ETV Bharat / state

6 ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಶಿಫಾರಸು

author img

By

Published : Aug 19, 2021, 6:10 PM IST

Updated : Aug 19, 2021, 6:41 PM IST

ಕಳೆದ 2019ರ ನವೆಂಬರ್ 11 ಹಾಗೂ 26 ರಂದು ಹೈಕೋರ್ಟ್​ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ 6 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸುವಂತೆ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ.

supreme-court-collegium-approves-6-names-as-permanent-judges-of-karnataka
ನ್ಯಾಯಮೂರ್ತಿಗಳು

ಬೆಂಗಳೂರು: ಹೈಕೋರ್ಟ್​ನಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಆಗಸ್ಟ್ 17ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಲು ಲಿಖಿತವಾಗಿ ಶಿಫಾರಸು ಮಾಡಿದೆ. 6 ಮಂದಿ ನ್ಯಾಯಮೂರ್ತಿಗಳು ಕಳೆದ 2019ರ ನವೆಂಬರ್ 11 ಹಾಗೂ 26 ರಂದು ಹೈಕೋರ್ಟ್​ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.

ಖಾಯಂಗೊಳ್ಳುತ್ತಿರುವ 6 ನ್ಯಾಯಮೂರ್ತಿಗಳ ಹೆಸರುಗಳು

  1. ನ್ಯಾಯಮೂರ್ತಿ ಎನ್. ಎಸ್. ಸಂಜಯ್ ಗೌಡ
  2. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ
  3. ನ್ಯಾಯಮೂರ್ತಿ ಆರ್. ನಟರಾಜ್
  4. ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್
  5. ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು
  6. ನ್ಯಾಯಮೂರ್ತಿ ಎಂ. ನಾಗಪ್ರಸನ್ನ
Last Updated : Aug 19, 2021, 6:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.