ETV Bharat / state

2023ರ ವೇಳೆಗೆ ಡಿಜಿಟಲೀಕರಣಕ್ಕೆ ಸಿದ್ಧತೆ ಮಾಡಿಕೊಂಡಿರುವ ಕೃಷಿ ಇಲಾಖೆ

author img

By

Published : Dec 11, 2022, 3:37 PM IST

2023ರ ಏಪ್ರಿಲ್ 1 ರಿಂದ ರೈತರು ಸಂಪೂರ್ಣ ಕಾಗದ ರಹಿತ ಹಾಗೂ ಪಾರದರ್ಶಕವಾಗಿ ಖರೀದಿ ಮತ್ತು ವಿತಾರಣಾ ಪ್ರಕ್ರಿಯೆ ಮಾಡುವುದು ಕಡ್ಡಾಯವಾಗಲಿದೆ. ಜನವರಿ 1 ರಿಂದ ಪ್ರಾಯೋಗಿಕವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡಿಜಿಟಲೀಕರಣ ಮಾಡಲು ಪ್ರಕ್ರಿಯೆ ಆರಂಭವಾಗಲಿದೆ. ಇದು ಯಶಸ್ವಿಯಾದರೆ ಏಪ್ರಿಲ್ 1, 2023 ರಿಂದ ಕಡ್ಡಾಯ ಮಾಡಲು ಕೃಷಿ ಇಲಾಖೆ ಮುಂದಾಗಿದೆ.

ಕೃಷಿ ಇಲಾಖೆ
ಕೃಷಿ ಇಲಾಖೆ

ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ರೈತರು ತಮ್ಮ ಕೆಲಸ ಮತ್ತು ಆರ್ಥಿಕ ವ್ಯವಹಾರವನ್ನು ಡಿಜಿಟಲೀಕರಣ ಮಾಡಿಕೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದ್ದಾರೆ. ಆನ್‌ ಲೈನ್‌ನಲ್ಲಿಯೇ ರೈತರು ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ.

ರೈತರನ್ನು ಡಿಜಿಟಲೀಕರಣ ಪ್ರಕ್ರಿಯೆಗೆ ಒಳಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹೆಜ್ಜೆ ಇಟ್ಟಿದೆ. 2023ರ ಏಪ್ರಿಲ್ 1 ರಿಂದ ರೈತರು ಸಂಪೂರ್ಣ ಕಾಗದ ರಹಿತ ಹಾಗೂ ಪಾರದರ್ಶಕವಾಗಿ ಖರೀದಿ ಮತ್ತು ವಿತರಣಾ ಪ್ರಕ್ರಿಯೆ ಮಾಡುವುದು ಕಡ್ಡಾಯವಾಗಲಿದೆ. ರೈತರ ಡಿಜಿಟಲೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನವೆಂಬರ್ 24 ರಂದು ಆದೇಶ ಹೊರಡಿಸಿತ್ತು.

ಡಿಜಿಟಲೀಕರಣ ಮಾಡಲು ಪ್ರಕ್ರಿಯೆ ಆರಂಭ: ಪ್ರಾರಂಭದಲ್ಲಿ ಮೈಸೂರು, ಶಿವಮೊಗ್ಗ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಆನ್​ಲೈನ್ ವಿತರಣೆ ಹಾಗೂ ಖರೀದಿ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಈಗ ಜನವರಿ 1 ರಿಂದ ಪ್ರಾಯೋಗಿಕವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡಿಜಿಟಲೀಕರಣ ಮಾಡಲು ಪ್ರಕ್ರಿಯೆ ಆರಂಭವಾಗಲಿದೆ. ಇದು ಯಶಸ್ವಿಯಾದರೆ ಏಪ್ರಿಲ್ 1, 2023 ರಿಂದ ಕಡ್ಡಾಯಗೊಳಿಸಲು ಕೃಷಿ ಇಲಾಖೆ ಮುಂದಾಗಿದೆ.

ಜಂಟಿ ನಿರ್ದೇಶಕರು, ಉಪನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಸೇರಿದಂತೆ ಕೃಷಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ಕಚೇರಿಗಳು, ಜಿಲ್ಲಾ ತರಬೇತಿ ಕೇಂದ್ರಗಳು, ಪ್ರಯೋಗಾಲಯಗಳು ಮತ್ತು ರೈತ ಸಂಪರ್ಕ ಕೇಂದ್ರಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

