ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐಎಎಸ್ ಅಧಿಕಾರಿ ರಂಗಪ್ಪ ಅವರನ್ನು ವಿಚಾರಣೆ ನಡೆಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆ ಕೇಳಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ರಂಗಪ್ಪ ಕೇವಲ 15 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ನಾನು ಆರ್ಒಗಳಿಗೆ ಯಾವುದೇ ಅನುಮತಿ ಕೊಟ್ಟಿಲ್ಲ. ನನಗೂ ಇದಕ್ಕೂ ಸಂಬಂಧ ಇಲ್ಲ ಎಂದಷ್ಟೆ ಹೇಳಿರುವ ರಂಗಪ್ಪ ಅವರ ಎದುರು ಕೆಲ ದಾಖಲೆಗಳನ್ನು ಇಟ್ಟು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ವಿಚಾರಣೆಗೆ ಗೈರಾದ ಐಎಎಸ್ ಅಧಿಕಾರಿ ಶ್ರೀನಿವಾಸ್ : ಐಎಎಸ್ ಅಧಿಕಾರಿ ಶ್ರೀನಿವಾಸ್ ಅವರು ವಿಚಾರಣೆಗೆ ಗೈರಾಗಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಾಗ ದಾಖಲೆ ಸಮೇತ ಬರುವಂತೆ ಸೂಚಿಸಲಾಗಿದೆ. ಇಂದಿನ ವಿಚಾರಣೆಗೆ ಶ್ರೀನಿವಾಸ್ ಅನಾರೋಗ್ಯದ ಹಿನ್ನೆಲೆ ಗೈರಾಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ : ಮತದಾರರ ಮಾಹಿತಿ ಕಳವು ಹಗರಣದಲ್ಲಿ ಮೋದಿ ಸರ್ಕಾರವೂ ಭಾಗಿಯಾಗಿದೆ: ಸುರ್ಜೇವಾಲ