ETV Bharat / state

ನೆರೆ ಪ್ರವಾಹ: ಸಂತ್ರಸ್ತರ ನೆರವಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ಹೆಚ್.ಕೆ. ಪಾಟೀಲ್ ತಂಡ

author img

By

Published : Aug 9, 2019, 5:54 PM IST

ಪ್ರವಾಹದ ಮಧ್ಯದಲ್ಲಿ ಸಿಲುಕಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ತಂಡ..!

ಗದಗ ಜಿಲ್ಲೆಯ ಕೊಣ್ಣೂರು ಮತ್ತು ಹೊಳೆ ಆಲೂರು ಮಧ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಬ್ಲಾಂಕೆಟ್ ವಿತರಿಸಲು ಹೋಗಿದ್ದ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಹೆಚ್.ಕೆ. ಪಾಟೀಲ್ ಮತ್ತು ಮಾಜಿ ಸಂಸದ ಐ.ಜಿ. ಸನದಿ ಮತ್ತು ಇತರ ಪದಾಧಿಕಾರಿಗಳಿದ್ದ ತಂಡ ಪ್ರವಾಹದ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡಿದೆ.

ಗದಗ: ಜಿಲ್ಲೆಯ ಕೊಣ್ಣೂರು ಮತ್ತು ಹೊಳೆ ಆಲೂರು ಮಧ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಬ್ಲಾಂಕೆಟ್ ವಿತರಿಸಲು ಹೋಗಿದ್ದ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಹೆಚ್.ಕೆ. ಪಾಟೀಲ್ ಮತ್ತು ಮಾಜಿ ಸಂಸದ ಐ.ಜಿ. ಸನದಿ ಮತ್ತು ಇತರ ಪದಾಧಿಕಾರಿಗಳಿದ್ದ ತಂಡ ಪ್ರವಾಹದ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

ಸಂತ್ರಸ್ತರಿಗೆ ಬ್ಲಾಂಕೆಟ್​ ವಿತರಿಸಲು ಹೋಗಿ ಪ್ರವಾಹಕ್ಕೆ ಸಿಲುಕಿದ್ದ ಹೆಚ್.ಕೆ. ಪಾಟೀಲ್ ತಂಡ

ಮಲಪ್ರಭಾ ನದಿ ಪ್ರವಾಹದಿಂದ ಪೀಡಿತವಾಗಿರುವ ವಾಸನ್, ಬೂದಿಹಾಳ, ಕೊಣ್ಣೂರು, ಹೊಳೆ-ಆಲೂರು ಗ್ರಾಮಗಳ ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗೆ ಹೋದ ಸಂದರ್ಭದಲ್ಲಿ ಹೆಚ್.ಕೆ. ಪಾಟೀಲ್ ಹಾಗೂ ಅಧಿಕಾರಿಗಳಿದ್ದ ವಾಹನ​ 4 ಅಡಿ ಮಟ್ಟದ ನೀರಿನಲ್ಲಿ ಸಿಲುಕಿತ್ತು. ಅವರು​ ಪ್ರವಾಹ ಪ್ರದೇಶದಲ್ಲಿ ಸಿಲುಕಿ ಹಾಕಿಕೊಂಡಿದ್ದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಮೂಲಕ ಕರೆ ಮಾಡಿ ಪರಿಸ್ಥಿತಿಯನ್ನು ವಿಚಾರಿಸಿದ್ರು. ಈ ವೇಳೆ ಹೆಚ್​.ಕೆ. ಪಾಟೀಲ್​ ಕೊಣ್ಣೂರು ಮತ್ತು ಹೊಳೆ ಆಲೂರು ಗ್ರಾಮಗಳು ಪೂರ್ಣವಾಗಿ ಮುಳುಗಡೆಯಾಗಿವೆ. ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ನೆರೆ ಪರಿಸ್ಥಿತಿ ಗಂಭೀರವಾಗಿದ್ದರೂ ಪರಿಹಾರ ಕಾರ್ಯ ಚುರುಕುಗೊಂಡಿಲ್ಲ ಎಂದು ಅಲ್ಲಿನ ಪರಿಸ್ಥಿತಿ ಬಗ್ಗೆ ಗಮನಕ್ಕೆ ತಂದರು.

ನಂತರ ಶಾಸಕ ಹೆಚ್.ಕೆ. ಪಾಟೀಲ್, ಮಾಜಿ ಸಂಸದ ಐ.ಜಿ. ಸನದಿ ಮತ್ತು ಇತರ ಪದಾಧಿಕಾರಿಗಳಿದ್ದ ತಂಡ ಗೂಡ್ಸ್​ ರೈಲಿನಲ್ಲಿ ಬಾಗಲಕೋಟೆಗೆ ತೆರಳಿದ್ರು.

