್ಮ ಕೇಂದ್ರ ಸರ್ಕಾರಕ್ಕೆ ಹೆಮ್ಮೆಯ ಅಭಿನಂದನೆಗಳು ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಸಾಮಾಜಿಕ ಜಾಲತಾಣ ಎಕ್ಸ್​ ಆ್ಯಪ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

  • ಸುಪ್ರೀಂ ಕೋರ್ಟ್ ಇವತ್ತು ನೀಡಿರುವ ಅತ್ಯಂತ ಮಹತ್ವದ ತೀರ್ಪು ಐತಿಹಾಸಿಕವಾಗಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಿದೆ. ಹಾಗೂ ಕೇಂದ್ರ ಸರ್ಕಾರ ಆರ್ಟಿಕಲ್ 370 ಯನ್ನು ರದ್ದುಪಡಿಸಿರುವುದನ್ನು ಎತ್ತಿ ಹಿಡಿದಿದೆ.

    ಈ ಸಂದರ್ಭದಲ್ಲಿ ನಾನು ಪ್ರಧಾನಿ ಶ್ರೀ @narendramodi ಹಾಗೂ ಕೇಂದ್ರ ಗೃಹ ಸಚಿವರಾದ @AmitShah

    — Basavaraj S Bommai (@BSBommai) December 11, 2023 " class="align-text-top noRightClick twitterSection" data=" ">

ಮೋದಿ ಸರ್ಕಾರದ ಸಾಧನೆಗೆ ಮತ್ತೊಂದು ಗರಿ : ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಿದೆ. ಹಾಗೂ ಕೇಂದ್ರ ಸರ್ಕಾರ ಆರ್ಟಿಕಲ್ 370ನ್ನು ರದ್ದುಪಡಿಸಿರುವುದನ್ನು ಎತ್ತಿ ಹಿಡಿದಿದೆ. ಈ ಸಂದರ್ಭದಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದೂರದೃಷ್ಟಿ ಇರುವ ಭಾರತದ ಏಕತೆ ಮತ್ತು ಅಖಂಡತೆ ಎತ್ತಿ ಹಿಡಿಯುವ ದಿಟ್ಟ ನಿರ್ಧಾರ ಮಾಡಿ, ಜಮ್ಮು ಕಾರ್ಶಿರದಲ್ಲಿ ಶಾಂತಿ, ನೆಮ್ಮದಿ ಸ್ಥಾಪನೆಗೆ ನಾಂದಿ ಹಾಡಿರುವ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಹಮತದ ಮುದ್ರೆ ಒತ್ತಿದೆ. ಮೋದಿ ಸರ್ಕಾರದ ಸಾಧನೆಗೆ ಮತ್ತೊಂದು ಗರಿ ಇಟ್ಟಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

  • “ಅಂದು ಮೋದೀ ಜೀ ಸರ್ಕಾರದ ಆರ್ಟಿಕಲ್ 370 ರದ್ದತಿಯ ಚಾರಿತ್ರಿಕ ನಿರ್ಧಾರ - ಇಂದು ನ್ಯಾಯಾಲಯದ ಸಂವಿಧಾನಿಕ ಬೆಂಬಲದ ಐತಿಹಾಸಿಕ ಪುರಸ್ಕಾರ”

    ಕೋಟ್ಯಾಂತರ ಭಾರತೀಯರ ಬಹುವರ್ಷಗಳ ನಿರೀಕ್ಷೆ ಹಾಗೂ ಭಾರತದ ಸಾರ್ವಭೌಮತ್ವದ ಸುರಕ್ಷತೆಗಾಗಿ ಹೆಮ್ಮೆಯ ಪ್ರಧಾನಿ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಆರ್ಟಿಕಲ್ 370 ರದ್ದತಿ ಹಾಗೂ… pic.twitter.com/tAQ9uIJ7dE

    — Vijayendra Yediyurappa (@BYVijayendra) December 11, 2023 " class="align-text-top noRightClick twitterSection" data=" ">

