ETV Bharat / state

ಕ್ರಿಸ್ಮಸ್‌ ಪ್ರಾರ್ಥನೆಗೆಂದು ಚರ್ಚ್‌ಗೆ ತೆರಳುತ್ತಿದ್ದ ಯುವಕ ಬೈಕ್​ ಅಪಘಾತದಲ್ಲಿ ಸಾವು

author img

By

Published : Dec 25, 2022, 1:11 PM IST

bike accident
ಬೈಕ್​ ಅಪಘಾತ

ವಿಧಾನಸೌಧ ಸಮೀಪ‌ದ ಗೋಪಾಲಗೌಡ ಜಂಕ್ಷನ್​ನಲ್ಲಿ ಇಂದು ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿರುವ ಫುಟ್ ಪಾತ್ ತಡೆಗೋಡೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಚರ್ಚ್‌ಗೆ ಪ್ರಾರ್ಥನೆ ಮಾಡಲು ತೆರಳುತ್ತಿದ್ದ ಯುವಕ ಮೃತಪಟ್ಟಿದ್ದಾನೆ.

ಬೆಂಗಳೂರು :ಕ್ರಿಸ್ಮಸ್ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಸ್ನೇಹಿತನೊಂದಿಗೆ ಚರ್ಚ್‌ನಲ್ಲಿ ಪ್ರಾರ್ಥನೆ ಮಾಡಲು ಬೈಕ್​ನಲ್ಲಿ ತೆರಳುತ್ತಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ವಿಧಾನಸೌಧ ಸಮೀಪ‌ ಗೋಪಾಲಗೌಡ ಜಂಕ್ಷನ್​ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಲೆಕ್ಸ್ (25) ಸಾವನ್ನಪ್ಪಿದ ಯುವಕ. ಆತನ ಸ್ನೇಹಿತ ಸತೀಶ್​ ಎಂಬಾತನ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ರಿಸ್ಮಸ್ ಸಡಗರದಲ್ಲಿದ್ದ ಅಲೆಕ್ಸ್ ತನ್ನ ಸ್ನೇಹಿತನ ಜೊತೆ ರಾಜಾಜಿನ ನಗರದಿಂದ ಶಿವಾಜಿನಗರದ ಸೆಂಟ್ ಪ್ಯಾಟ್ರಿಕ್ ಚರ್ಚ್‌ಗೆ ಪ್ರಾರ್ಥನೆಗೆ ತೆರಳುತ್ತಿದ್ದ. ವಿಧಾನಸೌಧ ಮಾರ್ಗದಲ್ಲಿ ತೆರಳುತ್ತಿದ್ದಾಗ ಫುಟ್‌​ಪಾತ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಅಲೆಕ್ಸ್ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

1.5 ಟನ್​ ಟೊಮೆಟೊದಲ್ಲಿ ಸಾಂಟಾ ಕ್ಲಾಸ್​ ವಿರಾಜಮಾನ: ಮರಳು ಕಲಾವಿದ ಸುದರ್ಶನ್ ಕೈಚಳಕ

ಹೊಸ ಮೆಡಿಕಲ್ ಕಾಲೇಜು ಕಟ್ಟಡದ ಕಾಂಕ್ರೀಟ್ ಕುಸಿತ: 8ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.