ETV Bharat / state

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ನೀರಿನ ಟ್ಯಾಂಕ್ ಕುಸಿದು ಮೂವರು ಸಾವು

author img

By

Published : Aug 3, 2023, 7:50 AM IST

Updated : Aug 3, 2023, 3:32 PM IST

ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್​ ಕುಸಿದು ಬಿದ್ದು ಮೂವರು ಮೃತಪಟ್ಟ ದುರ್ಘಟನೆ ಬೆಂಗಳೂರಿನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

two-died-after-a-water-tank-collapsed-from-building-in-bengaluru
ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವು

ಬೆಂಗಳೂರು : ನಾಲ್ಕು ಅಂತಸ್ತಿನ ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್​ ಕುಸಿದು ಬಿದ್ದು ಗ್ರಾಹಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ರಾಜಧಾನಿಯ ಶಿವಾಜಿನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬುಧವಾರ ರಾತ್ರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇಂದು ಮತ್ತೊಬ್ಬರು ಮೃತಪಟ್ಟಿದ್ದಾರೆ. ಅರುಳ್, ನಾಗೇಶ್ವರ ರಾವ್ ಮತ್ತು ಕಮಲ್ ಥಪಾ ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ವಾಟರ್ ಟ್ಯಾಂಕ್ (ಸಿಂಟ್ಯಾಕ್ಸ್) ಇತ್ತು. ಅದೇ ಕಟ್ಟಡದ ಕೆಳಗಡೆ ತಳ್ಳುವ ಗಾಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಇತ್ತು. ನೀರು ತುಂಬಿದ್ದ ಟ್ಯಾಂಕಿನಿಂದ ಕಟ್ಟಡದ ಗೋಡೆ ದುರ್ಬಲಗೊಂಡಿದೆ. ಆದ್ದರಿಂದ ಟ್ಯಾಂಕ್ ಜೊತೆಗೆ ಗೋಡೆಯೂ ನೆಲಕ್ಕೆ ಕುಸಿದು ಬಿದ್ದಿವೆ. ಪರಿಣಾಮ ಒಬ್ಬ ಗ್ರಾಹಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಶಿವಾಜಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದುರ್ಘಟನೆ ಬಗ್ಗೆ ಡಿಸಿಪಿ ಮಾಹಿತಿ: ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೂರ್ವ ವಿಭಾಗದ ಡಿಸಿಪಿ ಡಾ. ಭೀಮಾಶಂಕರ್ ಗುಳೇದ್ ಈ ಬಗ್ಗೆ ಪ್ರತಿಕ್ರಿಯಿಸಿ, 'ಬುಧವಾರ ರಾತ್ರಿ 10:30 ಗಂಟೆ ಸಮಯದಲ್ಲಿ ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಶಿವಾಜಿನಗರ ಬಸ್ ನಿಲ್ದಾಣದ ಬಳಿ ಇರುವ ಕಟ್ಟಡದ ಓವರ್ ಟ್ಯಾಂಕ್ ಕುಸಿತಗೊಂಡಿದೆ. ಪರಿಣಾಮ ಸಾವು-ನೋವುಗಳು ಸಂಭವಿಸಿವೆ. ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೇಲ್ನೋಟಕ್ಕೆ ಕಟ್ಟಡದ ಮೇಲಿನ ಓವರ್ ಟ್ಯಾಂಕ್ ನಿರ್ಮಾಣವು ಅವೈಜ್ಞಾನಿಕತೆಯಿಂದ ಕೂಡಿದೆ‌‌. ತಪ್ಪಿತಸ್ಥರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ‌' ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಮಳೆಗೆ ಕುಸಿದುಬಿತ್ತು ಶತಮಾನದ ಸರ್ಕಾರಿ ಶಾಲೆಯ ಮೇಲ್ಛಾವಣಿ

Last Updated : Aug 3, 2023, 3:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.