ಆರ್ಟಿಕಲ್ 370 ರದ್ದತಿಯ ಚಾರಿತ್ರಿಕ ನಿರ್ಧಾರ : ಅಂದು ಮೋದಿ ಸರ್ಕಾರದ ಆರ್ಟಿಕಲ್ 370 ರದ್ದತಿಯ ಚಾರಿತ್ರಿಕ ನಿರ್ಧಾರ - ಇಂದು ನ್ಯಾಯಾಲಯದ ಸಂವಿಧಾನಿಕ ಬೆಂಬಲದ ಐತಿಹಾಸಿಕ ಪುರಸ್ಕಾರ ಎನ್ನುವ ತಲೆಬರಹದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಕೋಟ್ಯಂತರ ಭಾರತೀಯರ ಬಹುವರ್ಷಗಳ ನಿರೀಕ್ಷೆ ಹಾಗೂ ಭಾರತದ ಸಾರ್ವಭೌಮತ್ವದ ಸುರಕ್ಷತೆಗಾಗಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಆರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶದ ನಿರ್ಧಾರವನ್ನು ಸಂವಿಧಾನಬದ್ಧ ಆದೇಶ ಎಂದು ಮಾಡುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಸಂವಿಧಾನಿಕ ಪೀಠ ಕೇಂದ್ರ ಸರ್ಕಾರದ ನಿರ್ಧಾರವನ್ನು 'ಸಂವಿಧಾನಿಕ ಕ್ರಮ' ಎಂದು ನೀಡಿರುವ ಐತಿಹಾಸಿಕ ತೀರ್ಪು ಶತಕೋಟಿ ಭಾರತೀಯರಿಗೆ ಹರ್ಷ ಉಂಟುಮಾಡಿದೆ.

ಇಂಥ ಮಹತ್ವದ ನಿರ್ಧಾರ ಹಾಗೂ ಸಂವಿಧಾನದ ಮನ್ನಣೆಗಾಗಿ ಜನ ಸಂಘದ ಸ್ಥಾಪನೆಯ ಮುಂಚೂಣಿಯಲ್ಲಿ ನಿಂತು ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಕನಸು ನನಸಾದ ಈ ಸಂದರ್ಭ ಅವರು ಹೇಳಿದ “ ಒಂದು ದೇಶ, ಒಂದು ಸಂವಿಧಾನ….” ಅಖಂಡ ಭಾರತದ ಪರಿಕಲ್ಪನೆಯ ಮಾತುಗಳು ಮತ್ತೆ ಮಾರ್ದನಿಸಿ ವಿಜಯ ಘೋಷ ಮೊಳಗಿಸಿದೆ ಎಂದಿದ್ದಾರೆ.

  • ಆತ್ಮೀಯ ನನ್ನ ರಾಷ್ಟ್ರಬಂಧುಗಳೇ.

    ಕೋಟ್ಯಾಂತರ ಭಾರತೀಯರ ಬಹುವರ್ಷಗಳ ನಿರೀಕ್ಷೆ ಹಾಗೂ ಭಾರತದ ಸಾರ್ವಭೌಮತ್ವದ ಸುರಕ್ಷತೆಗಾಗಿ ಹೆಮ್ಮೆಯ ಪ್ರಧಾನಿ ಶ್ರೀ @narendramodi ಜಿಯವರ ನೇತೃತ್ವದ @BJP4India ಸರ್ಕಾರ ಕೈಗೊಂಡ ಆರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶ ಘೋಷಣೆಯ ನಿರ್ಧಾರವನ್ನು ಸಂವಿಧಾನಬದ್ಧ ಆದೇಶ ಎಂದು ಮಾನ್ಯ ಮಾಡುವ ಮೂಲಕ…

    — C T Ravi 🇮🇳 ಸಿ ಟಿ ರವಿ (@CTRavi_BJP) December 11, 2023 " class="align-text-top noRightClick twitterSection" data=" ">

ಭಾರತೀಯರ ಬಹುವರ್ಷಗಳ ನಿರೀಕ್ಷೆ ಹಾಗೂ ಭಾರತದ ಸಾರ್ವಭೌಮತ್ವದ ಸುರಕ್ಷತೆಗಾಗಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೈಗೊಂಡ ಆರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶ ಘೋಷಣೆಯ ನಿರ್ಧಾರವನ್ನು ಸಂವಿಧಾನಬದ್ಧ ಆದೇಶ ಎಂದು ಮಾನ್ಯ ಮಾಡುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಸಂವಿಧಾನಿಕ ಪೀಠದ ನಿರ್ಧಾರ ಶತಕೋಟಿ ಭಾರತೀಯರಿಗೆ ಹರ್ಷ ಉಂಟುಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನಿ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.

ಇದನ್ನೂ ಓದಿ : ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ ಕೆ ನಾಣು ಆಯ್ಕೆ: ಇಬ್ರಾಹಿಂ ನೇತೃತ್ವದ ಸಭೆಯಲ್ಲಿ ನಿರ್ಣಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.