ETV Bharat / state

ಶಂಕಿತ ಉಗ್ರರ ಬಂಧನ ಪ್ರಕರಣ: ಮತ್ತೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಎನ್ಐಎ ವಿಶೇಷ ನ್ಯಾಯಾಲಯ

author img

By

Published : Jul 26, 2023, 5:48 PM IST

Suspected terrorist arrest case  police custody for 10 days by NIA special court  Suspected terrorist arrest in Bengaluru  ಶಂಕಿತ ಉಗ್ರರ ಬಂಧನ ಪ್ರಕರಣ  ಪೊಲೀಸ್ ಕಸ್ಟಡಿಗೆ ನೀಡಿದ ಎನ್ಐಎ ವಿಶೇಷ ನ್ಯಾಯಾಲಯ  ಮತ್ತೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿ  ರಾಜಧಾನಿಯಲ್ಲಿ ಉಗ್ರ ಕೃತ್ಯ ಎಸಗಲು ಸಂಚು  ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ  ಪೊಲೀಸ್ ಕಸ್ಟಡಿ ಇಂದು ಅಂತ್ಯ ಹಿನ್ನೆಲೆ  ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಹಾಜರು
ಶಂಕಿತ ಉಗ್ರರ ಬಂಧನ ಪ್ರಕರಣ

ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ವಿಶೇಷ ನ್ಯಾಯಾಲಯ ಆರೋಪಿಗಳನ್ನು ಮತ್ತೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಬೆಂಗಳೂರು: ರಾಜಧಾನಿಯಲ್ಲಿ ಉಗ್ರ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪದಡಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಇಂದು ಅಂತ್ಯ ಹಿನ್ನೆಲೆ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಹಾಜರುಪಡಿಸಲಾಗಿತ್ತು. ಬಳಿಕ ಎನ್​ಐಎ ವಿಶೇಷ ನ್ಯಾಯಾಲಯ ಆರೋಪಿಗಳನ್ನು ಮತ್ತೆ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿತು.

ನಗರದಲ್ಲಿ ವಿಧ್ಬಂಸಕ ಕೃತ್ಯವೆಸಲು ಸಂಚು ರೂಪಿಸಿದ್ದು, ಈ ಸಂಬಂಧ ಶಂಕಿತರಿಂದ ಗ್ರೆನೇಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಉಗ್ರ ಕೃತ್ಯವೆಸಗಲು ತಯಾರಿ ನಡೆಸಿದ್ದರು ಎಂಬ ಆಂಶ ಬೆಳಕಿಗೆ ಬಂದಿದೆ. ಶಂಕಿತರನ್ನ ತೀವ್ರ ವಿಚಾರಣೆಗೊಳಪಡಿಸಬೇಕಿದೆ. ಅಲ್ಲದೇ ಶಂಕಿತರ ಹಿಂದೆ ಹಲವು ವ್ಯಕ್ತಿಗಳ ಕೈವಾಡವಿದೆ.. ಹೀಗಾಗಿ ಆರೋಪಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಬೇಕಿದೆ. ಹೀಗಾಗಿ 15 ದಿನಗಳ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ ಪರ ವಕೀಲರು ಮನವಿ ಮಾಡಿದರು.

ವಾದ- ಪ್ರತಿವಾದ ಆಲಿಸಿ ಅಂತಿಮವಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಲಯ ಸಮ್ಮತಿಸಿತು. ಸದ್ಯ ಮಡಿವಾಳದ ಎಫ್​ಎಸ್​ಎಲ್​ನ ವಿಚಾರಣಾ‌ ಕೊಠಡಿಯಲ್ಲಿ ಸಿಸಿಬಿ ಶಂಕಿತರನ್ನು ವಿಚಾರಣೆಗೊಳಪಡಿಸಿದೆ. ಪ್ರಕರಣದ A1 ಆರೋಪಿ ಉಗ್ರ ಟಿ.ನಜೀರ್​ನನ್ನು ಕಸ್ಟಡಿಗೆ ಪಡೆಯಲು ಸಿಸಿಬಿ ಸಿದ್ದತೆ ನಡೆಸಿದ್ದು, ಜೈಲಿನಲ್ಲಿರುವ ಉಗ್ರ ನಜಿರ್​ನ ವಿಚಾರಣೆ ನಡೆಸಿದರೆ ಮತ್ತಷ್ಟು ಅಂಶಗಳು ಹೊರಬೀಳಲಿವೆ. ಪ್ರಕರಣ ಎರಡನೇ ಆರೋಪಿ ಜುನೈದ್​ಗೆ ಉಗ್ರ ಚಟುವಟಿಕೆ ನಡೆಸುವಂತೆ ಬ್ರೈನ್ ವಾಶ್ ಮಾಡಿದ್ದ ನಜಿರ್ 2008ರ ಸರಣಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ.

ಐವರು ಶಂಕಿತರು ಬಂಧನ: ಜುಲೈ 19ರಂದು ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸಿದ್ದರು. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್​ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು.

ಪ್ರಕರಣದಲ್ಲಿ ಶಾಮೀಲಾಗಿರುವ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಶಂಕಿತ ಉಗ್ರ ಟಿ. ನಜೀರ್ ಸದ್ಯ ಆತ ನ್ಯಾಯಾಂಗ ಬಂಧನಲ್ಲಿದ್ದಾನೆ. ಎರಡನೇ ಆರೋಪಿ ಜುನೈದ್ ಸದ್ಯ ತಲೆಮರೆಸಿಕೊಂಡಿದ್ದಾನೆ‌. ಹೆಚ್ಚಿನ ವಿಚಾರಣೆಗಾಗಿ ಬಂಧಿತ ಐವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್​ ಮಾಹಿತಿ ನೀಡಿದ್ದರು.

ಆರೋಪಿಗಳು ಸಿಕ್ಕಿದ್ದು ಹೇಗೆ?: ಶಂಕಿತರು ಪೊಲೀಸರಿಗೆ ಸಿಕ್ಕಿಬಿದ್ದ ವಿಚಾರವೇ ರೋಚಕವಾಗಿದೆ. ಪ್ರಕರಣದ ಎ2 ಆರೋಪಿ ಜುನೈದ್ ದುಬೈನಲ್ಲಿದ್ದು, ಉಗ್ರ ಕೃತ್ಯಗಳಿಗೆ ಫಂಡಿಂಗ್ ಮಾಡಿಸುತ್ತಿದ್ದ. ಅಲ್ಲಿನ ಶ್ರೀಮಂತರ ಮೂಲಕ ಫಂಡಿಂಗ್ ಮಾಡಿಸುತ್ತಿದ್ದ. ದುಬೈ ಹವಾಲಾ ಹಣ ವರ್ಗಾವಣೆ ಕುರಿತಂತೆ ಇಂಟೆಲಿಜೆನ್ಸ್ ಬ್ಯೂರೋ (ಐಬಿ)ಗೆ ನಜೀರ್​ ಗ್ರೂಪ್​ಗೆ ಹಣ ಬಂದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಅವನ ಆ್ಯಕ್ಟಿವಿಟಿ ಗಮನಿಸಿದಾಗ ಟೀಂ ಬಿಲ್ಡ್ ಆಗಿರುವ ಕುರಿತು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ಸಿಕ್ಕಿದೆ. ಆಯುಕ್ತ ದಯಾನಂದ್ ಅವರ ಸೂಚನೆ ಮೇರೆಗೆ ಆರೋಪಿಗಳ ಚಲನವಲನ ಗಮನಿಸಿ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-2019ರಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದರು.

ಓದಿ: Suspected terrorists case: ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್ ವಶಕ್ಕೆ: ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.