ಆನ್​ಲೈನ್​ ಮೂಲಕ ಯೋಜನೆಗಳ ಪ್ರಯೋಜನ: ಡಿಜಿಟಲೀಕರಣದ ಸಂಪೂರ್ಣ ವ್ಯವಸ್ಥೆಯನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 30ಕ್ಕೂ ಹೆಚ್ಚು ಯೋಜನೆಗಳಿಂದ ಪ್ರಯೋಜನಗಳನ್ನು ರೈತರು ಆನ್​ಲೈನ್ ಮೂಲಕವೇ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತರು ನಿರ್ದಿಷ್ಟ ರೈತ ಸಂಪರ್ಕ ಕೇಂದ್ರದಿಂದ ಬೀಜಗಳು ಅಥವಾ ರಸಗೊಬ್ಬರಗಳನ್ನು ಖರೀದಿಸಿದರೆ, ಈ ಉತ್ಪನ್ನಗಳಿಗೆ ಕ್ಯೂಆರ್ ಕೋಡ್ ಇರುತ್ತದೆ. ಸ್ಕ್ಯಾನಿಂಗ್ ಮೂಲಕ, ಯಾವ ರೈತರು ಯಾವ ಮಾರಾಟಗಾರರಿಂದ ಖರೀದಿಸಿದ್ದಾರೆ ಮತ್ತು ಖರೀದಿದಾರರ ವಿವರಗಳನ್ನು ಇದು ಸ್ಪಷ್ಟಪಡಿಸುತ್ತದೆ. ಬೀಜಗಳು ಕಡಿಮೆ ಗುಣಮಟ್ಟದ್ದಾಗಿದ್ದರೆ ಇದು ಮೂಲತಃ ಮಾರಾಟಗಾರರನ್ನು ಜವಾಬ್ದಾರರನ್ನಾಗಿ ಮಾಡುತ್ತದೆ.

ಆಡಳಿತದಲ್ಲಿ ಪಾರದರ್ಶಕತೆ: ಇದು ಪ್ರತಿಯೊಂದು ರೈತ ಸಂಪರ್ಕ ಕೇಂದ್ರಗಳಲ್ಲಿನ ಸ್ಟಾಕ್‍ನ ಪ್ರಮಾಣದ ನೈಜ-ಸಮಯದ ಡೇಟಾವನ್ನು ಸಹ ನೀಡುತ್ತದೆ ಮತ್ತು ಲೈವ್ ಡೇಟಾವು ಉತ್ತಮವಾಗಿ ಕಾರ್ಯನಿರ್ವಹಿಸಲು ನಮಗೆ ಸಹಾಯ ಮಾಡುತ್ತದೆ. ಇದು ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿಯಾಗಿದೆ.ರಾಜ್ಯದ ಕೃಷಿ ಇಲಾಖೆಯು 53 ಲಕ್ಷಕ್ಕೂ ಹೆಚ್ಚು ರೈತರ ಗುರುತಿನ ಚೀಟಿ (ಎಫ್‍ಐಡಿ)ಗಳನ್ನು ಹೊಂದಿದ್ದು, ಇವುಗಳನ್ನು ಆಧಾರ್ ಮತ್ತು ಭೂ ದಾಖಲೆಗಳಿಗೆ (ಪಹಣಿ) ಲಿಂಕ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಕಲಿ ಗೊಬ್ಬರ ಅಂಗಡಿಗಳ ಮೇಲೆ ಕಠಿಣ ಕ್ರಮ.. ಕೃಷಿ ಇಲಾಖೆ ಅಧಿಕಾರಿಗಳಿಂದ ದಾಳಿ

ಇದು ಕೃಷಿ ಇಲಾಖೆಯಲ್ಲಿ ದಕ್ಷತೆಯನ್ನು ಸುಧಾರಿಸುವುದರ ಜೊತೆಗೆ ರೈತರಿಗೆ ಮತ್ತು ಮಾರಾಟಗಾರರಿಗೆ ಮಾಹಿತಿಗಳ ನಿರ್ವಹಿಸಲು ಸುಲಭ ಮತ್ತು ಅನುಕೂಲಕರವಾಗಿಸುವ ಗುರಿಯನ್ನು ಹೊಂದಿದೆ, ವಿವಾದಗಳ ಸಂದರ್ಭದಲ್ಲಿ ಅದನ್ನು ಸುಲಭವಾಗಿ ಉಲ್ಲೇಖಿಸಬಹುದು. ಇ-ಫೈಲ್‍ಗಳನ್ನು ಅಳವಡಿಸಿಕೊಳ್ಳುವುದರಿಂದ ಅಧಿಕಾರಿಗಳ ದಕ್ಷತೆ ಸುಧಾರಿಸುತ್ತದೆ. ಈಗಾಗಲೇ ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳಿಂದ ಬೆಂಗಳೂರಿನ ಕೇಂದ್ರ ಕಚೇರಿವರೆಗೆ ಕರ್ನಾಟಕದಾದ್ಯಂತ ಇ-ಕಚೇರಿಗಳನ್ನು ಜಾರಿಗೊಳಿಸಲು ಸೂಚನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.