ETV Bharat / state

ಕೈ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕೆ ಮೂವರು ದಲಿತರ ಪೈಪೋಟಿ

author img

By

Published : Aug 10, 2019, 6:21 PM IST

ಎಐಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲುಂಡ ಬಳಿಕ ರಾಹುಲ್​ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆಯುತ್ತಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ.

ಬೆಂಗಳೂರು: ರಾಹುಲ್​ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಮುಂದಿನ ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬುದರ ಕುರಿತು ಬಹಳ ಕುತೂಹಲ ಕೆರಳಿಸಿತ್ತು.

To whom is the National President of Congress
ಎಐಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ?

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ದೊಡ್ಡ ಮಟ್ಟದ ಸೋಲು ಎದುರಿಸಬೇಕಾಯಿತು. ಇದರ ಸಂಪೂರ್ಣ ಹೊಣೆ ಹೊತ್ತ ಅಂದಿನ ಅಧ್ಯಕ್ಷ ರಾಹುಲ್​ ಗಾಂಧಿ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ದೆಹಲಿಯಲ್ಲಿ ಶನಿವಾರ ನಡೆಯುತ್ತಿರುವ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಯಾರಿಗೆ ಸಿಗಲಿದೆ ಎಂಬುದು ಅಂತಿಮವಾಗಲಿದ್ದು. ಮೂವರು ದಲಿತರು ಪೈಪೋಟಿ ನಡೆಸಿದ್ದಾರೆ ಎನ್ನಲಾಗಿದೆ.

ಸಂಜೆಯೊಳಗೆ ಕೈ ರಾಷ್ಟ್ರೀಯ ಅಧ್ಯಕ್ಷ ಯಾರು ಎಂಬುದು ತಿಳಿಯಲಿದೆ. ಸದ್ಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಆಯ್ಕೆಗೆ ಮುಂಚೂಣಿಯಲ್ಲಿರುವ ನಾಯಕರೆಂದರೆ, ಮಹಾರಾಷ್ಟ್ರ ಮೂಲದ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಕರ್ನಾಟಕದ ಒಬ್ಬರು ಮುಂಚೂಣಿಯಲ್ಲಿದ್ದಾರೆ. ನಾಯಕರಾದ ಸುಶೀಲ್ ಕುಮಾರ್ ಶಿಂಧೆ, ಮುಕುಲ್ ವಾಸ್ನಿಕ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಹೆಸರು ಕೇಳಿ ಬರುತ್ತಿದೆ.


ಸುಶೀಲ್ ಕುಮಾರ್ ಶಿಂಧೆ ಹೆಸರು ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದ್ದು. ಯುವಕರಿಗೆ ಆದ್ಯತೆ ನೀಡಬೇಕು ಎಂದಾದರೆ ಮುಕುಲ್ ವಾಸ್ನಿಕ್ ಆಯ್ಕೆ ಆಗಬಹುದು. ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಮಾನ ಅವಕಾಶವಿದ್ದು. ಪಕ್ಷದಲ್ಲಿ ಹಿರಿತನ ಹಾಗೂ ಕಳೆದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರಾಗಿ ಕಾರ್ಯನಿರ್ವಹಿಸಿದ ಅನುಭವ ಅವರಿಗಿದೆ.

ನಾಲ್ವರು ಕಾರ್ಯಾಧ್ಯಕ್ಷರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಜತೆ ನಾಲ್ವರು ಕಾರ್ಯಾಧ್ಯಕ್ಷರನ್ನ ಆಯ್ಕೆ ಮಾಡಲು ನಿರ್ಧರಿಸಲಾಗಿದ್ದು. ಈ ಸ್ಥಾನಕ್ಕೆ ಕರ್ನಾಟಕದವರಾದ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ಹೆಸರು ಕೇಳಿ ಬರುತ್ತಿದೆ. ರಾಜ್ಯವಾರು ಹಾಗೂ ಪ್ರಾದೇಶಿಕವಾರು ಈ ಸ್ಥಾನದ ಹಂಚಿಕೆ ಆಗಲಿದೆ. ಕರ್ನಾಟಕದಿಂದ ಸುದೀರ್ಘ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಹಾಗೂ ಡಿಸಿಎಂ ಆಗಿ ಕಳೆದ ಮೈತ್ರಿ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದರು.

ಶನಿವಾರ ಸಂಜೆಯೊಳಗೆ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ.

