ETV Bharat / state

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ

author img

By

Published : Dec 28, 2022, 12:29 PM IST

CM Basavaraj Bommai
ಸಿಎಂ ಬಸವರಾಜ ಬೊಮ್ಮಾಯಿ

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ - ಈಗಾಗಲೇ ನಿರ್ಮಾಣ ಹಂತದಲ್ಲಿರುವ 16 ಪೊಲೀಸ್ ಠಾಣೆಗಳು - ಡಿವೈಎಸ್​ಪಿಗಳಿಗೆ ಸ್ಕಾರ್ಪಿಯೋ ವಾಹನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ

ಬೆಳಗಾವಿ: ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಪೊಲೀಸ್ ‌ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.‌ ರಾಜ್ಯದಲ್ಲಿ 2,500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆಗಳು ನಿರ್ಮಾಣದ ಹಂತದಲ್ಲಿವೆ. ‌

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೋ ಖರೀದಿ ಮಾಡಲಾಗುತ್ತಿದೆ. ‌ಡಿವೈಎಸ್​ಪಿಗಳಿಗೆ ಸ್ಕಾರ್ಪಿಯೋ ವಾಹನಗಳನ್ನು ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: 'ಗಡಿ ಕನ್ನಡಿಗರ ರಕ್ಷಿಸಿ..' ಬೊಮ್ಮಾಯಿ ಕಾಲಿಗೆ ನಮಸ್ಕರಿಸಿ ಜತ್ತ ಕನ್ನಡಿಗರ ಮನವಿ

ಜನರೊಂದಿಗೆ ನಿಕಟ ಸಂಪರ್ಕ: ಕರ್ನಾಟಕ ಪೊಲೀಸ್ ಪಡೆಗೆ ಅಭಿನಂದನೆ ಸಲ್ಲಿಸಿದ ಅವರು, ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದರು. ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ.‌ ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು‌.‌ ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲ. ಇತ್ತೀಚೆಗೆ ವಿಧ್ವಂಸಕ ಕೃತ್ಯಗಳು ನಡೆಯುತ್ತಿದ್ದು, ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ದಕ್ಷತೆಯಿಂದ ನಮ್ಮ ಪೊಲೀಸರು ಕೆಲಸ ಮಾಡುತ್ತಿದ್ದಾರೆ‌. ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ‌. ಎಫ್​ಎಸ್​ಎಲ್ ರಿಪೋರ್ಟ್ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಹೆಚ್ಚು ಅನುಕೂಲ ಆಗುತ್ತದೆ ಎಂದರು.

ಇದನ್ನೂ ಓದಿ: ಶೀಘ್ರವೇ ವಿಶ್ವ ಕನ್ನಡ ಸಮ್ಮೇಳನ.. ರಾಜಕೀಯಕ್ಕಾಗಿ ಗಡಿ ಸಮಸ್ಯೆ ಸೃಷ್ಟಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಟಾಂಗ್​

ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾರಿಗೆ ಸೇವೆಯನ್ನು ಲಾಭದಾಯಕವಾಗಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.