ತಿಂಗಳ ಹಿಂದೆ ಮದುವೆಯಾಗಿದ್ದ ಹೆಂಡತಿಗಾಗಿ ಕದ್ದ ಮಾಲು ಸಮೇತ ಪೊಲೀಸರಿಗೆ ಶರಣಾದ ಕಳ್ಳ

author img

By

Published : Sep 22, 2022, 2:46 PM IST

Thief surrendered to police  Thief surrendered to police with the stolen golds  Thief surrendered to police for his wife  ಕದ್ದ ಮಾಲು ಸಮೇತ ಪೊಲೀಸ್ರಿಗೆ ಶರಣಾದ ಕಳ್ಳ  ತಿಂಗಳ ಹಿಂದೆ ಮದುವೆಯಾಗಿದ್ದ ಆರೋಪಿ  ಮನೆಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್  ಬೆಂಗಳೂರಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ

ತಿಂಗಳ ಹಿಂದೆ ಮದುವೆಯಾಗಿದ್ದ ಆರೋಪಿಯೊಬ್ಬ ತನ್ನ ಹೆಂಡತಿಗಾಗಿ ಕದ್ದ ಮಾಲು ಸಮೇತ ಪೊಲೀಸರಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಮನೆಕಳ್ಳತನ ಮಾಡಿ ನೇಪಾಳಕ್ಕೆ ಎಸ್ಕೇಪ್ ಆಗಿದ್ದವನು ಹೆಂಡತಿಗಾಗಿ ತಾನೇ ಬಂದು ಪೊಲೀಸರು ಮುಂದೆ ಶರಣಾಗಿದ್ದಾನೆ‌. ಕಳ್ಳತನ ಕೇಸ್​ನಲ್ಲಿ ಆರೋಪಿ ಹೆಂಡತಿಯನ್ನ ಪೊಲೀಸರು ವಿಚಾರಣೆಗೆ ಕರೆದಿದ್ದೆ ತಡ ಕದ್ದ ವಸ್ತುಗಳ ಸಮೇತ ಬಂದು ಶರಣಾಗಿದ್ದಾನೆ. ಈ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಆರೋಪಿಗಳು ನೇಪಾಳದಿಂದ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು. ಸುರೇಂದ್ರ @ ಗೂರ್ಖಾ, ಗಣೇಶ್ @ ಕಡ್ಕ ಬಂಧಿತ ಆರೋಪಿಗಳಾಗಿದ್ದಾರೆ. 12 ವರ್ಷದಿಂದ ಬೆಂಗಳೂರಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡೇ ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡಿ ಎಸ್ಕೇಪ್ ಆಗ್ತಿದ್ರು. ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಇದೇ ರೀತಿ ಕಳ್ಳತನ ಮಾಡಿದ್ದರು.

ಹೆಂಡತಿಗಾಗಿ ಕದ್ದ ಮಾಲು ಸಮೇತ ಪೊಲೀಸ್ರಿಗೆ ಶರಣಾದ ಕಳ್ಳ

ಮನೆಯ ಅಕ್ಕ ಪಕ್ಕದ ಸಿಸಿಟಿವಿ ಪರಿಶೀಲನೆ ನಡೆಸಿದ್ದ ಚಂದ್ರಾಲೇಔಟ್ ಪೊಲೀಸರಿಗೆ ಸ್ಕೂಟಿ ನೀಡಿದ ಸುಳಿವಿನ ಮೇರಗೆ ಆರೋಪಿಗಳ ಗುರುತು ಪತ್ತೆಮಾಡಿದ್ರು. ಸ್ಕೂಟಿಯನ್ನು ಬೆನ್ನಟ್ಟಿದ್ದ ಪೊಲೀಸರಿಗೆ ಗಣೇಶನ ಮನೆ ವಿಳಾಸ ಪತ್ತೆಯಾಗಿತ್ತು. ಆದರೆ ಅದಾಗ್ಲೆ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ರು. ಈ ವೇಳೆ ಒಂದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಆರೋಪಿ ಗಣೇಶ್ ಹೆಂಡತಿಯ ವಿಚಾರಣೆ ಮಾಡಿದ್ದರು. ವಿಚಾರಣೆ ಮಾಡ್ತಿರೋದು ತಿಳಿಯುತ್ತಿದ್ದಂತೆ ಓಡೋಡಿ ಪೊಲೀಸರ ಬಳಿ ಬಂದಿದ್ದನು. ಬಳಿಕ ಗಣೇಶ ತಾನೂ ಕದ್ದ 450 ಗ್ರಾಂ ಚಿನ್ನಾಭರಣವನ್ನ ಪೊಲೀಸರಿಗೆ ಒಪ್ಪಿಸಿ ಶರಣಾಗಿದ್ದಾನೆ.

ಓದಿ: ಕಳ್ಳನನ್ನು ರೈಲಿನ ಕಿಟಕಿ ಹೊರಗಿಂದ 15 ಕಿಮೀ ನೇತಾಡಿಸಿದ ಪ್ರಯಾಣಿಕರು..! ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.