Intro:newsBody:ಕೈ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕೆ ಮೂವರು ದಲಿತರಲ್ಲಿ ತೀವ್ರ ಪೈಪೋಟಿ

ಬೆಂಗಳೂರು: ದಿಲ್ಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಯಲ್ಲಿ ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಯಾರಿಗೆ ಸಿಗಲಿದೆ ಎಂಬುದು ಅಂತಿಮವಾಗಲಿದೆ. ಮೂವರು ದಲಿತರು ರೇಸ್ ನಲ್ಲಿ ತೀವ್ರ ಪೈಪೋಟಿ ನಡೆಸಿದ್ದಾರೆ.
ಈ ಮೂವರಲ್ಲಿ ಒಬ್ಬ ದಲಿತ ನಾಯಕನಿಗೆ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಒಲಿಯುವುದು ಬಹುತೇಕ ಖಚಿತವಾಗಿದ್ದು, ಸಂಜೆಯೊಳಗೆ ಕೈ ರಾಷ್ಟ್ರೀಯ ಅಧ್ಯಕ್ಷ ಯಾರು ಎಂಬುದು ಅಂತಿಮವಾಗಲಿದೆ. ಬೆಳಗ್ಗೆಯೇ ದಿಲ್ಲಿಯಲ್ಲಿ ಸಭೆ ಆರಂಭವಾಗಿದ್ದು ವಿವಿಧ ವಿಚಾರಗಳ ಚರ್ಚೆ ನಡೆಯುತ್ತಿದೆ. ಸಭೆಯಲ್ಲಿ ಎಲ್ಲಕ್ಕಿಂತ ಅತ್ಯಂತ ಪ್ರಮುಖವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಯಾರಾಗಲಿದ್ದಾರೆ ಎನ್ನುವುದೇ ಕುತೂಹಲದ ವಿಚಾರವಾಗಿದೆ.
ರಾಹುಲ್ ನಿರ್ಧಾರ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು, ಅವರ ಮನವೊಲಿಸಿ ಮತ್ತೆ ಅವರನ್ನೇ ಮುಂದುವರಿಸುವ ಶತಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡಿದ್ದರು. ಆದರೆ ಅದು ಫಲ ಕೊಟ್ಟಿರಲಿಲ್ಲ. ತಮ್ಮ ರಾಜೀನಾಮೆ ವಾಪಸ್ ಪಡೆಯಲು ರಾಹುಲ್ ಗಾಂಧಿ ಒಪ್ಪದ ಹಿನ್ನೆಲೆ ಅನಿವಾರ್ಯವಾಗಿ ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಮುಂದಾಗಿದ್ದಾರೆ.
ತಮ್ಮ ನಾಯಕತ್ವದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎದುರಾದ ಭಾರಿ ಹಿನ್ನಡೆಯಿಂದ ಬೇಸರಗೊಂಡಿದ್ದ ರಾಹುಲ್ ಗಾಂಧಿ ತಮ್ಮ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನವನ್ನು ರಾಹುಲ್ ಮರಳಿ ವಹಿಸಿಕೊಳ್ಳಲು ಒಪ್ಪದ ಹಿನ್ನೆಲೆ, ಅವರ ಸೋದರಿ ಪ್ರಿಯಾಂಕಾ ವಾದ್ರಾ ಅಧ್ಯಕ್ಷರಾಗುತ್ತಾರೆ ಎಂಬ ಮಾತು ಕೂಡ ಕೇಳಿಬಂದಿತ್ತು. ಆದರೆ ಹಲವು ವಿಧದ ಲೆಕ್ಕಾಚಾರದ ಮೇಲೆ ದಲಿತ ನಾಯಕರಿಗೆ ಪಟ್ಟ ಕಟ್ಟುವ ನಿರ್ಧಾರವನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಕೈಗೊಂಡಿದ್ದಾರೆ.
ರೇಸ್ ನಲ್ಲಿ ಯಾರ್ಯಾರು?
ಸದ್ಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೆ ಮುಂಚೂಣಿಯಲ್ಲಿರುವ ನಾಯಕರೆಂದರೆ, ಮಹಾರಾಷ್ಟ್ರ ಮೂಲದ ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ, ಹಾಗೂ ಇದೇ ರಾಜ್ಯದ ಮತ್ತೋರ್ವ ನಾಯಕ ಮುಕುಲ್ ವಾಸ್ನಿಕ್ ಹಾಗೂ ಇವರ ಜೊತೆ ಕನ್ನಡಿಗರಾದ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ್ ಖರ್ಗೆ ಹೆಸರು ಕೇಳಿಬರುತ್ತಿದೆ.