Intro:ಬೆಂಗಳೂರು : ಗದಗ ಜಿಲ್ಲೆಯ ಕೊಣ್ಣೂರು ಮತ್ತು ಹೊಳೆ ಆಲೂರು ಮಧ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಬ್ಲಾಂಕೆಟ್ ವಿತರಿಸಲು ಹೋಗಿದ್ದ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ್ ಮತ್ತು ಮಾಜಿ ಸಂಸದ ಐ.ಜಿ. ಸನದಿ ಮತ್ತು ಇತರ ಪದಾಧಿಕಾರಿಗಳಿದ್ದ ತಂಡ ಪ್ರವಾಹದ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ನಡೆದಿದೆ.Body:ಮಲಪ್ರಭಾ ನದಿಯ ಪ್ರವಾಹದಿಂದ ಪೀಡಿತವಾಗಿರುವ ವಾಸನ್, ಬೂದಿಹಾಳ, ಕೊಣ್ಣೂರು, ಹೊಳೆ-ಆಲೂರು ಗ್ರಾಮಗಳ ಪ್ರವಾಹ ಪೀಡಿತ ಸಂತ್ರಸ್ಥರ ನೆರವಿಗೆ ಧಾವಿಸುವುದರ ಜೊತೆಗೆ ಕೆಪಿಸಿಸಿ ಸಮಿತಿ ಸದಸ್ಯರು ಅಧ್ಯಯನ ಪ್ರವಾಸ ಕೈಗೊಂಡ ಸಂದರ್ಭದಲ್ಲಿ 4 ಅಡಿ ಮಟ್ಟದ ನೀರಿನಲ್ಲಿ ವಾಹನ ಸಿಲುಕಿದ್ದರಿಂದ ಪ್ರಯಾಣಿಸದ ಸ್ಥಿತಿ ಉಂಟಾಗಿ ಸುಮಾರು 2 ಗಂಟೆಗಳ ನಂತರ ಸಾವರಿಸಿಕೊಂಡು ಪ್ರಯಾಣ ಮುಂದುವರೆಸಿ ಅವರು, ಗೂಡ್ಸ್ ರೈಲಿನಲ್ಲಿ ಬಾಗಲಕೋಟೆಗೆ ತಲುಪಿದರು.
ಪ್ರವಾಹ ಪ್ರದೇಶದಲ್ಲಿ ಸಿಲುಕಿ ಹಾಕಿಕೊಂಡಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಎಚ್.ಕೆ. ಪಾಟೀಲ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಪರಿಸ್ಥಿತಿಯನ್ನು ವಿಚಾರಿಸಿದರು. ಮುಖ್ಯಮಂತ್ರಿಗಳ ಕರೆಯ ನಂತರ ಅರ್ಧ ಗಂಟೆಯಲ್ಲಿ ಪೊಲೀಸ್ ವಾಹನ ಮತ್ತಿತರ ವಾಹನಗಳು ದಾವಿಸಿದವು. ಈ ಸಂದರ್ಭದಲ್ಲಿ ನೆರೆ ಸಂತ್ರಸ್ತರ ನೆರವಿಗೆ ಬರುವಂತೆ, ನನ್ನ ಕಾಳಜಿಗಿಂತ ಹೆಚ್ಚು ನೆರೆ ಸಂತ್ರಸ್ತರಿಗೆ ಕಾಳಜಿ ಮಾಡಬೇಕಾಗಿರುವುದು ಅವಶ್ಯಕತೆಯಿದೆ ಎಂದು ಎಚ್. ಕೆ. ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ಬಾಗಲಕೋಟೆಗೆ ಬೋಟುಗಳ ಮೂಲಕ ತೆರಳಬೇಕೆಂಬ ಪ್ರಯತ್ನದಲ್ಲಿದ್ದಾಗ ಸ್ಥಳೀಯರು ಮತ್ತು ಜೊತೆಗಿದ್ದವರೆಲ್ಲ ಗೂಡ್ಸ್ ರೈಲಿನ ಮೂಲಕ ಹೋಗುವಂತೆ ಸಲಹೆ ಮಾಡಿದರು. ಕೊಣ್ಣೂರು ಮತ್ತು ಹೊಳೆ ಆಲೂರು ಗ್ರಾಮಗಳು ಪೂರ್ಣವಾಗಿ ಮುಳುಗಡೆಯಾಗಿವೆ. ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ನೆರೆ ಪರಿಸ್ಥಿತಿ ಗಂಭೀರವಾಗಿದ್ದರೂ ಪರಿಹಾರ ಕಾರ್ಯ ಚುರುಕುಗೊಂಡಿಲ್ಲ ಎಂದು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಜುಲೈ 31ರ ಒಳಗೇ ಮುಗಿದು ಹೋಗಿರುವ ಫಲಸು ಭೀಮಾ ಯೋಜನೆಯ ವಿಮಾ ಕಂತು ಪಾವತಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಇದೇ ಸಂದರ್ಭದಲ್ಲಿ ಕೋರಲಾಯಿತು.
ಗಂಜಿ ಕೇಂದ್ರಗಳು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ಕೊಟ್ಟ ಕೆ.ಪಿ.ಸಿ.ಸಿ. ಸಮಿತಿ ಅವಶ್ಯಕ ಸಾಮಗ್ರಿಗಳನ್ನು ವಿತರಿಸುವ ಕಾರ್ಯ ಕೈಗೊಂಡಿತು. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.