ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರ ಎಲ್ಲ ಸಹಕಾರ ನೀಡಲು ಸಿದ್ಧ: ಸಿಎಂ ಅಭಯ

author img

By

Published : Nov 24, 2022, 1:43 PM IST

CM

ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆ ಮಹಿಳೆಯರಿಗೆ ಉದ್ಯೋಗ ನೀಡಲಾಗಿದೆ. ಇದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನರಿಗೆ ಕೆಲಸವನ್ನು ನೀಡಿದೆ. ಹಾಗಾಗಿ ಈ ಉದ್ಯಮಕ್ಕೆ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಅಗರಬತ್ತಿ ಉದ್ಯಮಕ್ಕೆ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಯ ನೀಡಿದ್ದಾರೆ.

ಗುರುವಾರ ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ (AIAMA )2022ನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಈ ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ, ಕಮ್ಮಾರ, ಚಮ್ಮಾರ ಸೇರಿದಂತೆ ಇತರ ಸಮುದಾಯಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರುತ್ತಿದೆ. ಆರ್ಥಿಕತೆ ಕೆಳ ಸ್ಥರದಿಂದ ಬಲಗೊಳ್ಳುತ್ತದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ
ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ

ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ: ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ ಮಾಡುತ್ತಿದೆ. 250 ವರ್ಷಗಳಿಂದ ಪರಿಮಳದ ಜೊತೆಗೆ ಸಂತೋಷ ಹರಡುತ್ತಿದ್ದೀರಿ. ಯಾವುದೇ ಉದ್ಯಮ ಈ ರೀತಿ ಇಲ್ಲ. ಸಣ್ಣ ಸಣ್ಣ ಸಂತೋಷಗಳು ದೊಡ್ಡ ಸಂಭ್ರಮ ನೀಡುತ್ತಿವೆ. ಅಗರಬತ್ತಿ ಉದ್ಯಮಮಕ್ಕೆ ದೊಡ್ಡ ಇತಿಹಾಸವಿದೆ ಎಂದು ಸಿಎಂ ಹೇಳಿದರು.

ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ
ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ

ಇದೊಂದು ದೊಡ್ಡ ವಿಜ್ಞಾನ. ಪಶ್ಚಿಮಾತ್ಯ ದೇಶಗಳಲ್ಲಿ ಕೃತಕ ಪರಿಮಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಭಾರತ ಜೀವ ವೈವಿಧ್ಯವಿರುವ ದೇಶ. ನಮ್ಮಲ್ಲಿ ಪ್ರಾಕೃತಿಕವಾಗಿಯೇ ಪರಿಮಳ ಬೀರುವ ಉತ್ಪನ್ನಗಳು ದೊರೆಯುತ್ತಿವೆ. ನನ್ನ ಕ್ಷೇತ್ರದಲ್ಲಿಯೂ ಒಬ್ಬರು ಸುಮಾರು 2000 ಎಕರೆ ಪ್ರದೇಶದಲ್ಲಿ ಪುಷ್ಪ ಕೃಷಿ ಮಾಡುತ್ತಿದ್ದಾರೆ ಎಂದರು.

ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ
ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ
ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ
ಐಮಾ ಎಕ್ಸ್ ಪೋ ಉದ್ಘಾಟಿಸಿದ ಸಿಎಂ

ಮಹಿಳೆಯರಿಗೆ ಉದ್ಯೋಗಾವಕಾಶ: ನಮ್ಮ ಸರ್ಕಾರ ಮಹಿಳೆಯರಿಗಾಗಿ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದೆ. ಅವರಿಗೆ 1.5 ಲಕ್ಷ ಸರ್ಕಾರ ನೀಡುತ್ತದೆ. 5 ಲಕ್ಷದವರೆಗೆ ಅನುದಾನ ನೀಡಲಾಗುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗುತ್ತದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಾರೆ. ಅವರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಹೆಚ್ಚಿನ ಉಳಿತಾಯವಾಗಲಿದೆ. ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಸ್ಲೀಪರ್ ಸೇಲ್​ಗಳನ್ನ ಬಿಹಾರ್ ಜೈಲಿಗೆ ಕಳುಹಿಸಿದ್ದೆ: ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.