ETV Bharat / state

ಇನ್ಸ್‌ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್ ವಿಚಾರ: ಪೊಲೀಸ್ ಠಾಣೆ ಮೆಟ್ಟಿಲೇರಿದ ಉಮಾಪತಿ ಶ್ರೀನಿವಾಸ್ ಗೌಡ

author img

By ETV Bharat Karnataka Team

Published : Nov 27, 2023, 3:34 PM IST

Updated : Nov 27, 2023, 4:01 PM IST

Etv Bharatumapathy-srinivas-gowda-filed-a-complaint-over-inspector-transfer-audio-viral-case
ಇನ್ಸ್‌ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಉಮಾಪತಿ ಶ್ರೀನಿವಾಸ್ ಗೌಡ

ಇನ್ಸ್‌ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್ ಸಂಬಂಧ ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದು ಉಮಾಪತಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಉಮಾಪತಿ ಶ್ರೀನಿವಾಸ್ ಗೌಡ ಪ್ರತಿಕ್ರಿಯೆ

ಬೆಂಗಳೂರು: ವರ್ಗಾವಣೆಗೆ ಸಂಬಂಧಿಸಿದಂತೆ ವೈರಲ್​​ ಆಗಿದೆ ಎನ್ನಲಾದ ಆಡಿಯೋ ಬಗ್ಗೆ ಚಿತ್ರ ನಿರ್ಮಾಪಕ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಉಮಾಪತಿ ಶ್ರೀನಿವಾಸ್ ಗೌಡ ಪ್ರತಿಕ್ರಿಯಿಸಿದ್ದಾರೆ. ಹೆಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿ ಮಾತನಾಡಿರುವ ಅವರು, "ಈಗಾಗಲೇ ದೂರು ಕೊಟ್ಟಿದ್ದೇನೆ ಮತ್ತು ಮಾಧ್ಯಮಗಳಿಗೆ ಸ್ವಷ್ಟನೆ ನೀಡಿದ್ದೇನೆ. ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?: ಪೊಲೀಸ್​ ವರ್ಗಾವಣೆಗೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್ ಆಗಿ ಸಂಚಲನ ಸೃಷ್ಟಿಸಿದೆ. ಕಳೆದ ಚುನಾವಣೆಯಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸ್ಯಾಂಡಲ್​ವುಡ್ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಹಾಗೂ ಸಾಮಾಜಿಕ ಕಾರ್ಯಕರ್ತ ವಿಜಯ್ ಡೆನ್ನಿಸ್ ಎಂಬುವವರ ನಡುವೆ ನಡೆದಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರ ವರ್ಗಾವಣೆ ಕುರಿತ ಸಂಭಾಷಣೆಯ ಆಡಿಯೋವೊಂದು ಬಹಿರಂಗಗೊಂಡಿದೆ ಎಂದು ಸುದ್ದಿಯಾಗಿದೆ.

