ETV Bharat / state

ಬೆಂಗಳೂರಿನಲ್ಲಿ ಮತ್ತೊಂದು ದುರ್ಘಟನೆ: ಮಧ್ಯೆ ಭಾಗದಲ್ಲಿ ಏಕಾಏಕಿ ಬಾಯ್ತೆರೆದ ರಸ್ತೆ, ಗುಂಡಿಯಿಂದ ಬೈಕ್​ ಸವಾರಿಗೆ ಗಾಯ

author img

By

Published : Jan 12, 2023, 2:46 PM IST

Updated : Jan 12, 2023, 9:55 PM IST

ಬೆಂಗಳೂರಿನಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಕುಸಿತವಾಗಿದ್ದು, ರಸ್ತೆಯ ಗುಂಡಿಗೆ ಬೈಕ್​ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಮುನ್ನೆಲೆಗೆ ಬಂದಿದೆ.

road suddenly collapsed  The road suddenly collapsed in the middle  Another incident in Bengaluru  ಬೆಂಗಳೂರಿನಲ್ಲಿ ಮತ್ತೊಂದು ದುರ್ಘಟನೆ  ಮಧ್ಯೆ ಭಾಗದಲ್ಲಿ ಏಕಾಏಕಿ ಬಾಯ್ತೆರೆದ ರಸ್ತೆ  ಗುಂಡಿಯಿಂದ ಬೈಕ್​ ಸವಾರಿಗೆ ಗಾಯ  ದುರ್ಘಟನೆ ಸಂಭವಿಸಿರುವುದು ಬೆಳಕಿಗೆ  ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಕುಸಿತ  ರಸ್ತೆಯ ಗುಂಡಿಗೆ ಬೈಕ್​ ಸವಾರ ಬಿದ್ದು ಗಾಯ
ಗುಂಡಿಯಿಂದ ಬೈಕ್​ ಸವಾರಿಗೆ ಗಾಯ

ಬೆಂಗಳೂರಿನಲ್ಲಿ ಮತ್ತೊಂದು ದುರ್ಘಟನೆ

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್​ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ಏಕಾಏಕಿ ರಸ್ತೆ ಮಧ್ಯೆದಲ್ಲೇ ಗುಂಡಿ ಬಿದ್ದಿದ್ದು, ಬೈಕ್​ ಸವಾರನೊಬ್ಬ ಆ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ಜಾನ್ಸನ್ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ನಿತ್ಯದಂತೆ ವಾಹನ ಸವಾರರು ಪ್ರಯಾಣಿಸುತ್ತಿದ್ದರು. ಈ ವೇಳೆ, ಏಕಾಏಕಿ ರಸ್ತೆ ಮಧ್ಯೆದಲ್ಲಿ ಗುಂಡಿ ಬಿದ್ದಿದೆ. ಆದರೆ ಬೈಕ್​ ಸವಾರ ಈ ಗುಂಡಿಗೆ ಬಿದ್ದು ಗಾಯಗೊಂಡಿದ್ದಾನೆ ಎನ್ನಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಜಾನ್ಸನ್ ಮಾರ್ಕೆಟ್ ರಸ್ತೆಯಲ್ಲಿ ಏಕಾಏಕಿ ನಡುರಸ್ತೆ ಮಧ್ಯೆ ವೃತಾಕಾರದ ಗುಂಡಿ ಬಾಯ್ತೆರೆದಿದ್ದು ಅದೃಷ್ಟವಶಾತ್ ಆಗಬೇಕಿದ್ದ ಅನಾಹುತ ತಪ್ಪಿದಂತಾಗಿದೆ‌. ದಿನಕ್ಕೆ ಲಕ್ಷಾಂತರ ವಾಹನ ಓಡಾಡುವ ಅಶೋಕನಗರ ಸಂಚಾರ ಠಾಣಾ ವ್ಯಾಪ್ತಿಯ ಜಾನ್ಸನ್ ಮಾರ್ಕೆಟ್​ರಸ್ತೆಯಲ್ಲಿ ಇಂದು ಏಕಾಏಕಿ ಎರಡು ಅಡಿ ಆಳದ ರಸ್ತೆ ಗುಂಡಿ ತೆರೆದಿದೆ. ಇದೇ ದಾರಿಯಲ್ಲಿ ಬರುತ್ತಿದ್ದ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಮಾಹಿತಿ ಹಿನ್ನೆಲೆ ಪೂರ್ವ ವಿಭಾಗದ ಡಿಸಿಪಿ ಕಲಾ ಕೃಷ್ಣಮೂರ್ತಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ‌. ಏಕಾಏಕಿ ರಸ್ತೆ ಗುಂಡಿ ಉದ್ಬವಿಸಿದ್ದರಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು, ಸಂಚಾರ ನಿಯಂತ್ರಣಕ್ಕಾಗಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಆಡುಗೋಡಿಯಿಂದ ಶಿವಾಜಿನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ‌. ಸುರಂಗ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ರಸ್ತೆ ಮದ್ಯಭಾಗದಲ್ಲಿ ಮಣ್ಣು ಸಡಿಲವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಟ್ರಾಫಿಕ್ ಪೊಲೀಸರು ರಸ್ತೆಯ ಎರಡು ಭಾಗಗಳ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.

