ETV Bharat / state

ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

author img

By

Published : Aug 18, 2022, 7:22 PM IST

ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಕೋಣನಕುಂಟೆಯ ಚುಂಚನಕಟ್ಟೆಯ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಿದ್ದ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕುಟುಂಬದ ಮೂವರ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಬೆಂಗಳೂರು: ರಾಜಧಾನಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ‍ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆಗೆ ಶರಣಾದವರು.

ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಮಹೇಶ್ ಮೂಲತಃ ಮಳವಳ್ಳಿಯವರಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ‌ ಮಹೇಶ್ ಮನೆಯ ರೂಮ್​​ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮತ್ತೊಂದು ರೂಮ್​​ನಲ್ಲಿ ಜ್ಯೋತಿ ಹಾಗೂ ಮಗ ನಂದೀಶ್ ವಿಷ ಸೇವಿಸಿದ್ದಾರೆ. ಸಾವಿಗೂ ಮುನ್ನ ಅನಾರೋಗ್ಯದಿಂದ ಈ ರೀತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿರುವ ಡೆತ್​​ನೋಟ್ ದೊರೆತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಧ್ಯಮ ವರ್ಗದ ಕುಟುಂಬಸ್ಥರಾಗಿರುವ ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಈ ಹಿಂದೆ ಹರ್ನಿಯಾ ಆಪರೇಷನ್ ಮಾಡಿಸಿಕೊಂಡಿದ್ದರು. ಹೊಟ್ಟೆನೋವು ತೀವ್ರವಾಗಿದ್ದರಿಂದ ಇಂದು ಆಸ್ಪತ್ರೆಗೆ ತೆರಳಿದ್ದರು. ವೈದ್ಯಕೀಯ ತಪಾಸಣೆ ವೇಳೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ.

ಘಟನೆ ಸಂಬಂಧ ಮೂವರ ಮೃತದೇಹಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬಾಸ್ಕೆಟ್​ ಬಾಲ್​​​ ಆಟಗಾರ್ತಿ ಮೇಲೆ ಅತ್ಯಾಚಾರ ಯತ್ನ: ಛಾವಣಿಯಿಂದ ಕೆಳಗೆ ತಳ್ಳಿ ದುಷ್ಕೃತ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.