ಆಡಿಯೋದಲ್ಲಿರೋದೇನು? : ಉಮಾಪತಿ ಶ್ರೀನಿವಾಸ್ ಗೌಡ ಹಾಗೂ ಸಾಮಾಜಿಕ ಕಾರ್ಯಕರ್ತ ವಿಜಯ್ ಡೆನ್ನಿಸ್ ಎಂಬುವವರ ನಡುವೆ ನಡೆದಿರುವ ಫೋನ್ ಸಂಭಾಷಣೆ ಎನ್ನಲಾದ ಆಡಿಯೋದಲ್ಲಿ‌ ’’ತಮ್ಮ ಸಂಬಂಧಿ ಇನ್ಸ್‌ಪೆಕ್ಟರ್ ಓರ್ವರ ವರ್ಗಾವಣೆ ವಿಚಾರವನ್ನು ವಿಜಯ್ ಪ್ರಸ್ತಾಪಿಸಿದ್ದಾರೆ. ಅದೇ ಠಾಣೆಯಲ್ಲಿ ಉಳಿಯಲು ಇನ್ಸ್‌ಪೆಕ್ಟರ್ ಒಬ್ಬರು ಹಣ ನೀಡಿದ್ದು, ಈಗಾಗಲೇ ಅದನ್ನ ಹೋಮ್ ಮಿನಿಸ್ಟರ್​ಗೆ ತಲುಪಿಸಿರುವುದಾಗಿಯೂ' ಹಾಗೂ 'ನಾನು ಹೇಳಿದರೆ ನಮ್ಮ ಸರ್ಕಾರದಲ್ಲಿ ಕೆಲಸ ಆಗಿಯೇ ಆಗುತ್ತದೆ' ಎಂದು ಉಮಾಪತಿ ಮಾತನಾಡಿದ್ದಾರೆ ಎಂದು ವೈರಲ್​ ಆಗಿರುವ ಈ ಆಡಿಯೋದಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಜಯ್ ಡೆನ್ನಿಸ್ ಆರೋಪ ತಳ್ಳಿ ಹಾಕಿದ ಉಮಾಪತಿ: ವೈರಲ್ ಆಡಿಯೋದ ಕುರಿತು ಪ್ರತಿಕ್ರಿಯಿಸಿರುವ ಉಮಾಪತಿ ಶ್ರೀನಿವಾಸ್ ಗೌಡ, 'ವಿಜಯ್ ಡೆನ್ನಿಸ್ ತಮಗೆ ಹಳೇ ಪರಿಚಯ. ಇದೇ ಪರಿಚಯದ ಮೇಲೆ 25 ಲಕ್ಷ ರೂ ಖರ್ಚಿಗೆ ಹಣ ಕೇಳಿದ್ದರು. ಹಣ ನೀಡದಿದ್ದಕ್ಕೆ ಆಡಿಯೋ ಮಾರ್ಫಿಂಗ್ ಮಾಡಿದ್ದಾರೆ' ಎಂದು ಅವರು ದೂರಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ ಉಮಾಪತಿ: ಹೆಚ್ಎಸ್ಆರ್ ಲೇಔಟ್ ಠಾಣೆಗೆ ದೂರು ನೀಡಿ ಮಾತನಾಡಿದ ಅವರು, "ಈಗಾಗಲೇ ದೂರು ಕೊಟ್ಟಿದ್ದೇನೆ ಮತ್ತು ಮಾಧ್ಯಮಗಳಿಗೆ ಸ್ವಷ್ಟನೆ ನೀಡಿದ್ದೇನೆ. ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನನಗೆ ಧೈರ್ಯ ತುಂಬಿದ್ದಾರೆ. ಯಾರು ತಪ್ಪಿತಸ್ಥರಿದ್ದಾರೆ ಅವರು ವಿರುದ್ಧ ಕ್ರಮ ತೆಗೆದುಕೊಳ್ಳಲು ನಾನು ಹೋರಾಟ ಮಾಡುತ್ತೇನೆ. ಯಾವ ಸೆಕ್ಷನ್​ಗಳನ್ನು ಹಾಕಿದ್ದಾರೆ ಎಂದು ಎಫ್​ಐಆರ್​ ಆದ ಮೇಲೆ ಗೊತ್ತಾಗುತ್ತದೆ.​ ಡಿಸಿಪಿ ಮತ್ತು ನಗರ ಪೊಲೀಸ್ ಆಯುಕ್ತರು ಹಾಗೂ ಲೋಕಾಯುಕ್ತಕ್ಕೂ ಈ ಕುರಿತು ದೂರು ಕೊಡುತ್ತೇನೆ. ಯಾರು ಆ ಇನ್ಸ್‌ಪೆಕ್ಟರ್ ಎಂಬುದನ್ನು ಸಹ ಅವರು ಹೇಳಬೇಕಾಗಿದೆ" ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯವರು 9 ವರ್ಷಗಳಿಂದ ಸಿಬಿಐ, ಇಡಿ ಬಳಸಿಕೊಂಡು ರಾಜಕಾರಣ ಮಾಡ್ತಿದ್ದಾರೆ: ಎಂ.ಬಿ.ಪಾಟೀಲ್‌

Last Updated :Nov 27, 2023, 4:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.