ಬಿಎಂಆರ್‌ಸಿಎಲ್ ಅಧಿಕಾರಿಗಳ ಪ್ರತಿಕ್ರಿಯೆ: ಸಂಜೆಯ ವೇಳೆ ಸ್ಥಳಕ್ಕೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ಹಿರಿಯ ಎಂಜಿನಿಯರ್‌ಗಳು, ಪೂರ್ವ ಸಂಚಾರ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಬಿಎಂಆರ್‌ಸಿಎಲ್ ಎಂಡಿ ಅಂಜುಮ್ ಪರ್ವೇಜ್, ನಾಲ್ಕು ದಿನಗಳ ಹಿಂದೆ ಸುರಂಗ ಕೊರೆಯುವ ಟಿಬಿಎಂ ಇದೇ ಜಾಗದಿಂದ ಹಾದು ಹೋಗಿದೆ. ಟಿಬಿಎಂ ಹೋದ ಸ್ಥಳದಲ್ಲಿ ಕಾಂಕ್ರಿಟ್ ಪಿಲ್ಲರ್ ಕೂಡ ಅಳವಡಿಕೆ ಮಾಡಲಾಗಿದೆ. ಆದರೂ ಹೇಗೆ ಕುಸಿತ ಉಂಟಾಯಿತು ಎಂಬುದರ ಬಗ್ಗೆ ಹಿರಿಯ ಎಂಜಿನಿಯರ್‌ಗಳಿಂದ ತಪಾಸಣೆ ಮಾಡಿಸಲಾಗುವುದು. ಜನತೆ ಆತಂಕಪಡುವ ಅಗತ್ಯವಿಲ್ಲ. ಗುಂಡಿ ಬಿದ್ದ ಸ್ಥಳವನ್ನು ಕಾಂಕ್ರಿಟ್ ಹಾಕಿ ಮುಚ್ಚಲಾಗಿದೆ ಎಂದು ತಿಳಿಸಿದರು.

ಮಂಗಳವಾರ ಸಂಭವಿಸಿದ್ದ ದುರಂತ ಘಟನೆ: ಬೈಕ್​ನಲ್ಲಿ ಮಕ್ಕಳನ್ನು ಶಿಶು ವಿಹಾರಕ್ಕೆ ಬಿಡಲು ತೆರಳುತ್ತಿದ್ದವರ ಮೇಲೆ ಬೆಂಗಳೂರು ನಮ್ಮ ಮೆಟ್ರೋ ರೈಲು ಯೋಜನೆಯ ನಿರ್ಮಾಣ ಹಂತದ ಕಬ್ಬಿಣದ ಪಿಲ್ಲರ್​ ಕುಸಿದು ಬಿದ್ದಿತ್ತು. ಕಳೆದ ಮಂಗಳವಾರ ಬೆಳಗ್ಗೆ 10:30 ಸುಮಾರಿಗೆ ಈ ದುರ್ಘಟನೆ ಸಂಭವಿಸಿತ್ತು. ಈ ಘಟನೆಯಲ್ಲಿ ತಾಯಿ - ಮಗ ಸಾವನ್ನಪ್ಪಿದ್ದು, ತಂದೆ ಮಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಅಧಿಕಾರಿಗಳ ವಿಚಾರಣೆ: ನಾಗವಾರ ಬಳಿ ನಡೆಯುತ್ತಿದ್ದ ಮೆಟ್ರೋ ಯೋಜನೆಯ ಜವಾಬ್ದಾರಿ ಹೊಂದಿದ್ದ ಪ್ರಭಾವಿ ಉಪ ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಸೈಟ್ ಇಂಜನೀಯರ್ ಅಮಾನತು ಮಾಡಿ ಬಿಎಂಆರ್​ಸಿಎಲ್​ ಮಹತ್ವದ ಕ್ರಮ ಕೈಗೊಂಡಿತ್ತು. ಇಂದು ಪೊಲೀಸರು ಸಂಬಂಧಪಟ್ಟ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದ್ದರು.