ಈ ಮೂವರ ಪೈಕಿ ಗಾಂಧಿ ಕುಟುಂಬಕ್ಕೆ ನಿಕಟವಾಗಿರುವ ಮುಖಂಡರ ಹೆಸರು ಅಂತಿಮವಾಗಲಿದೆ, ಎಲ್ಲಾ ನಿಟ್ಟಿನಲ್ಲಿಯೂ ಸುಶೀಲ್ ಕುಮಾರ್ ಶಿಂಧೆ ಹೆಸರು ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ಚಿಂತನೆ ನಡೆದರೆ ಮುಕುಲ್ ವಾಸ್ನಿಕ್ ಆಯ್ಕೆ ಆಗಬಹುದು. ಇವರ ಜೊತೆ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಮಾನ ಅವಕಾಶವಿದ್ದು ಪಕ್ಷದಲ್ಲಿ ಹಿರಿತನ ಹಾಗೂ ಕಳೆದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ. ಹಿಂದಿ ಭಾಷೆಯಲ್ಲಿ ಉತ್ತಮ ಹಿಡಿತ ಹೊಂದಿರುವ ಇವರು ಆಯ್ಕೆಯಾದರೂ ಅಚ್ಚರಿಯಿಲ್ಲ.
ಬಹುತೇಕ ಶಿಂಧೆ ಆಯ್ಕೆ ಸಾಧ್ಯತೆ
ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಹೆಚ್ಚಿನ ಒಲವು ಹೊಂದಿರುವ ಹಾಗೂ ಗಾಂಧಿ ಕುಟುಂಬಕ್ಕೆ ನಿಕಟವರ್ತಿ ಎನಿಸಿಕೊಂಡಿರುವ ಹಿರಿಯ ಕಾಂಗ್ರೆಸ್ಸಿಗ ಸುಶೀಲ್ ಕುಮಾರ್ ಶಿಂಧೆ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದ್ದು ಕಡೆಯ ಕ್ಷಣದಲ್ಲಿ ಏನಾದರೂ ಬದಲಾವಣೆಯಾದರೆ ಇನ್ನಿಬ್ಬರಲ್ಲಿ ಯಾರಾದರೂ ಒಬ್ಬರು ಆಯ್ಕೆಯಾಗುವ ಸಾಧ್ಯತೆ ಇದೆ.
ನಾಲ್ವರು ಕಾರ್ಯಾಧ್ಯಕ್ಷರು?
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಜೊತೆ ನಾಲ್ವರು ಕಾರ್ಯಾಧ್ಯಕ್ಷರನ್ನ ಆಯ್ಕೆ ಮಾಡಲು ನಿರ್ಧರಿಸಲಾಗಿದ್ದು ಈ ಸ್ಥಾನಕ್ಕೆ ಕರ್ನಾಟಕದವರಾದ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಅವರ ಹೆಸರು ಕೂಡ ಕೇಳಿ ಬರುತ್ತಿದೆ. ರಾಜ್ಯವಾರು ಹಾಗೂ ಪ್ರಾದೇಶಿಕವಾರು ಈ ಸ್ಥಾನದ ಹಂಚಿಕೆ ಆಗಲಿದ್ದು ಕರ್ನಾಟಕದಿಂದ ಸುದೀರ್ಘ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಹಾಗೂ ಡಿಸಿಎಂ ಆಗಿ ಕಳೆದ ಮೈತ್ರಿ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದ ಆಧಾರದ ಜೊತೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿರುವ ಡಾ ಜಿ ಪರಮೇಶ್ವರ್ ಅವರ ಆಯ್ಕೆಯನ್ನು ಕೂಡ ಪರಿಗಣಿಸಲಾಗಿದೆ ಎಂಬ ಮಾತಿದೆ. ಮರಳಿ ಕೆಪಿಸಿಸಿ ಅಧ್ಯಕ್ಷರಾಗುವ ಇಲ್ಲವೇ ಪ್ರತಿಪಕ್ಷದ ನಾಯಕರಾಗುವ ಪ್ರಯತ್ನದಲ್ಲಿರುವ ಪರಮೇಶ್ವರ್ ಅವರಿಗೆ ಮತ್ತೊಮ್ಮೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಇಲ್ಲವೇ ಸಿದ್ದರಾಮಯ್ಯರಿಂದ ಪ್ರತಿಪಕ್ಷದ ನಾಯಕ ಸ್ಥಾನ ಕಸಿದುಕೊಂಡು ಪರಮೇಶ್ವರ್ ಗೆ ನೀಡುವ ಬದಲು ರಾಷ್ಟ್ರೀಯ ಸೇವೆಗೆ ಕರೆಸಿಕೊಳ್ಳುವ ನಿಟ್ಟಿನಲ್ಲಿಯೂ ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಇಂದು ಸಂಜೆಯೊಳಗೆ ಈ ಎಲ್ಲಾ ಕುತೂಹಲಗಳಿಗೆ ತೆರೆ ಬೀಳಲಿದ್ದು ಪಕ್ಷದ ರಾಷ್ಟ್ರೀಯ ನಾಯಕರು ಯಾರಾಗಲಿದ್ದಾರೆ ಹಾಗೂ ಕಾರ್ಯಾಧ್ಯಕ್ಷರಾಗಿ ಯಾರ್ಯಾರು ನೇಮಕಗೊಳ್ಳಲಿದ್ದಾರೆ ಎಂಬುದು ತಿಳಿದು ಬರಲಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.