ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು; ಅಭಿಮಾನಿಗಳಿಂದ ದೇವಸ್ಥಾನದಲ್ಲಿ ಉರುಳು ಸೇವೆ

author img

By

Published : Sep 16, 2022, 6:24 PM IST

KN_BGM

ಶಾಸಕ ಆನಂದ ಮಾಮನಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮೃತ್ಯುಂಜಯ ಯಾಗ ಹೋಮಾ, ಉರುಳು ಸೇವೆ, ಮಾಡಿದ್ದಾರೆ.

ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.

ಆನಂದ ಮಾಮನಿ ಅಭಿಮಾನಿಗಳಿಂದ ಪೂಜೆ

ಕಳೆದ ಹಲವು ದಿನಗಳಿಂದ ಶಾಸಕ ಆನಂದ್ ಮಾಮನಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸದ್ಯ ಅವರು ಚೆನೈನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅವರ ಆರೋಗ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ ಆಸ್ಪತ್ರೆಯಿಂದಲೇ ಶಾಸಕ ವಿಡಿಯೋ ಕಾಲ್​ ಮಾಡಿ ನಾನು ಆರೋಗ್ಯವಾಗಿದ್ದೇನೆ. ಯಾವುದೇ ರೀತಿಯ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ಆದಷ್ಟು ಬೇಗ ಗುಣಮುಖನಾಗಿ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ.. ಬಳ್ಳಾರಿಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಸೇಬಿನ ಹಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.