ETV Bharat / state

ರಾಜ್ಯಾದ್ಯಂತ ಬೀದಿಬದಿ ವ್ಯಾಪಾರಿಗಳ ಸತ್ಯಾಗ್ರಹ: ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಆಗ್ರಹ

author img

By

Published : Jul 18, 2020, 7:20 PM IST

ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ವತಿಯಿಂದ ಯಶವಂತಪುರ ಮಾರುಕಟ್ಟೆ, ಮೂಡಲಪಾಳ್ಯ, ಜಯನಗರ 9ನೇ ಬ್ಲಾಕ್, ಗಾಂಧಿ ಬಜಾರ್, ಕೆಂಗೇರಿ ಮುಂತಾದ ಪ್ರದೇಶಗಳಲ್ಲಿ ವ್ಯಾಪಾರಿಗಳು ಸತ್ಯಾಗ್ರಹ ಕೈಗೊಂಡಿದ್ದು, ರಾಜ್ಯದ ಹಲವೆಡೆ ಬೀದಿ ಬದಿಯ ವ್ಯಾಪಾರಿಗಳು ಸಾಥ್​ ನೀಡಿದ್ದಾರೆ.

State-wide street vendors protest demanding to release relief fund
ರಾಜ್ಯದಾದ್ಯಂತ ಬೀದಿ ವ್ಯಾಪಾರಿಗಳ ಸತ್ಯಾಗ್ರಹ: ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯಡಿ ಕೊಡುತ್ತಿರುವ ಸಾಲದ ಬದಲು ಪರಿಹಾರ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಬೀದಿ ಬದಿ ವ್ಯಾಪಾರಿ ಸಂಘದ ಒಕ್ಕೂಟ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿ ಸಂಘಟನೆ ಕರೆಗೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೀದಿ ವ್ಯಾಪಾರಿಗಳು ಸತ್ಯಾಗ್ರಹ ಕೈಗೊಂಡರು.

ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ವತಿಯಿಂದ ಯಶವಂತಪುರ ಮಾರುಕಟ್ಟೆ, ಮೂಡಲಪಾಳ್ಯ, ಜಯನಗರ 9ನೇ ಬ್ಲಾಕ್, ಗಾಂಧಿ ಬಜಾರ್, ಕೆಂಗೇರಿ ಮುಂತಾದ ಪ್ರದೇಶಗಳಲ್ಲಿ ವ್ಯಾಪಾರಿಗಳು ಸತ್ಯಾಗ್ರಹ ಕೈಗೊಂಡರು.

ರಾಜ್ಯದಾದ್ಯಂತ ಬೀದಿ ವ್ಯಾಪಾರಿಗಳ ಸತ್ಯಾಗ್ರಹ: ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಆಗ್ರಹ

ಹಲವು ವ್ಯಾಪಾರಿಗಳು ತಮ್ಮ ಮನೆಯಲ್ಲೇ ಕೈಗೊಂಡರು ಬೀದಿ ವ್ಯಾಪಾರ ಮಾಡಲು ಅನುಮತಿ ನೀಡಿ, ಮಾನ್ಯ ಮುಖ್ಯಮಂತ್ರಿಗಳೇ ಬೀದಿ ವ್ಯಾಪಾರಿಗಳ ಕಷ್ಟ ನಿಮ್ಮ ಕಣ್ಣಿಗೆ ಏಕೆ ಕಾಣುತ್ತಿಲ್ಲ, ನಮಗೂ ಪರಿಹಾರ ನೀಡಿ ಎಂದು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಸ್​​​​​​.ಬಾಬು ಮಾತನಾಡಿ, ನಾವು ನಮ್ಮ ಕಷ್ಟಗಳ ಬಗ್ಗೆ ಮಾನ್ಯ ಮಹಾಪೌರರು ಹಾಗೂ ಆಯುಕ್ತರನ್ನು ಭೇಟಿ ಆಗಿ ಪರಿಹಾರ ನೀಡಿ ಎಂದು ಮನವಿ ಸಲ್ಲಿಸಿದೆವು. ಆದರೇ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ . ಮುಖ್ಯಮಂತ್ರಿಗಳಿಗೆ ನಮ್ಮ ಕಷ್ಟ ಹೇಳಿಕೊಳ್ಳೋಣ ಎಂದು ಸಮಯ ಕೋರಿದರೆ ನಮಗೆ ಸಮಯಾವಕಾಶ ನೀಡಲಿಲ್ಲ. ಹೀಗಾಗಿ ಇ-ಮೇಲ್ ಮೂಲಕ ಮನವಿ ಸಲ್ಲಿಸಿದೆವು ಎಂದರು. ಅಲ್ಲದೆ ಪ್ರತಿಭಟನೆ ಮಾಡೋಣ ಎಂದರೆ 144 ಹಾಕಿದ್ದಾರೆ. ಬೇರೆ ದಾರಿ ಇಲ್ಲದೆ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದೆವು ಎಂದರು.

ಸತ್ಯಾಗ್ರಹದ ಬಹುಮುಖ್ಯ ಬೇಡಿಕೆಗಳೆಂದರೆ:

1. ಸಾಂಕ್ರಾಮಿಕ ರೋಗ ತಡೆಗಟ್ಟಲು ಜಾರಿಯಿರುವ ನಿಯಮಗಳನ್ನು ಪಾಲಿಸುತ್ತಾ, ನಮ್ಮ ಜೀವನೋಪಾಯವನ್ನು ನಡೆಸಲು ಅನುಮತಿಯನ್ನು ನೀಡಬೇಕು ಮತ್ತು ಸೂಕ್ತ ಸೌಲಭ್ಯ ಕಲ್ಪಿಸಿಕೊಡಬೇಕು

2. ಬೀದಿ ವ್ಯಾಪಾರವನ್ನು ಪುನಸ್ಚೇತನಗೊಳಿಸಲು ಮೂರೂ ತಿಂಗಳಿಗೆ ಸೇರಿದಂತೆ ರೂ. 15,000/-ಧನ ಸಹಾಯವನ್ನು ರಾಜ್ಯ ಸರ್ಕಾರವು ಪ್ರತಿ ಬೀದಿ ವ್ಯಾಪಾರಿಗೆ ಷರತ್ತುಗಳಿಲ್ಲದೆ ತಕ್ಷಣ ನೀಡಬೇಕು.

3. ಸ್ಥಳೀಯ ಸರ್ಕಾರಗಳು ಬೀದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬೀದಿ ವ್ಯಾಪಾರಿಗಳ ಬೆಂಬಲಕ್ಕಾಗಿ ತಕ್ಷಣದಲ್ಲೇ ಉಪಯೋಗಿಸಬೇಕು.

4. ಕೋವಿಡ್ -19 ಸಾಂಕ್ರಾಮಿಕ ರೋಗವು ಅತಿವೇಗದಲ್ಲಿ ಹರಡುತ್ತಿರುವ ಕಾರಣ ಬೀದಿ ವ್ಯಾಪಾರಿಗಳಿಗೆ ಸೋಂಕು ತಟ್ಟಿದ್ದಲ್ಲಿ, ಬೀದಿ ವ್ಯಾಪಾರಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುವಂತೆ ವ್ಯವಸ್ಥೆಯನ್ನು ರೂಪಿಸಬೇಕು.

5. ಬೀದಿ ವ್ಯಾಪಾರಿಗಳಿಗೆ ದಿನಸಿ ಕಿಟ್ ವಿತರಣೆ, ಮನೆ ಬಾಡಿಗೆ, ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರವು ಬೆಂಬಲ ನೀಡಲು ಮುಂದಾಗಬೇಕು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.