ಪೊಲೀಸ್​ ನೋಟಿಸ್​ ಬಂದಾಕ್ಷಣ ಐವರು ಬಿಎಂಆರ್​ಸಿಎಲ್​ ಅಧಿಕಾರಿಗಳು ಗೋವಿಂದಪುರ, ಬಾಣಸವಾಡಿ, ಕೆಜಿ ಹಳ್ಳಿ ಸೇರಿದಂತೆ‌ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ನಾಗಾರ್ಜುನಾ ಕನ್​ಸ್ಟ್ರಕ್ಷನ್ ಕಂಪನಿಯ ಪ್ರಭಾಕರ್, ವಿಕಾಸ್ ಸಿಂಗ್, ಲಕ್ಷ್ಮೀಪತಿ, ಬಿಎಂಆರ್​ಸಿಎಲ್ ಡೆಪ್ಯೂಟಿ ಚೀಫ್ ವೆಂಕಟೇಶ್ ಶೆಟ್ಟಿ, ಎಕ್ಸಿಕ್ಯೂಟಿವ್ ಎಂಜಿನಿಯರ್ ಮಹೇಶ್ ಬೆಂಡೆಕರಿ ಎಂಬುವವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಮನವೊಲಿಕೆ ಬಳಿಕ ಮೃತದೇಹ ಸ್ವೀಕರಿಸಿದ ಕುಟುಂಬಸ್ಥರು: ಘಟನೆಯಲ್ಲಿ ಸಾವನ್ನಪ್ಪಿದ ತೇಜಸ್ವಿನಿ ಅವರ ಶವ ಸ್ವೀಕರಿಸುವ ಮುನ್ನ ಆಕೆಯ ಪತಿ ಹಾಗೂ ಪೋಷಕರು ಪ್ರತಿಭಟಿಸಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರಿಸುವ ಮುನ್ನ ತೇಜಸ್ವಿನಿ ತಂದೆ ಹಾಗೂ ಪತಿ ತಮ್ಮ ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೇ ಸಂಬಂಧಪಟ್ಟ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಅಂತಿಮವಾಗಿ ಪೊಲೀಸರ ಮನವೊಲಿಕೆ ಬಳಿಕ ತೇಜಸ್ವಿನಿ ಕುಟುಂಬಸ್ಥರು ಮೃತದೇಹವನ್ನು ಪಡೆದಿದ್ದರು.

ತಾಯಿ - ಮಗುವಿನ ಅಂತ್ಯಕ್ರಿಯೆ: ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಮೃತಪಟ್ಟ ತಾಯಿ ಮತ್ತು ಮಗುವಿನ ಅಂತ್ಯಕ್ರಿಯೆಯನ್ನು ದಾವಣಗೆರೆಯಲ್ಲಿ ನಡೆಸಲಾಗಿದೆ. ತೇಜಸ್ವಿನಿ ಅವರ ಮೃತದೇಹದ ಅಂತ್ಯಕ್ರಿಯೆಯನ್ನು ನಗರದ ವೈಕುಂಠ ಏಕಧಾಮದಲ್ಲಿ ನಡೆಸಲಾಗಿದ್ದು, ಮಗು ವಿಹಾನ್ ಶಾಮನೂರು ರಸ್ತೆಯಲ್ಲಿನ ಬಾಟಲ್ ಬಿಲ್ಡಿಂಗ್ ಹಿಂಭಾಗದ ರುದ್ರಭೂಮಿಯಲ್ಲಿ ಭಾವಸಾರ ಕ್ಷತ್ರೀಯ ಸಮಾಜದ ವಿಧಿವಿಧಾನದಂತೆ ನಡೆಸಲಾಗಿದೆ. ಈ ವೇಳೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಓದಿ: ಮೆಟ್ರೋ ಪಿಲ್ಲರ್ ದುರಂತ: ದಾವಣಗೆರೆಯಲ್ಲಿ ನೆರವೇರಿದ ತಾಯಿ, ಮಗುವಿನ ಅಂತ್ಯಕ್ರಿಯೆ

Last Updated :Jan 12, 2023, 9:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.