ETV Bharat / state

ಅಧ್ಯಕ್ಷರು, ಸದಸ್ಯರ ನೇಮಕವಾಗುತ್ತಿದ್ದಂತೆ ಮಾನವ ಹಕ್ಕುಗಳ ಆಯೋಗ ಚುರುಕು; 150 ಪ್ರಕರಣಗಳ ಪ್ರಾಥಮಿಕ ತನಿಖೆಗೆ ಸಿದ್ಧತೆ

author img

By ETV Bharat Karnataka Team

Published : Dec 10, 2023, 12:13 PM IST

State Human Rights Commission
ರಾಜ್ಯ ಮಾನವ ಹಕ್ಕುಗಳ ಆಯೋಗ

Karnataka state human rights commission: ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗಿರುವ 4,500ಕ್ಕೂ ಅಧಿಕ ಪ್ರಕರಣಗಳಲ್ಲಿ 150 ಪ್ರಕರಣಗಳ ತನಿಖೆಯನ್ನು ತಕ್ಷಣವೇ ನಡೆಸಲು ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗಿರುವ 150 ಪ್ರಕರಣಗಳನ್ನು ತಕ್ಷಣವೇ ತನಿಖೆ ಮಾಡುವಂತೆ ಸೂಚಿಸಲಾಗಿದ್ದು, 18 ಪೊಲೀಸ್​​ ಇನ್ಸ್‌ಪೆಕ್ಟರ್​ಗಳಿಗೆ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ನಡೆದ 39 ಜೈಲ್ ಡೆತ್, ಲಾಕ್ ಅಪ್ ಡೆತ್ ಸೇರಿದಂತೆ ಘೋರ ಅಪರಾಧ ಪ್ರಕರಣಗಳನ್ನು ಶೀಘ್ರ ತನಿಖೆ ಮಾಡಲು ಸೂಚಿಸಲಾಗಿದೆ. ಇದರಲ್ಲಿ ಶೇ 90ರಷ್ಟು ಪ್ರಕರಣಗಳಲ್ಲಿ ಪೊಲೀಸರ ವಿರುದ್ದವೇ ಆರೋಪಗಳಿವೆ. ಆದ್ದರಿಂದ ಸಂಬಂಧಪಟ್ಟ ಇನ್ಸ್‌ಪೆಕ್ಟರ್​ಗಳಿಗೆ ನೋಟಿಸ್​ ನೀಡಿ ವಿಚಾರಣೆ ನಡೆಸಲು ಆಯೋಗದಲ್ಲಿ ಸಿದ್ಧತೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಆಯೋಗದಲ್ಲಿ ಈ ವರ್ಷ ದಾಖಲಾಗಿರುವ 4,500ಕ್ಕೂ ಹೆಚ್ಚು ಪ್ರಕರಣಗಳಲ್ಲಿ 150 ಪ್ರಕರಣಗಳ ತನಿಖೆ ನಡೆಸಿ ಜನವರಿಯೊಳಗೆ ವರದಿ ಸಲ್ಲಿಸಲು ಸಿದ್ಧತೆಯಾಗಿದೆ. ಇವುಗಳಲ್ಲಿ ಪೊಲೀಸರ ವಿರುದ್ಧ ಸುಮಾರು 135 ಪ್ರಕರಣಗಳಿವೆ. ಅಕ್ರಮ ಬಂಧನ, ಸಾಕ್ಷ್ಯಾಧಾರ ನಾಶ, ಸುಳ್ಳು ಪ್ರಕರಣ, ಬಂಧನದಲ್ಲಿದ್ದಾಗ ಹಲ್ಲೆ, ಅಕ್ರಮವಾಗಿ ಬಂಧಿಸಿ ಹಣ ಪಡೆದು ಬಿಟ್ಟಿರುವುದು ಸೇರಿದಂತೆ ಗಂಭೀರ ಸ್ವರೂರದ ಪ್ರಕರಣಗಳನ್ನು ಪೊಲೀಸರು ಎದುರಿಸುತ್ತಿದ್ದಾರೆ.

ಕಳೆದ 8 ತಿಂಗಳಿಂದಲೂ ಖಾಲಿ ಇದ್ದ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ಜಿಲ್ಲಾ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಇದನ್ನೂ ಓದಿ: ಹರಾಜಿನಲ್ಲಿ ಕಡಿಮೆ ಬೆಲೆಗೆ ವಾಹನಗಳನ್ನು ಕೊಡಿಸುವುದಾಗಿ ಹೇಳಿ ವಂಚಿಸುತ್ತಿದ್ದ ನಕಲಿ ಪೊಲೀಸ್ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.