ರಾಜ್ಯದಲ್ಲಿ ಚುರುಕುಗೊಂಡ ನೈರುತ್ಯ ಮುಂಗಾರು.. ಇಂದು, ನಾಳೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

author img

By

Published : Sep 21, 2021, 7:56 AM IST

ಮಳೆ

ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಪ್ರಸ್ತುತ ಮಳೆಯಾಗುವ ಯಾವ ಸೂಚನೆಯೂ ಇಲ್ಲ. ರಾಜ್ಯದ ಒಳನಾಡಿನಲ್ಲಿ ಮಾತ್ರ ಅಲ್ಲಲ್ಲಿ ಹೆಚ್ಚು ಮಳೆಯಾಗಬಹುದು. ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಸೋಮವಾರ ಗರಿಷ್ಠ 7 ಸೆ.ಮೀ ಮಳೆ ದಾಖಲಾಗಿದೆ. ಕೆಜಿಎಫ್ 6 ಸೆ.ಮೀ, ಮುಳಬಾಗಿಲು 6 ಸೆ.ಮೀ, ಬೆಂಗಳೂರು ನಗರ, ಬೆಂಗಳೂರು ಎಚ್‌ಎಎಲ್‌ನಲ್ಲಿ ತಲಾ 3 ಸೆ.ಮೀ, ಕೆ.ಆರ್.ಪೇಟೆ, ಕೋಲಾರದಲ್ಲಿ ತಲಾ 2 ಸೆ.ಮೀ, ಬೆಂಗಳೂರು ವಿಮಾನ ನಿಲ್ದಾಣ, ಮಾಲೂರಿನಲ್ಲಿ ತಲಾ 1 ಸೆ.ಮೀ ಮಳೆಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಭಾರೀ ಮಳೆ : ನೀರು ನುಗ್ಗಿ ವಾಹನ ಸಂಚಾರ ಅಸ್ತವ್ಯಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.